Homeಮುಖಪುಟಪರಿಷತ್ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು- ಜೆಡಿಎಸ್‌ಗೆ ನಿರಾಸೆ

ಪರಿಷತ್ ಚುನಾವಣೆ: ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು- ಜೆಡಿಎಸ್‌ಗೆ ನಿರಾಸೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ - ಸಿದ್ದರಾಮಯ್ಯ

- Advertisement -
- Advertisement -

4 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್‌ನ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್, ಬಿಜೆಪಿ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಜೆಡಿಎಸ್ ಪಕ್ಷ ಒಂದನ್ನೂ ಗೆಲ್ಲದೆ ನಿರಾಸೆ ಅನುಭವಿಸಿದೆ.

ಚುನಾವಣೆಗೂ ಮೊದಲು ಬಿಜೆಪಿ ಎರಡು ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಹೊಂದಿತ್ತು. ಬಸವರಾಜ ಹೊರಟ್ಟಿಯವರು ಜೆಡಿಎಸ್ ತ್ಯಜಿಸಿ ಬಿಜೆಪಿಯಿಂದ ಮರು ಆಯ್ಕೆಯಾದರೆ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮುಂಚೆ ಗೆದ್ದಿದ್ದ ಜೆಡಿಎಸ್ ಸೋತು ಆ ಸ್ಥಾನ ಸಹ ಕಳೆದುಕೊಂಡಿದೆ. ಅಲ್ಲಿಗೆ ಬಿಜೆಪಿ ತನ್ನ ಎರಡು ಸ್ಥಾನ ಉಳಿಸಿಕೊಂಡರೆ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗಳಿಸಿಕೊಂಡಿದೆ.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ 12,205 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಮತ್ತು ಜೆಡಿಎಸ್ ಅಭ್ಯರ್ಥಿ ಎಚ್.ಕೆ ರಾಮು ಸೋಲು ಅನುಭವಿಸಿದ್ದಾರೆ.

ಕಣದಲ್ಲಿ ಒಟ್ಟು 19 ಸ್ಪರ್ಧಿಗಳು ಇದ್ದರು. ಠೇವಣಿ ಕಳೆದುಕೊಂಡ 13 ಮಂದಿಯನ್ನು ಎಲಿಮಿನೇಟ್ ಮಾಡಲಾಗಿದ್ದು, ಉಳಿದವರ ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಘೋಷಿಸಲಾಯಿತು.

ಇನ್ನೊಂದೆಡೆ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಅವರು 11,460 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ 6,405 ಮತಗಳಿಗೆ ತೃಪ್ತಿಪಟ್ಟುಕೊಂಡರು. ಹುಕ್ಕೇರಿ 5,045 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು.

ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರು 7500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಎರಡು ಸ್ಥಾನ ಮತ್ತು ಬಿಜೆಪಿ ಎರಡು ಸ್ಥಾನ ತನ್ನದಾಗಿಸಿಕೊಂಡಿವೆ.

ಫಲಿತಾಂಶದ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಈ ಫಲಿತಾಂಶ ನಾಡಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಚುನಾವಣೆ ನಡೆದ ನಾಲ್ಕೂ ಕ್ಷೇತ್ರಗಳಲ್ಲಿ ಈ ಹಿಂದೆ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿಯೂ ಗೆದ್ದಿರಲಿಲ್ಲ, ಆದರೆ ಈ ಬಾರಿ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಪಕ್ಷ ಯಶಸ್ವಿಯಾಗಿದೆ. ಪಕ್ಷದ ಗೆಲುವಿಗೆ ನಮ್ಮ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನ ಕಾರಣ. ಬಿಜೆಪಿ ಸರ್ಕಾರದ ಧರ್ಮರಾಜಕಾರಣ, ಕೋಮುವಾದ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳ ವಿರುದ್ಧ ನಾಡಿನ ಜನ ಜಾಗೃತರಾಗಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ” ಎಂದಿದ್ದಾರೆ.

ಇದನ್ನೂ ಓದಿ; ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...