Homeಮುಖಪುಟಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

ಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭೆ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡೆದ ನಂತರ ಇಂದು ನಡೆಯುವ ವಿಧಾನಸಭೆಯಿಂದ ಪರಿಷತ್ ಆಯ್ಕೆಯಾಗುವ ಚುನಾವಣೆಯಲ್ಲಿ ಮತ್ತೊಮ್ಮೆ ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್ ನಡೆಯುತ್ತಿದೆ. 10 ಸ್ಥಾನಗಳಿಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ತೀವ್ರ ಕಸರತ್ತಿಗೆ ಕಾರಣವಾಗಿದೆ.

ಮಹಾವಿಕಾಸ್ ಅಘಾಡಿಯ ವತಿಯಿಂದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತಲಾ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮತ್ತೊಂದೆಡೆ ಬಿಜೆಪಿ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 11 ಜನರಲ್ಲಿ 9 ಅಭ್ಯರ್ಥಿಗಳು ಸುಲಭವಾಗಿ ಆಯ್ಕೆಯಾಗಲಿದ್ದು, ಉಳಿದ ಒಂದು ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಪೈಪೋಟಿ ನಡೆಯುತ್ತಿದೆ.

ಕಾಂಗ್ರೆಸ್‌ನ ಮುಂಬೈ ಅಧ್ಯಕ್ಷ ಭಾಯ್ ಜಗ್ಪಪ್ ಮತ್ತು ಬಿಜೆಪಿಯ ಪ್ರಸಾದ್ ಲಾಡ್ 10 ನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಆಯ್ಕೆಯಾಗಲು ತೀವ್ರ ಕಸರತ್ತು ನಡೆಸಿದ್ದಾರೆ.

ಇಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಲು ಪ್ರತಿ ಅಭ್ಯರ್ಥಿಯು ವಿಧಾನ ಸಭೆಯ 26 ಅಭ್ಯರ್ಥಿಗಳ ಮತ ಪಡೆಯಬೇಕು. ಮಹಾರಾಷ್ಟ್ರ ವಿಧಾನಸಭೆಯಲ್ಲಿ 29  ಪಕ್ಷೇತರ ಅಭ್ಯರ್ಥಿಗಳು ಇರುವುದರಿಂದ ಮತಗಳು ಹಂಚಿಹೋಗುವ ಸಾಧ್ಯತೆಯಿದ್ದು ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ.

106 ಸದಸ್ಯ ಬಲ ಹೊಂದಿರುವ ಬಿಜೆಪಿ 4 ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಆದರೆ 5ನೇ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷೇತರರು ಮತ್ತು ಇತರ ಪಕ್ಷಗಳ ಶಾಸಕರ ಮತಗಳ ಮೇಲೆ ಕಣ್ಣಿಟ್ಟಿದೆ. ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿಯೂ ಅದು ತನ್ನ ಮೂರನೇ ಅಭ್ಯರ್ಥಿಯನ್ನು ಹಾಗೆ ಗೆಲ್ಲಿಸಿಕೊಂಡ ಹುಮ್ಮಸ್ಸಿನಲ್ಲಿದೆ.

ಆಡಳಿತರೂಢ ಮಹಾವಿಕಾಸ್ ಅಘಾಡಿಯಲ್ಲಿ ಶಿವಸೇನೆ ಪಕ್ಷವು 55 ಶಾಸಕರನ್ನು ಹೊಂದಿದ್ದು ತನ್ನ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. ಆ ನಂತರವು ಹೆಚ್ಚುವರಿಯಾಗಿ 3 ಶಾಸಕರನ್ನು ಹೊಂದಿದೆ. ಎನ್‌ಸಿಪಿ ಸಹ 51 ಸದಸ್ಯ ಬಲವನ್ನು ಹೊಂದಿದ್ದು ಇನ್ನೊಂದು ಶಿವಸೇನೆಯ ಮತದೊಂದಿಗೆ ತನ್ನ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸ ಹೊಂದಿದೆ. ಆದರೆ ಕಾಂಗ್ರೆಸ್ ಕೇವಲ 44 ಸದಸ್ಯ ಬಲವನ್ನು ಹೊಂದಿದೆ. ಮೊದಲನೇ ಅಭ್ಯರ್ಥಿ ಸುಲಭವಾಗಿ ಜಯಸಿದರೆ ಎರಡನೇ ಅಭ್ಯರ್ಥಿಯ ಗೆಲುವಿಗಾಗಿ ಮೊದಲ ಪ್ರಶಾಸ್ತ್ಯದ 8 ಮತಗಳ ಕೊರತೆ ಬಿದ್ದಿದೆ. ಮಿತ್ರ ಪಕ್ಷ ಶಿವಸೇನೆಯ ಬಳಿ 1 ಹೆಚ್ಚುವರಿ ಮತವಿದ್ದರೆ ಇನ್ನೂ 7 ಮತಗಳನ್ನು ಪಕ್ಷೇತರರಿಂದ ನಿರೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...