Homeಮುಖಪುಟಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

ಮಹಾರಾಷ್ಟ್ರ ಪರಿಷತ್ ಚುನಾವಣೆ: ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭೆ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡೆದ ನಂತರ ಇಂದು ನಡೆಯುವ ವಿಧಾನಸಭೆಯಿಂದ ಪರಿಷತ್ ಆಯ್ಕೆಯಾಗುವ ಚುನಾವಣೆಯಲ್ಲಿ ಮತ್ತೊಮ್ಮೆ ಮಹಾವಿಕಾಸ್ ಅಘಾಡಿ ಮತ್ತು ಬಿಜೆಪಿ ನಡುವೆ ಮತ್ತೆ ಫೈಟ್ ನಡೆಯುತ್ತಿದೆ. 10 ಸ್ಥಾನಗಳಿಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ತೀವ್ರ ಕಸರತ್ತಿಗೆ ಕಾರಣವಾಗಿದೆ.

ಮಹಾವಿಕಾಸ್ ಅಘಾಡಿಯ ವತಿಯಿಂದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತಲಾ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮತ್ತೊಂದೆಡೆ ಬಿಜೆಪಿ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 11 ಜನರಲ್ಲಿ 9 ಅಭ್ಯರ್ಥಿಗಳು ಸುಲಭವಾಗಿ ಆಯ್ಕೆಯಾಗಲಿದ್ದು, ಉಳಿದ ಒಂದು ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಪೈಪೋಟಿ ನಡೆಯುತ್ತಿದೆ.

ಕಾಂಗ್ರೆಸ್‌ನ ಮುಂಬೈ ಅಧ್ಯಕ್ಷ ಭಾಯ್ ಜಗ್ಪಪ್ ಮತ್ತು ಬಿಜೆಪಿಯ ಪ್ರಸಾದ್ ಲಾಡ್ 10 ನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಆಯ್ಕೆಯಾಗಲು ತೀವ್ರ ಕಸರತ್ತು ನಡೆಸಿದ್ದಾರೆ.

ಇಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಲು ಪ್ರತಿ ಅಭ್ಯರ್ಥಿಯು ವಿಧಾನ ಸಭೆಯ 26 ಅಭ್ಯರ್ಥಿಗಳ ಮತ ಪಡೆಯಬೇಕು. ಮಹಾರಾಷ್ಟ್ರ ವಿಧಾನಸಭೆಯಲ್ಲಿ 29  ಪಕ್ಷೇತರ ಅಭ್ಯರ್ಥಿಗಳು ಇರುವುದರಿಂದ ಮತಗಳು ಹಂಚಿಹೋಗುವ ಸಾಧ್ಯತೆಯಿದ್ದು ನೇರಾ ನೇರಾ ಪೈಪೋಟಿ ಏರ್ಪಟ್ಟಿದೆ.

106 ಸದಸ್ಯ ಬಲ ಹೊಂದಿರುವ ಬಿಜೆಪಿ 4 ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಆದರೆ 5ನೇ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷೇತರರು ಮತ್ತು ಇತರ ಪಕ್ಷಗಳ ಶಾಸಕರ ಮತಗಳ ಮೇಲೆ ಕಣ್ಣಿಟ್ಟಿದೆ. ಇತ್ತೀಚಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿಯೂ ಅದು ತನ್ನ ಮೂರನೇ ಅಭ್ಯರ್ಥಿಯನ್ನು ಹಾಗೆ ಗೆಲ್ಲಿಸಿಕೊಂಡ ಹುಮ್ಮಸ್ಸಿನಲ್ಲಿದೆ.

ಆಡಳಿತರೂಢ ಮಹಾವಿಕಾಸ್ ಅಘಾಡಿಯಲ್ಲಿ ಶಿವಸೇನೆ ಪಕ್ಷವು 55 ಶಾಸಕರನ್ನು ಹೊಂದಿದ್ದು ತನ್ನ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. ಆ ನಂತರವು ಹೆಚ್ಚುವರಿಯಾಗಿ 3 ಶಾಸಕರನ್ನು ಹೊಂದಿದೆ. ಎನ್‌ಸಿಪಿ ಸಹ 51 ಸದಸ್ಯ ಬಲವನ್ನು ಹೊಂದಿದ್ದು ಇನ್ನೊಂದು ಶಿವಸೇನೆಯ ಮತದೊಂದಿಗೆ ತನ್ನ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸ ಹೊಂದಿದೆ. ಆದರೆ ಕಾಂಗ್ರೆಸ್ ಕೇವಲ 44 ಸದಸ್ಯ ಬಲವನ್ನು ಹೊಂದಿದೆ. ಮೊದಲನೇ ಅಭ್ಯರ್ಥಿ ಸುಲಭವಾಗಿ ಜಯಸಿದರೆ ಎರಡನೇ ಅಭ್ಯರ್ಥಿಯ ಗೆಲುವಿಗಾಗಿ ಮೊದಲ ಪ್ರಶಾಸ್ತ್ಯದ 8 ಮತಗಳ ಕೊರತೆ ಬಿದ್ದಿದೆ. ಮಿತ್ರ ಪಕ್ಷ ಶಿವಸೇನೆಯ ಬಳಿ 1 ಹೆಚ್ಚುವರಿ ಮತವಿದ್ದರೆ ಇನ್ನೂ 7 ಮತಗಳನ್ನು ಪಕ್ಷೇತರರಿಂದ ನಿರೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....