Homeಮುಖಪುಟದಕ್ಷಿಣ ಪದವೀಧರ ಕ್ಷೇತ್ರ: ಎರಡನೇ ಪ್ರಾಶಸ್ತ್ಯದ ಮತಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ - ದಾಖಲೆಯತ್ತ ಹೆಜ್ಜೆ

ದಕ್ಷಿಣ ಪದವೀಧರ ಕ್ಷೇತ್ರ: ಎರಡನೇ ಪ್ರಾಶಸ್ತ್ಯದ ಮತಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ – ದಾಖಲೆಯತ್ತ ಹೆಜ್ಜೆ

- Advertisement -
- Advertisement -

ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರ ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆ ಕಾರ್ಯ ಎರಡನೇ ದಿನಕ್ಕೂ ಮುಂದುವರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಪ್ರಥಮ ಮತ್ತು ಎರಡನೇ ಪ್ರಾಶಸ್ತ್ಯದ ಮತಗಳಲ್ಲಿಯೂ ಮುನ್ನಡೆ ಸಾಧಿಸಿದ್ದು ಗೆಲುವಿನತ್ತ ಮುನ್ನಡೆದಿದ್ದಾರೆ. ಆ ಮೂಲಕ ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವಿನ ದಾಖಲೆ ಬರೆಯಲು ಸಜ್ಜಾಗಿದೆ.

ಕೋಟಾ ಪ್ರಕಾರ 46,093 ಮತಗಳನ್ನು ಪಡೆದ ಅಭ್ಯರ್ಥಿ ಪರಿಷತ್ ಸದಸ್ಯರಾಗಿ ಆಯ್ಕೆಯಾಗುತ್ತಾರೆ. ಆದರೆ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿ ಯಾರೊಬ್ಬರು ಅಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ 33,403 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ 26,983 ಮತಗಳನ್ನು ಮತ್ತು ಜೆಡಿಎಸ್ ಅಭ್ಯರ್ಥಿ ಎಚ್.ಕೆ ರಾಮು 17,399 ಮತಗಳನ್ನು ಪಡೆದಿದ್ದಾರೆ. ಹಾಗಾಗಿ ಕಾಂಗ್ರೆಸ್ 6,420 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಕಣದಲ್ಲಿ ಒಟ್ಟು 19 ಸ್ಪರ್ಧಿಗಳು ಇದ್ದರು. ಠೇವಣಿ ಕಳೆದುಕೊಂಡ 13 ಮಂದಿಯನ್ನು ಎಲಿಮಿನೇಟ್ ಮಾಡಲಾಗಿದ್ದು, ಉಳಿದವರ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ನಡೆಯುತ್ತಿದೆ. ಆ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಗಾಗಿ ಅವರು ಗೆಲುವು ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ. ಆ ಮೂಲಕ ಕಾಂಗ್ರೆಸ್ ಈ ಪದವೀಧರ ಕ್ಷೇತ್ರವನ್ನು ಮೊದಲ ಬಾರಿಗೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇನ್ನೊಂದೆಡೆ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ. ಅವರು 11,460 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ 6,405 ಮತಗಳಿಗೆ ತೃಪ್ತಿಪಟ್ಟುಕೊಂಡರು. ಹುಕ್ಕೇರಿ 5,045 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು.

ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರು 7500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಎರಡು ಸ್ಥಾನ ಮತ್ತು ಬಿಜೆಪಿ ಎರಡು ಸ್ಥಾನ ತನ್ನದಾಗಿಸಿಕೊಂಡಿವೆ.

ಇದನ್ನೂ ಓದಿ; ರಾಷ್ಟ್ರಪತಿ ಚುನಾವಣೆ: ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...