Homeಮುಖಪುಟವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಮರು ಮತ ಎಣಿಕೆಗೆ ಕಾಂಗ್ರೆಸ್ ಆಗ್ರಹಿಸಿದೆ.

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು ನಗರ: ಎಚ್.ಎಸ್ ಗೋಪಿನಾಥ್ ಗೆಲುವು

ಉತ್ತರ ಕನ್ನಡ: ಗಣಪತಿ ಉಳ್ವೇಕರ್ ಗೆಲುವು

ಕಲಬುರಗಿ: ಬಿಜೆಪಿಯ ಬಿ.ಜಿ ಪಾಟೀಲ್ ಗೆಲುವು

ಬಳ್ಳಾರಿ: ವೈಎಂ ಸತೀಶ್ ಗೆಲುವು

ಚಿಕ್ಕಮಗಳೂರು: ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 1: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಗೆಲುವು

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲವು ಸಾಧಿಸಿದ್ದಾರೆ.

ಧಾರವಾಡ 2: ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ.

ಚಿತ್ರದುರ್ಗ: ಕೆ.ಎಸ್ ನವೀನ್ ಮುನ್ನಡೆ

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 1: ಪಿ.ಎಚ್ ಪೂಜಾರ ಗೆಲುವು

ಕಾಂಗ್ರೆಸ್

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 2: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು

ಮೈಸೂರು ಚಾಮರಾಜನಗರ 1: ಡಾ.ಡಿ ತಿಮ್ಮಯ್ಯ ಮುನ್ನಡೆ

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.

ಧಾರವಾಡ 1: ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 2: ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು: ಆರ್ ರಾಜೇಂದ್ರ ಗೆಲುವು

ರಾಯಚೂರು: ಕಾಂಗ್ರೆಸ್ ಮುನ್ನಡೆ

ಜೆಡಿಎಸ್

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಾಮರಾಜನಗರ 2: ಜೆಡಿಎಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.

ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...