Homeಮುಖಪುಟವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ವಿಧಾನ ಪರಿಷತ್ ಫಲಿತಾಂಶ: ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ

ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಮರು ಮತ ಎಣಿಕೆಗೆ ಕಾಂಗ್ರೆಸ್ ಆಗ್ರಹಿಸಿದೆ.

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು ನಗರ: ಎಚ್.ಎಸ್ ಗೋಪಿನಾಥ್ ಗೆಲುವು

ಉತ್ತರ ಕನ್ನಡ: ಗಣಪತಿ ಉಳ್ವೇಕರ್ ಗೆಲುವು

ಕಲಬುರಗಿ: ಬಿಜೆಪಿಯ ಬಿ.ಜಿ ಪಾಟೀಲ್ ಗೆಲುವು

ಬಳ್ಳಾರಿ: ವೈಎಂ ಸತೀಶ್ ಗೆಲುವು

ಚಿಕ್ಕಮಗಳೂರು: ಬಿಜೆಪಿಯ ಪ್ರಾಣೇಶ್‌ರವರು 06 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 1: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಗೆಲುವು

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲವು ಸಾಧಿಸಿದ್ದಾರೆ.

ಧಾರವಾಡ 2: ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ.

ಚಿತ್ರದುರ್ಗ: ಕೆ.ಎಸ್ ನವೀನ್ ಮುನ್ನಡೆ

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪರವರು ಕಾಂಗ್ರೆಸ್ ಅಭ್ಯರ್ಥಿ ಎದುರು ಜಯ ಸಾಧಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 1: ಪಿ.ಎಚ್ ಪೂಜಾರ ಗೆಲುವು

ಕಾಂಗ್ರೆಸ್

ಗೆಲುವು ಕಂಡಿರುವ ಮತ್ತು ಮುನ್ನಡೆ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಬಿಜೆಪಿ ಎದುರು ಜಯಗಳಿಸಿದ್ದಾರೆ.

ವಿಜಯಪುರ-ಭಾಗಲಕೋಟೆ 2: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು

ಮೈಸೂರು ಚಾಮರಾಜನಗರ 1: ಡಾ.ಡಿ ತಿಮ್ಮಯ್ಯ ಮುನ್ನಡೆ

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.

ಧಾರವಾಡ 1: ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ 2: ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು: ಆರ್ ರಾಜೇಂದ್ರ ಗೆಲುವು

ರಾಯಚೂರು: ಕಾಂಗ್ರೆಸ್ ಮುನ್ನಡೆ

ಜೆಡಿಎಸ್

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಾಮರಾಜನಗರ 2: ಜೆಡಿಎಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75. ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ. ಉಳಿದ ಆರನೇ ಒಂದು ಭಾಗದಷ್ಟು ಸದಸ್ಯರನ್ನು ಪದವೀಧರರು ಮತ್ತು ಶಿಕ್ಷಕರು ಆಯ್ಕೆ ಮಾಡುತ್ತಾರೆ.

ಭಾರತದಲ್ಲಿ ಕೇವಲ ಆರು ರಾಜ್ಯಗಳು ಮಾತ್ರ ವಿಧಾನ ಪರಿಷತ್ ಹೊಂದಿವೆ. ಉಳಿದ ರಾಜ್ಯಗಳಲ್ಲಿ ವಿಧಾನ ಸಭೆ ಮಾತ್ರ ಇದೆ. ವಿಧಾನ ಪರಿಷತ್ ಹೊಂದಿರುವ ರಾಜ್ಯಗಳೆಂದರೆ ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...