Homeಕರ್ನಾಟಕMLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್...

MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರಿದ್ದು, ಸಮಬಲದ ಆಖಾಡದಲ್ಲಿ ಕಾಂಗ್ರೆಸ್-ಬಿಜೆಪಿ ಘಟಾನುಘಟಿಗಳು ದಾಳಿ-ಪ್ರತಿದಾಳಿ ಬಿರುಸಾಗಿ ನಡೆಸಿದ್ದಾರೆ. ಕಾರವಾರ-ಅಂಕೋಲಾದಲ್ಲಿ ಕಾಂಗ್ರೆಸ್‌ನ ಪ್ರಚಾರ ಉಸ್ತವಾರಿ ಹೊತ್ತುಕೊಂಡಿರುವ ಮಾಜಿ ಶಾಸಕ ಸತೀಶ್ ಸೈಲ್ ಹೋದಲ್ಲಿ ಬಂದಲ್ಲಿ ಬಿಜೆಪಿಗೆ ಹಿಂದುತ್ವ ಮತ್ತು ಮೀನುಗಾರರ ಮೇಲೆ ಪ್ರೀತಿ ಇದ್ದಿದ್ದರೆ ಮೀನುಗಾರರ ಹುಡುಗ ಪರೇಶ್ ಮೇಸ್ತನ ತಂದೆಯನ್ನು ಎಮ್ಮೆಲ್ಸಿ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ.

ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಸಾವಿಗೀಡಾದ ಹೊನ್ನಾವರದ ಪರೇಶ್ ಮೇಸ್ತ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಗರು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗೆದ್ದು ಬಂದಿದ್ದಾರೆ. ಮಗನ ಸಾವಿನ ನೋವಿನಲ್ಲಿದ್ದ ಪರೇಶ್‌ನ ತಂದೆಯನ್ನು ಮನೆಯಲ್ಲಿ ಇರಲುಬಿಡದೆ ಕರಾವಳಿ ಉದ್ದಕ್ಕೆ ಓಡಾಡಿಸಿ ಪ್ರಚಾರಕ್ಕೆ ಬಳಸಿಕೊಂಡು ದೊಡ್ಡ ಲಾಭ ಮಾಡಿಕೊಂಡಿದ್ದಾರೆ. ಆದರೆ ಈಗ ದೊರವಿಟ್ಟಿದದ್ದಾರೆ. ಅಂದು ಕಾಂಗ್ರೆಸ್ ಸರಕಾರವಿತ್ತು. ಬಿಜೆಪಿಯವರು ಪರೇಶ್ ಪ್ರಕರಣ ಸಿಬಿಐಗೆ ಕೊಡುವಂತೆ ಹಠ ಹಿಡಿದಿದ್ದರು. ಸಿದ್ದರಾಮಯ್ಯ ಸರಕಾರ ತಕ್ಷಣ ಸಿಬಿಐಗೆ ಕೇಸ್ ವಹಿಸಿತ್ತು. ಈಗ ರಾಜ್ಯ-ರಾಷ್ಟ್ರ ಎರಡು ಕಡೆ ಬಿಜೆಪಿಯೇ ಅಧಿಕಾರದಲ್ಲಿದೆ. ಆದರೂ ಪರೇಶ್ ಸಾವಿಗೆ ಅವರಿಂದ ನ್ಯಾಯ ಕೊಡಿಸಲಾಗಿಲ್ಲ ಎಂದು ಸೈಲ್ ವಾಗ್ದಾಳಿ ನಡೆಸಿದ್ದಾರೆ.

ಪರೇಶ್ ತಂದೆಗೆ ಎಮ್ಮೆಲ್ಸಿ ಟಿಕೆಟ್ ಬಿಜೆಪಿ ಕೊಟ್ಟು ಋಣ ತೀರಿಸುವ ಪ್ರಯತ್ನ ಮಾಡಬಹುದಿತ್ತು. ಅಂದು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ದೇಶಪಾಂಡೆ ಪರೇಶ್ ಮನೆಗೆ ಹೋಗಿ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದರು; ಕೆಡಿಸಿಸಿ ಬ್ಯಾಂಕಲ್ಲಿ ಉದ್ಯೋಗ ಕೊಡುವುದಾಗಿ ಅದರ ಅಧ್ಯಕ್ಷರಾಗಿದ್ದ ಎಸ್.ಎಲ್.ಘೋಟನೇಕರ್ ಹೇಳಿದ್ದರು. ಆದರೆ ಪರೇಶ್ ಕುಟುಂಬದವರು ಅದನ್ನು ತಿರಸ್ಕರಿಸುವಂತೆ ಬಿಜೆಪಿಯವರು ಮಾಡಿದ್ದರು. ಬಿಜೆಪಿಗರು ಪರೇಶ್ ಪರಿವಾರವನ್ನು ಬಳಸಿಕೊಂಡು ದೂರ ಮಾಡಿದರಷ್ಟೇ ಎಂದು ಅವರು ದೂರಿದ್ದಾರೆ.

ಬಿಜೆಪಿಯವರಿಗೆ ಹಿಂದುತ್ವದ ಹೆಸರಲ್ಲಿ ರಾಜಕಾರಣ ಮಾಡುವುದು ಬಿಟ್ಟು ಬೇರೇನು ಗೊತ್ತಿಲ್ಲ. ಚುನಾವಣೆಗಾಗಿ ಹಿಂದುತ್ವ ಮಾಡುವುದನ್ನು ಬಿಟ್ಟು ಇನ್ನಾದರು ಸಮಾಜದ ಒಳಿತಿಗೆ ಕೆಲಸ ಮಾಡುವುದನ್ನು ಬಿಜೆಪಿಗರು ಕಲಿಯಲಿಯೆಂದು ಸತೀಶ್ ಸೈಲ್ ಹೇಳಿದ್ದಾರೆ.


ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...