Homeಮುಖಪುಟವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಮರು ಮತ ಎಣಿಕೆಗೆ ಕಾಂಗ್ರೆಸ್ ಆಗ್ರಹಿಸಿದೆ.

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು ನಗರ: ಎಚ್.ಎಸ್ ಗೋಪಿನಾಥ್ ಗೆಲುವು

ಉತ್ತರ ಕನ್ನಡ: ಗಣಪತಿ ಉಳ್ವೇಕರ್ ಗೆಲುವು

ಕಲಬುರಗಿ: ಬಿಜೆಪಿಯ ಬಿ.ಜಿ ಪಾಟೀಲ್ ಗೆಲುವು

ಬಳ್ಳಾರಿ: ವೈಎಂ ಸತೀಶ್ ಗೆಲುವು

ಚಿಕ್ಕಮಗಳೂರು: ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 1: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಗೆಲುವು

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲವು ಸಾಧಿಸಿದ್ದಾರೆ.

ಧಾರವಾಡ 2: ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ.

ಚಿತ್ರದುರ್ಗ: ಕೆ.ಎಸ್ ನವೀನ್ ಮುನ್ನಡೆ

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 1: ಪಿ.ಎಚ್ ಪೂಜಾರ ಗೆಲುವು

ಕಾಂಗ್ರೆಸ್

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 2: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು

ಮೈಸೂರು ಚಾಮರಾಜನಗರ 1: ಡಾ.ಡಿ ತಿಮ್ಮಯ್ಯ ಮುನ್ನಡೆ

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.

ಧಾರವಾಡ 1: ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 2: ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು: ಆರ್ ರಾಜೇಂದ್ರ ಗೆಲುವು

ರಾಯಚೂರು: ಕಾಂಗ್ರೆಸ್ ಮುನ್ನಡೆ

ಜೆಡಿಎಸ್

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಾಮರಾಜನಗರ 2: ಜೆಡಿಎಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.

ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...