Homeಕರ್ನಾಟಕಎಂಎಲ್‌ಸಿ ಚುನಾವಣೆ: ಮಹಿಳೆಯರ ವಿಚಾರದಲ್ಲಿ ಮಾಡಿದ ತಪ್ಪನ್ನು ಕಾಂಗ್ರೆಸ್‌ ಈಗಲಾದರೂ ತಿದ್ದಿಕೊಂಡೀತೇ?

ಎಂಎಲ್‌ಸಿ ಚುನಾವಣೆ: ಮಹಿಳೆಯರ ವಿಚಾರದಲ್ಲಿ ಮಾಡಿದ ತಪ್ಪನ್ನು ಕಾಂಗ್ರೆಸ್‌ ಈಗಲಾದರೂ ತಿದ್ದಿಕೊಂಡೀತೇ?

- Advertisement -
- Advertisement -

ಮೊದಲು ಈ ಕೆಳಗಿನ ಕೋಷ್ಟಕ ನೋಡಿ.

ಕ್ಷೇತ್ರ

ಟಿಕೆಟ್‌ ಕೇಳಿದ್ದ ಕಾಂಗ್ರೆಸ್ಸಿನ ಮಹಿಳಾ ನಾಯಕಿ

ಟಿಕೆಟ್‌ ಕೊಡಲಾಯಿತೇ?

ಅಂತಿಮ ಫಲಿತಾಂಶ

ಮತಗಳ ಅಂತರ

ಬೊಮ್ಮನಹಳ್ಳಿ

ಕವಿತಾ ರೆಡ್ಡಿ

ಇಲ್ಲ

ಕಾಂಗ್ರೆಸ್‌ ಸೋತಿತು

24215

ದಾಸರಹಳ್ಳಿ

ಡಾ.ನಾಗಲಕ್ಷ್ಮಿ

ಇಲ್ಲ

ಕಾಂಗ್ರೆಸ್‌ ಸೋತಿತು

47770

ಜೆಡಿಎಸ್ ಎರಡನೇ ಸ್ಥಾನ

ಬೆಂಗಳೂರು ದಕ್ಷಿಣ

ಸುಷ್ಮಾ ರಾಮಗೋಪಾಲ್

ಇಲ್ಲ

ಕಾಂಗ್ರೆಸ್‌ ಸೋತಿತು

49699

ರಾಜಾಜಿನಗರ

ಭವ್ಯ ನರಸಿಂಹಮೂರ್ತಿ/ ಪದ್ಮಾವತಿ

ಇಲ್ಲ

ಕಾಂಗ್ರೆಸ್‌ ಸೋತಿತು

8060

(ಕಡಿಮೆ ಅಂತರವೇ, ಆದರೆ ಇಲ್ಲಿ ಮತದಾನವೇ ಬಹಳ ಕಡಿಮೆ)

ಮಹದೇವಪುರ

ಕಮಲಾಕ್ಷಿ ರಾಜಣ್ಣ

ಇಲ್ಲ

ಕಾಂಗ್ರೆಸ್‌ ಸೋತಿತು

44501

ಬಸವಕಲ್ಯಾಣ

ಮಾಲಾ

ಇಲ್ಲ

ಕಾಂಗ್ರೆಸ್‌ ಸೋತಿತು

14415

ಹರಪನಹಳ್ಳಿ

ವೀಣಾ ಎಂ/ಲತಾ ಎಂ

ಇಲ್ಲ

ಕಾಂಗ್ರೆಸ್‌ ಸೋತಿತು

ಕಾಂಗ್ರೆಸ್‌ ಮೂರನೇ ಸ್ಥಾನಕ್ಕೆ. ಟಿಕೆಟ್‌ ಕೇಳಿದ್ದ ಲತಾ ಸ್ವತಂತ್ರ ಅಭ್ಯರ್ಥಿಯಾಗಿ 13845 ಮತಗಳಿಂದ ಗೆದ್ದರು

ತೇರದಾಳ

ಉಮಾಶ್ರೀ

ಇಲ್ಲ

ಕಾಂಗ್ರೆಸ್‌ ಸೋತಿತು

10745

ಚಿಕ್ಕಪೇಟೆ

ಗಂಗಾಂಬಿಕೆ

ಇಲ್ಲ

ಕಾಂಗ್ರೆಸ್‌ ಸೋತಿತು

ಈ ಕೆಳಗಿನ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ/ಪ.ಜಾತಿಗೆ ಸೇರಿದ ಹೆಸರು ಮಾಡಿದ್ದ ಪುರುಷರಿಗೆ ಕೊಡಲಾಯಿತು. ಅದೂ ಸರಿಯೇ ಆಗಿತ್ತು. ಇಲ್ಲೂ ಮಹಿಳಾ ಆಕಾಂಕ್ಷಿಗಳಿದ್ದರು ಎಂಬುದನ್ನು ದಾಖಲಿಸುವ ಸಲುವಾಗಿ ಸೇರಿಸಲಾಗಿದೆ.

ಮಂಗಳೂರು ದಕ್ಷಿಣ

ಶಾಲೆಟ್‌ ಪಿಂಟೋ

ಇಲ್ಲ

ಕಾಂಗ್ರೆಸ್‌ ಸೋತಿತು

23962

ಶಿಗ್ಗಾಂವ್‌

ರಾಜೇಶ್ವರಿ ಪಟೇಲ್

ಇಲ್ಲ

ಕಾಂಗ್ರೆಸ್‌ ಸೋತಿತು

35978

ಹೊಳಲ್ಕೆರೆ

ಸವಿತಾ ರಘು

ಇಲ್ಲ

ಕಾಂಗ್ರೆಸ್‌ ಸೋತಿತು

5682

ರಾಜ್ಯದ ಇನ್ನೂ ಎಷ್ಟೋ ಕ್ಷೇತ್ರಗಳಲ್ಲಿ ಮಹಿಳೆಯರು ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಕೇಳಿದ್ದಿರಬಹುದು. ಈ ಬರಹ ಬರೆಯುವ ಹೊತ್ತಿಗೆ, ನನ್ನಲ್ಲಿ ಅದರ ವಿವರಗಳು ಲಭ್ಯವಿಲ್ಲ ಅಷ್ಟೇ.

ಈಗ ವಿಚಾರಕ್ಕೆ ಬರೋಣ. ಚುನಾವಣೆಗಳು ಬಲಾಢ್ಯ ಜಾತಿಗಳ, ಹಣವಂತರ, ಗಂಡಸರ, ಬಹುಸಂಖ್ಯಾತ ಧರ್ಮದವರ ಅಖಾಡವಾಗುತ್ತಿದೆ. ಆದರೆ, ಚುನಾವಣೆಗಳಲ್ಲಿ ಮತ ಹಾಕುವವರಲ್ಲಿ ಹೆಚ್ಚಿನವರು ದುರ್ಬಲ ಜಾತಿಗಳವರು, ಬಡವರು. ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರು ಚುನಾವಣೆಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಎಂಬುದಕ್ಕೆ ಇತ್ತೀಚಿನ 2023ರ ವಿಧಾನಸಭಾ ಚುನಾವಣೆಯ ಅಂಕಿ-ಅಂಶ ಸಾಕಷ್ಟು ಸಾಕ್ಷಿ ಒದಗಿಸುತ್ತದೆ. ಆದರೆ, ಟಿಕೆಟ್‌ ಪಡೆದುಕೊಳ್ಳುವ ವಿಚಾರದಲ್ಲಿ ಮಾತ್ರ ಅವರಿಗೆ ಅವಕಾಶವಿರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಇರುವುದರಿಂದ ಬಚಾವ್‌ ಆಗಿದ್ದಾರೆಯೇ ಹೊರತು, ಇಲ್ಲವಾಗಿದ್ದರೆ ಅವರ ಪರಿಸ್ಥಿತಿಯೂ ಹೀಗೇ ಇರುತ್ತಿತ್ತು. ಕರ್ನಾಟಕದಲ್ಲಿ 3-4% ಇರುವ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಶಾಸಕರು 10 ಜನರಿದ್ದರೆ, 13%ಗೂ ಹೆಚ್ಚಿರುವ ಮುಸ್ಲಿಂ ಸಮುದಾಯಕ್ಕೆ ಸೇರಿದವರು 9 ಶಾಸಕರಿದ್ದಾರೆ. ಈ ವಿಚಾರ ಇನ್ನೊಮ್ಮೆ ಚರ್ಚಿಸೋಣ.

ಏಕೆಂದರೆ, ಅಧಿಕಾರದ ಸ್ಥಾನ ಪಡೆಯುವಲ್ಲಿ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ವಿಚಾರ ಚಿಂತಾಜನಕವಾಗಿದೆ. ಇದಕ್ಕೆ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಕೊಡುವ ಕಾರಣ, ʼಅವರು ಗೆಲ್ಲುವುದಿಲ್ಲʼ ಎಂಬುದಾಗಿದೆ. ಇದೇ ಮಾನದಂಡವನ್ನು ಮುಸ್ಲಿಮರಿಗೂ, ಹಿಂದುಳಿದ ಸಮುದಾಯಗಳಿಗೂ ಅನ್ವಯಿಸಲಾಗುತ್ತದೆ. ಮೀಸಲೇತರ ಕ್ಷೇತ್ರಗಳಲ್ಲಿ ಪ.ಜಾತಿ/ಪ.ಪಂಗಡಗಳಿಗೂ ಅನ್ವಯಿಸಲಾಗುತ್ತದೆ. ಆದರೆ, ಬಲಾಢ್ಯ ಜಾತಿಗಳಿಗೆ ಸೇರಿದವರು ಅಥವಾ ಗಂಡಸರೂ ಸಹಾ ಗೆಲ್ಲದೇ ಇರುವ ಕ್ಷೇತ್ರಗಳಲ್ಲಿ ಎಷ್ಟೇ ಚುನಾವಣೆಗಳು ನಡೆದರೂ ಅವರವರಿಗೇ ಟಿಕೆಟ್‌ ನೀಡಲಾಗುತ್ತದೆ. ಉದಾಹರಣೆಗೆ ಬೆಂಗಳೂರು ನಗರದ ಬಸವನಗುಡಿ ಕ್ಷೇತ್ರವನ್ನೇ ತೆಗೆದುಕೊಳ್ಳಿ. 2004ರಲ್ಲಿ ಅಲ್ಲಿ ಕೆ.ಚಂದ್ರಶೇಖರ್‌ ಅವರು ಒಮ್ಮೆ ಕಾಂಗ್ರೆಸ್ಸಿನಿಂದ ಗೆದ್ದುದನ್ನು ಬಿಟ್ಟರೆ, 1972ರ ನಂತರ ಅಲ್ಲಿ ಕಾಂಗ್ರೆಸ್‌ ಗೆದ್ದೇ ಇಲ್ಲ. 1972ರಲ್ಲಿ ಗೆದ್ದಿದ್ದು ಅಮೀರ್‌ ರಹಮತುಲ್ಲಾ ಖಾನ್‌ ಎಂಬ ಮುಸ್ಲಿಂ ಅಭ್ಯರ್ಥಿ. ಅದು ದೇವರಾಜ ಅರಸರ ವಿಶಿಷ್ಟ ಸಾಮಾಜಿಕ ಸಮೀಕರಣದ ಚುನಾವಣೆ ಎಂಬುದನ್ನೂ ನೆನಪಿನಲ್ಲಿಡಬೇಕು.

ಈ ಕ್ಷೇತ್ರವನ್ನು ಬ್ರಾಹ್ಮಣರ ಕ್ಷೇತ್ರ ಎಂದು ತಾವೇ ತೀರ್ಮಾನಿಸಿಕೊಂಡು (ಅದಕ್ಕೆ ಯಾವ ಸಮೀಕ್ಷೆಯ ಆಧಾರ ಇಲ್ಲದಿದ್ದರೂ), ಬಿಜೆಪಿಯಿಂದ ಸತತವಾಗಿ ಬ್ರಾಹ್ಮಣರು ಗೆಲ್ಲುತ್ತಿರುವುದರಿಂದ ತಾವೂ ಬ್ರಾಹ್ಮಣರಿಗೇ ಟಿಕೆಟ್‌ ಕೊಡಬೇಕೆಂದು ಕಾಂಗ್ರೆಸ್‌ ಪಕ್ಷ ತೀರ್ಮಾನಿಸುತ್ತದೆ. ಮುಸ್ಲಿಮರಷ್ಟೇ ಧ್ರುವೀಕರಣಗೊಂಡ ಇನ್ನೊಂದು ಸಮುದಾಯವಿದ್ದರೆ ಅದು ಬ್ರಾಹ್ಮಣರದ್ದು; ಮತ್ತು ಅದು ಬಿಜೆಪಿಯೆಡೆಗೆ ಧ್ರುವೀಕರಣಗೊಂಡಿದೆ. ಆದರೂ ಈ ಸಾರಿ ಅದೇ ಮಾನದಂಡದ ಮೇಲೆ ಟಿಕೆಟ್‌ ನೀಡಲಾಯಿತು.

ಇಂತಹ ಮಾನದಂಡಗಳಿಂದ ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾಗುವ ಸಮುದಾಯ ಮಹಿಳೆಯರದ್ದು. ಮೇಲಿನ ಕೋಷ್ಟಕದಲ್ಲಿ ಕಾಣಿಸಿರುವ ಹೆಸರುಗಳಲ್ಲಿ ಕೆಲವರು ಕುಟುಂಬದ ಹಿನ್ನೆಲೆಯ ಕಾರಣಕ್ಕೆ ರಾಜಕಾರಣದಲ್ಲಿರಬಹುದು. ಆದರೆ, ಎಲ್ಲರೂ ಹಾಗೆ ಅಲ್ಲ. ಉದಾಹರಣೆಗೆ ಕವಿತಾ ರೆಡ್ಡಿಯವರು ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ನಿರಂತರವಾಗಿ ಕಾಂಗ್ರೆಸ್‌ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಂದೆಯೂ ಮಾಡುತ್ತಾರೆ. ಆ ಕ್ಷೇತ್ರದಲ್ಲಿ- ಮತ್ತು ಮಹಿಳೆಯರಿಗೆ ಟಿಕೆಟ್‌ ನಿರಾಕರಿಸಿ ʼಹೊರಗಿನಿಂದ ಬಂದʼ ಪುರುಷರಿಗೆ ಟಿಕೆಟ್‌ ನೀಡಲಾದ ವಿವಿಧ ಕ್ಷೇತ್ರಗಳಲ್ಲಿ ಸೋತ ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತೆ ಅಲ್ಲೇ ನಿಂತು ಪಕ್ಷ ಕಟ್ಟುತ್ತಾರೆ ಎನ್ನುವುದರ ಬಗ್ಗೆ ಯಾರಿಗೂ ಖಾತರಿಯಿಲ್ಲ. ಬಹುಶಃ ಅವರು ಇನ್ನೆಲ್ಲೋ ಅಧಿಕಾರದ ಸ್ಥಾನಗಳನ್ನು ಹುಡುಕಿಕೊಂಡು ಹೋಗುತ್ತಾರೆ. ಇದೇ ಪಕ್ಷದಲ್ಲಿ ಅಥವಾ ಇನ್ನೊಂದು ಪಕ್ಷದಲ್ಲಿ. ಹೀಗಿದ್ದೂ, ಪಕ್ಷಕ್ಕಾಗಿ ನಿರಂತರ ಕೆಲಸ ಮಾಡಿದ ಮಹಿಳೆಯರಿಗೆ ಯಾವ ಕಾರಣಕ್ಕೆ ಟಿಕೆಟ್‌ ನಿರಾಕರಿಸಲಾಗುತ್ತದೆ? ಸಾಮಾನ್ಯವಾಗಿ ಕೊಡುವ ಕಾರಣ, ಈಗಾಗಲೇ ಹೇಳಿದಂತೆ, ಅವರು ಗೆಲ್ಲುವುದಿಲ್ಲ ಎಂಬುದು.

ಈಗ ಎರಡು ಪ್ರಶ್ನೆಗಳು ಉದ್ಭವಿಸುತ್ತವೆ. ಒಂದು, ಹಾಗಾದರೆ ಆ ಜಾಗಗಳಲ್ಲಿ ನೀವು ಟಿಕೆಟ್‌ ನೀಡಿದ ಪುರುಷರೂ ಗೆದ್ದಿಲ್ಲವಲ್ಲಾ? ಕೆಲವರಂತೂ ಭೀಕರವಾಗಿ ಸೋತಿದ್ದಾರೆ! ಎರಡನೆಯದು, ಮಹಿಳೆಯರು, ಮುಸ್ಲಿಮರು, ಶೋಷಿತ ಸಮುದಾಯಗಳವರು ಸ್ಪರ್ಧಿಸಿದರೆ ಅವರಿಗೆ ಉಳಿದವರು ಮತ ಹಾಕುವುದಿಲ್ಲ ಎನ್ನುವುದಾದರೆ, ಆ ಪಕ್ಷದ್ದೇ ಆದ ಒಂದು ವೋಟ್‌ ಬ್ಯಾಂಕ್‌ ಇಲ್ಲ ಎಂದಾಯಿತು! ಹಾಗಾದರೆ ಇಂತಹ ಪಕ್ಷಗಳು ಇಷ್ಟು ಸುದೀರ್ಘ ಕಾಲ ರಾಜಕಾರಣ ಮಾಡಿಕೊಂಡು ಬಂದು ಏನನ್ನು ಸಾಧಿಸಿದರು? ಇದು ಗಂಭೀರವಾಗಿ ಯೋಚಿಸಬೇಕಾದ ಸಂಗತಿ. ಇದೇ ಕಾರಣಕ್ಕೆ ಬಾಬಾ ಸಾಹೇಬರು ದಲಿತ ಸಮುದಾಯಕ್ಕೆ ಪ್ರತ್ಯೇಕ ಮತಕ್ಷೇತ್ರಗಳನ್ನು ಕೇಳಿದ್ದರು. ಅದು ಸಾಧ್ಯವಾಗಿದ್ದರೆ ನಂತರ ಉಳಿದೆಲ್ಲಾ ಸಮುದಾಯಗಳೂ, ಮಹಿಳೆಯರೂ ಸಹಾ ಪ್ರತ್ಯೇಕ ಮತಕ್ಷೇತ್ರಗಳನ್ನು ಕೇಳುತ್ತಿದ್ದರು ಎನಿಸುತ್ತದೆ. ಅದು ಮಾತ್ರವೇ ನ್ಯಾಯ ಒದಗಿಸಿಕೊಡುತ್ತಿತ್ತು!!

ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಮತ ಹಾಕಿದ್ದರಿಂದಲೂ ಕಾಂಗ್ರೆಸ್‌ ಗೆದ್ದು ಬಂದಿದೆ. ಇದ್ದುದರಲ್ಲಿ ವೈಜ್ಞಾನಿಕವಾಗಿ ನಡೆದ ಚುನಾವಣೋತ್ತರ ಸಮೀಕ್ಷೆಯಲ್ಲೂ ಇದು ಸ್ಪಷ್ಟವಾಗಿದೆ. ಮಹಿಳೆಯರು ಶೇ.11ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ. ಪುರುಷರು ಕೇವಲ ಶೇ.3ರಷ್ಟು ಹೆಚ್ಚಿನ ಪ್ರಮಾಣದಲ್ಲಿ (ಬಿಜೆಪಿಗೆ ಹಾಕಿದ್ದಕ್ಕಿಂತ) ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ. ಇದರ ಋಣವನ್ನು ತೀರಿಸಲು ಗ್ಯಾರಂಟಿಗಳನ್ನು, ಭಾಗ್ಯಗಳನ್ನು ನೀಡುತ್ತೇವೆಂದು ಕಾಂಗ್ರೆಸ್‌ ಪಕ್ಷ ಹೇಳಬಹುದು; ಹೌದು ಅದನ್ನು ನೀಡಲೇಬೇಕು. ಹಾಗೆಯೇ ಅಧಿಕಾರದಲ್ಲೂ ಪಾಲು ಕೊಡಬೇಕು. ಈಗೇನು ಮಾಡಬಹುದು?

ಈ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭ ಅವರಿಗೆ ನೆರವಾಗಬಹುದು. ಆರರಲ್ಲಿ ಮೂರು ಸ್ಥಾನಗಳನ್ನಾದರೂ ಮಹಿಳೆಯರಿಗೆ ನೀಡಿದರೆ, ಕಾಂಗ್ರೆಸ್ಸು ಸಾಮಾಜಿಕ ನ್ಯಾಯದ ವಿಚಾರದಲ್ಲಿ ದೃಢ ಹೆಜ್ಜೆಗಳನ್ನಿಡುತ್ತಿದೆ ಎಂದುಕೊಳ್ಳಬಹುದು.

ಇಂತಹ ಎಲ್ಲಾ ಪ್ರಶ್ನೆಗಳನ್ನು ನಮಗೇ ಏಕೆ ಕೇಳುತ್ತಾರೆ ಎಂದು ಕಾಂಗ್ರೆಸ್ಸಿನವರು ಕೇಳಬಹುದು. ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಿಗಬೇಕಾದ ಹಕ್ಕುಗಳಿಗೂ ಮತ್ತು ಬಿಜೆಪಿಗೂ ಯಾವುದೇ ಸಂಬಂಧವಿಲ್ಲವಾದ್ದರಿಂದ ಕಾಂಗ್ರೆಸ್ಸನ್ನು ಕೇಳಲಾಗುತ್ತದೆ. ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗುವುದು ಕಾಂಗ್ರೆಸ್ʼನಲ್ಲಿ ಸಾಧ್ಯವಿಲ್ಲವಾದರೆ, ಆಗ ಆಯ್ಕೆ ಬಿಜೆಪಿ ಅಥವಾ ಜೆಡಿಎಸ್‌ ಅಲ್ಲ. ಅದಕ್ಕೆ ಈ ಮೂರು ಪಕ್ಷಗಳನ್ನು ಹೊರತುಪಡಿಸಿದ ಬೇರೆ ಆಯ್ಕೆ ಮಾಡಿಕೊಳ್ಳುವುದೇ ಅನಿವಾರ್ಯ.

– ಡಾ. ಎಚ್. ವಿ. ವಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...