Homeಕರ್ನಾಟಕಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

- Advertisement -
- Advertisement -

2015ರ ಆಗಸ್ಟ್ 30ರಂದು ಧಾರಾವಾಡದ ತಮ್ಮ ಮನೆಯಲ್ಲಿ ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಬುರ್ಗಿಯವರ ಪುತ್ರಿ ಧಾರಾವಾಡ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಹಂತಕರನ್ನು ಗುರುತಿಸಿದ್ದಾರೆ. ಮಾರ್ಚ್ 17ರಂದು ಪ್ರಕರಣದ ವಿಚಾರಣೆ ನಡೆದಿದೆ.

“29 ವರ್ಷದ ಗಣೇಶ್ ಮಿಸ್ಕಿನ್ ಎಂಬ ವ್ಯಕ್ತಿಯು ನನ್ನ ತಂದೆಗೆ ಗುಂಡು ಹಾರಿಸಿದ” ಎಂದು ಗುರುತಿಸಿದ ನಂತರ ಕಲ್ಬುರ್ಗಿ ಅವರ ಪುತ್ರಿ ರೂಪದರ್ಶಿ ಕೆ. (49) ಕುಸಿದುಬಿದ್ದರು. ಮನೆಯ ಬಳಿ ಮೋಟಾರ್ ಸೈಕಲ್‌ನಲ್ಲಿ ಗಣೇಶ್‌ಗಾಗಿ ಕಾಯುತ್ತಿದ್ದ ವ್ಯಕ್ತಿ 29 ವರ್ಷದ ಪ್ರವೀಣ್ ಚತುರ್ ಎಂದು ಅವರು ತಿಳಿಸಿದ್ದಾರೆ.

ಸನಾತನ ಸಂಸ್ಥೆ ಮತ್ತು ಅದರ ಅಂಗಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯಂತಹ ಗುಂಪುಗಳ ತೀವ್ರಗಾಮಿ ಸದಸ್ಯರಿಂದ ರಚಿಸಲ್ಪಟ್ಟ ಬಲಪಂಥೀಯ ಉಗ್ರಗಾಮಿ ಹಿಂದುತ್ವ ಸಂಘಟನೆಯೊಂದಿಗೆ ಗಣೇಶ್ ಸಂಬಂಧ ಹೊಂದಿದ್ದಾನೆ. ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಇವನ ಸಂಬಂಧ ಹೊಂದಿದ್ದಾನೆ. ಚತುರ್ ಕೂಡ ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ. 2018 ರಲ್ಲಿ ಪದ್ಮಾವತ್ ಚಲನಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹಿಂಸಾಚಾರದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ ರಚಿಸಲಾಗಿದ್ದ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಮಿಸ್ಕಿನ್ ಮತ್ತು ಚತುರ್ ಅವರನ್ನು ಬಂಧಿಸಿದೆ. ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿ, ಮಹಾರಾಷ್ಟ್ರದ ಪ್ರಗತಿಪರ ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಅವರ ಹತ್ಯೆಯಲ್ಲೂ ಇವರು ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಕಲ್ಬುರ್ಗಿಯವರ ಹತ್ಯೆಯ ಸಮಯದಲ್ಲಿ ರೂಪದರ್ಶಿಯವರು ತಂದೆಯ ಮನೆಯಲ್ಲಿದ್ದರು. ಬೆಳಿಗ್ಗೆ 8.45ರ ಸುಮಾರಿಗೆ ಕಲ್ಬುರ್ಗಿಯವರು ಫೋನ್‌ ಕರೆಯಲ್ಲಿದ್ದಾಗ ಬಾಗಿಲು ತಟ್ಟಲಾಗಿತ್ತು ಎಂದು ನ್ಯಾಯಾಲಯಕ್ಕೆ ರೂಪದರ್ಶಿ ತಿಳಿಸಿದ್ದಾರೆ.

ರೂಪದರ್ಶಿಯವರ ತಾಯಿ ಉಮಾದೇವಿ ಅವರು ಬಾಗಿಲ ಬಳಿ ಹೋದಾಗ ಆ ಅಪರಿಚಿತರು, “ಸರ್ ಅನ್ನು ಭೇಟಿಯಾಗಬೇಕು” ಎಂದು ಹೇಳಿದರು. ಕಲ್ಬುರ್ಗಿಯವರು ಬಾಗಿಲ ಬಳಿ ಹೋದಾಗ, ಗುಂಡಿನ ಸದ್ದು ಬಂತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. “ನನ್ನ ತಂದೆ ಕುಸಿದುಬಿದ್ದರು ಮತ್ತು ಹೊರಗೆ ಕಾಯುತ್ತಿದ್ದ ಸವಾರನೊಂದಿಗೆ ಒಬ್ಬ ವ್ಯಕ್ತಿ ಮೋಟರ್‌ನತ್ತ ಜಿಗಿಯುವುದನ್ನು ನೋಡಿದೆ” ಎಂದು ರೂಪದರ್ಶಿ ಹೇಳಿಕೆ ನೀಡಿದ್ದಾರೆ.

ಕುಟುಂಬದವರು ಕಲ್ಬುರ್ಗಿ ಅವರನ್ನು ಹತ್ತಿರದ ಆಸ್ಪತ್ರೆಗೆ, ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಲ್ಬುರ್ಗಿ ಅವರ ಮಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಿದ ನಂತರ ಭಾವುಕರಾಗಿ ಅತ್ತಿದ್ದಾರೆ. ಇದನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದ ಗಮನಕ್ಕೆ ತಂದರು ಎಂದು ವಿಚಾರಣಾ ನ್ಯಾಯಾಲಯವು ದಾಖಲು ಮಾಡಿದೆ. ಮುಂದಿನ ತಿಂಗಳು ಪಾಟೀ ಸವಾಲನ್ನು ರೂಪದರ್ಶಿ ಎದುರಿಸಲಿದ್ದಾರೆ.

ಕಲ್ಬುರ್ಗಿ ಅವರ ಪತ್ನಿ ಉಮಾದೇವಿಯವರು 2019ರ ಆರಂಭದಲ್ಲಿ, ಪ್ರಕರಣದ ಸಾಕ್ಷ್ಯದ ಭಾಗವಾಗಿರುವ ಅಧಿಕೃತ ಗುರುತಿನ ಪರೇಡ್‌ನಲ್ಲಿ ಕೊಲೆಗಾರರನ್ನು ಗುರುತಿಸಿದ್ದರು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...