Homeಕರ್ನಾಟಕಘೋಟ್ನೇಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನಕ್ಕೆ ದಲಿತ ಸಂಘಟನೆಗಳ ಒತ್ತಾಯ

ಘೋಟ್ನೇಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನಕ್ಕೆ ದಲಿತ ಸಂಘಟನೆಗಳ ಒತ್ತಾಯ

- Advertisement -
- Advertisement -

ನಿವೃತ್ತಿ ಹೊಸ್ತಿಲಲ್ಲಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೋಟ್ನೇಕರ್ ತಮ್ಮ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉತ್ತರ ಕನ್ನಡ ಜಿಲ್ಲಾ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ಅವರನ್ನು ತಕ್ಷಣ ಬಂಧಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ಘೋಟ್ನೇಕರ್ ತವರೂರು ಹಳಿಯಾಳದ ದಲಿತ ಯುವಕ ವಿನೋದ್ ತೆಗ್ನಳ್ಳಿ ಮತ್ತು ಮೇಲ್ವರ್ಗದ ರಜಪೂತ್ ಜಾತಿಯ ಯುವತಿಯ ಪ್ರೇಮ ವಿವಾಹ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 11 ಜೂನ್ 2019 ರಂದು ಮಾತುಕತೆ ನಡೆಯುತ್ತಿದ್ದಾಗ ಏಕಾಏಕಿ ಠಾಣೆಗೆ ನುಗ್ಗಿದ್ದ ಘೋಟ್ನೇಕರ್ ಹುಡುಗಿ ಕಡೆಯವರ ಪರವಾಗಿ ನಿಂತು ದಲಿತರನ್ನು ಜಾತಿ ಅವಹೇಳನ ಮಾಡಿ ಬೈದಿದ್ದರೆಂದು ಆರೋಪಿಸಲಾಗಿತ್ತು. ದಲಿತರ ಮೇಲೆ ಎಗರಾಡಿ ಅಪಮಾನ ಮಾಡಿದ್ದರೆನ್ನಲಾಗಿತ್ತು.
ಈ ಕುರಿತು ಹನುಮಂತ ಛಲವಾದಿ ಎಂಬುವವರು ಘೋಟ್ನೇಕರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ್ದರು.

ತಮ್ಮ ಮೇಲೆ ಹಾಕಲಾಗಿರುವ ಎಫ್‌ಐಆರ್ ರದ್ದು ಗೊಳಿಸುವಂತೆ ಕೋರಿ ಘೋಟ್ನೇಕರ್ ಉಚ್ಛನ್ಯಾಯಾಲಯದ ಧಾರವಾಡದ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಆ ಅರ್ಜಿ ವಜಾ ಆಗಿತ್ತು. ಆದರೆ ಅಧಿಕಾರದ ಪ್ರಭಾವ ಬಳಸಿ ಬಂಧನದಿಂದ ತಪ್ಪಿಸಿ ಕೊಳ್ಳುತ್ತಿದ್ದಾರೆಂದು ದಲಿತ ಸಂಘಟನೆಗಳು ಆರೋಪಿಸುತ್ತಾ ಬಂದರೂ ಘೋಟ್ನೇಕರ್ ನಿರಾತಂಕವಾಗಿ ಓಡಾಡಿಕೊಂಡಿದ್ದರು.

ಬಂಧನದ ಭೀತಿಯಿಂದ ಸೇಷನ್ಸ್ ನ್ಯಾಯಾಲಯದಲ್ಲಿ ಘೋಟ್ನೇಕರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯೂ ಈಗ ವಜಾ ಆಗಿದ್ದು, ಘೋಟ್ನೇಕರ್‌ರವರನ್ನು ತಕ್ಷಣ ಬಂಧಿಸಬೇಕೆಂದು ಹಳಿಯಾಳದ ದಲಿತ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಬಂಧನವಾಗದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘಟನೆಗಳ ಒಕ್ಕೂಟದ ಕುಮಾರ ಬಸಪ್ಪಾ ಕಲಬಾವಿ, ಹನುಮಂತ ಛಲವಾದಿ, ರಾಯಪ್ಪ ಹೊಂಗಲ ಮುಂತಾದವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...