Homeಮುಖಪುಟಪರಿಷತ್ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು- ಜೆಡಿಎಸ್‌ಗೆ ನಿರಾಸೆ

ಪರಿಷತ್ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು- ಜೆಡಿಎಸ್‌ಗೆ ನಿರಾಸೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ - ಸಿದ್ದರಾಮಯ್ಯ

- Advertisement -
- Advertisement -

4 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್‌ನ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಜೆಡಿಎಸ್ ಪಕ್ಷ ಒಂದನ್ನೂ ಗೆಲ್ಲದೆ ನಿರಾಸೆ ಅನುಭವಿಸಿದೆ.

ಚುನಾವಣೆಗೂ ಮೊದಲು ಬಿಜೆಪಿ ಎರಡು ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಹೊಂದಿತ್ತು. ಬಸವರಾಜ ಹೊರಟ್ಟಿಯವರು ಜೆಡಿಎಸ್ ತ್ಯಜಿಸಿ ಬಿಜೆಪಿಯಿಂದ ಮರು ಆಯ್ಕೆಯಾದರೆ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮುಂಚೆ ಗೆದ್ದಿದ್ದ ಜೆಡಿಎಸ್ ಸೋತು ಆ ಸ್ಥಾನ ಸಹ ಕಳೆದುಕೊಂಡಿದೆ. ಅಲ್ಲಿಗೆ ಬಿಜೆಪಿ ತನ್ನ ಎರಡು ಸ್ಥಾನ ಉಳಿಸಿಕೊಂಡರೆ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗಳಿಸಿಕೊಂಡಿದೆ.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ 12,205 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಮತ್ತು ಜೆಡಿಎಸ್ ಅಭ್ಯರ್ಥಿ ಎಚ್.ಕೆ ರಾಮು ಸೋಲು ಅನುಭವಿಸಿದ್ದಾರೆ.

ಕಣದಲ್ಲಿ ಒಟ್ಟು 19 ಸ್ಪರ್ಧಿಗಳು ಇದ್ದರು. ಠೇವಣಿ ಕಳೆದುಕೊಂಡ 13 ಮಂದಿಯನ್ನು ಎಲಿಮಿನೇಟ್ ಮಾಡಲಾಗಿದ್ದು, ಉಳಿದವರ ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಘೋಷಿಸಲಾಯಿತು.

ಇನ್ನೊಂದೆಡೆ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಅವರು 11,460 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ 6,405 ಮತಗಳಿಗೆ ತೃಪ್ತಿಪಟ್ಟುಕೊಂಡರು. ಹುಕ್ಕೇರಿ 5,045 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು.

ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರು 7500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಎರಡು ಸ್ಥಾನ ಮತ್ತು ಬಿಜೆಪಿ ಎರಡು ಸ್ಥಾನ ತನ್ನದಾಗಿಸಿಕೊಂಡಿವೆ.

ಫಲಿತಾಂಶದ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಈ ಫಲಿತಾಂಶ ನಾಡಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಚುನಾವಣೆ ನಡೆದ ನಾಲ್ಕೂ ಕ್ಷೇತ್ರಗಳಲ್ಲಿ ಈ ಹಿಂದೆ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿಯೂ ಗೆದ್ದಿರಲಿಲ್ಲ, ಆದರೆ ಈ ಬಾರಿ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಪಕ್ಷ ಯಶಸ್ವಿಯಾಗಿದೆ. ಪಕ್ಷದ ಗೆಲುವಿಗೆ ನಮ್ಮ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನ ಕಾರಣ. ಬಿಜೆಪಿ ಸರ್ಕಾರದ ಧರ್ಮರಾಜಕಾರಣ, ಕೋಮುವಾದ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳ ವಿರುದ್ಧ ನಾಡಿನ ಜನ ಜಾಗೃತರಾಗಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ” ಎಂದಿದ್ದಾರೆ.

ಇದನ್ನೂ ಓದಿ; ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...