Homeಕರ್ನಾಟಕವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

- Advertisement -
- Advertisement -

ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದು ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚು.ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್.ಬೋಸರಾಜ್, ಕೆ.ಗೋವಿಂದರಾಜ್, ಡಾ.ತೇಜಶ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿ ಕುಮಾರ್, ಎಸ್.ರುದ್ರೇಗೌಡ, ಎಚ್.ಹರೀಶ್ ಕುಮಾರ್, ಬಿ.ಎಂ.ಫಾರೂಕ್ ಅವರ ಅವಧಿ ಕೊನೆಗೊಳ್ಳಲಿದೆ. ಈ ಹಿನ್ನೆಲೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

-ಮೇ 27ರಂದು ಚುನಾವಣಾ ಅಧಿಸೂಚನೆ

-ಜೂ. 3ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ

-ಜೂ.4ರಂದು ನಾಮಪತ್ರ ಪರಿಶೀಲನೆ

-ಜೂ.6ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ

-ಜೂ. 13ರಂದು ಮತದಾನ

-ಜೂ.13ರ ಸಂಜೆ 5 ಗಂಟೆಗೆ ಮತ ಎಣಿಕೆ

ವಿಧಾನಸಭೆಯ ಬಲಾಬಲದ ಪ್ರಕಾರ, ಒಟ್ಟು 11 ಸ್ಥಾನಗಳಲ್ಲಿ ಏಳು ಕಾಂಗ್ರೆಸ್ ಪಾಲಾಗಲಿವೆ ಎಂದು ಅಂದಾಜಿಸಲಾಗಿದೆ. ಇನ್ನು ಬಿಜೆಪಿಗೆ ಮೂರು ಮತ್ತು ಜೆಡಿಎಸ್​ಗೆ ಒಂದು ಸ್ಥಾನ ದೊರಕಲಿದೆ, ಇನ್ನು ಜಗದೀಶ್ ಶೆಟ್ಟರ್ ಅವರ ಸ್ಥಾನ ಕಾಂಗ್ರೆಸ್​ ತೆಕ್ಕೆಗೆ ಹೋಗಲಿದೆ. ​

ಈ ಮೊದಲು ಕರ್ನಾಟಕ ವಿಧಾನ ಪರಿಷತ್ತಿನ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರ ಸೇರಿ ಒಟ್ಟು 6 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿತ್ತು, ಅದರಂತೆ ಜೂನ್ 3ರಂದು ಮತದಾನ ನಡೆಯಲಿದೆ. ಜೂನ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ.16 ಕೊ‌ನೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಮೇ.17ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ.

ಇದನ್ನು ಓದಿ: ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...