Homeಮುಖಪುಟವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಮರು ಮತ ಎಣಿಕೆಗೆ ಕಾಂಗ್ರೆಸ್ ಆಗ್ರಹಿಸಿದೆ.

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು ನಗರ: ಎಚ್.ಎಸ್ ಗೋಪಿನಾಥ್ ಗೆಲುವು

ಉತ್ತರ ಕನ್ನಡ: ಗಣಪತಿ ಉಳ್ವೇಕರ್ ಗೆಲುವು

ಕಲಬುರಗಿ: ಬಿಜೆಪಿಯ ಬಿ.ಜಿ ಪಾಟೀಲ್ ಗೆಲುವು

ಬಳ್ಳಾರಿ: ವೈಎಂ ಸತೀಶ್ ಗೆಲುವು

ಚಿಕ್ಕಮಗಳೂರು: ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 1: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಗೆಲುವು

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲವು ಸಾಧಿಸಿದ್ದಾರೆ.

ಧಾರವಾಡ 2: ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ.

ಚಿತ್ರದುರ್ಗ: ಕೆ.ಎಸ್ ನವೀನ್ ಮುನ್ನಡೆ

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 1: ಪಿ.ಎಚ್ ಪೂಜಾರ ಗೆಲುವು

ಕಾಂಗ್ರೆಸ್

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 2: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು

ಮೈಸೂರು ಚಾಮರಾಜನಗರ 1: ಡಾ.ಡಿ ತಿಮ್ಮಯ್ಯ ಮುನ್ನಡೆ

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.

ಧಾರವಾಡ 1: ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 2: ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು: ಆರ್ ರಾಜೇಂದ್ರ ಗೆಲುವು

ರಾಯಚೂರು: ಕಾಂಗ್ರೆಸ್ ಮುನ್ನಡೆ

ಜೆಡಿಎಸ್

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಾಮರಾಜನಗರ 2: ಜೆಡಿಎಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.

ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...