Homeಕರ್ನಾಟಕಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

- Advertisement -
- Advertisement -

2015ರ ಆಗಸ್ಟ್ 30ರಂದು ಧಾರಾವಾಡದ ತಮ್ಮ ಮನೆಯಲ್ಲಿ ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಬುರ್ಗಿಯವರ ಪುತ್ರಿ ಧಾರಾವಾಡ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಹಂತಕರನ್ನು ಗುರುತಿಸಿದ್ದಾರೆ. ಮಾರ್ಚ್ 17ರಂದು ಪ್ರಕರಣದ ವಿಚಾರಣೆ ನಡೆದಿದೆ.

“29 ವರ್ಷದ ಗಣೇಶ್ ಮಿಸ್ಕಿನ್ ಎಂಬ ವ್ಯಕ್ತಿಯು ನನ್ನ ತಂದೆಗೆ ಗುಂಡು ಹಾರಿಸಿದ” ಎಂದು ಗುರುತಿಸಿದ ನಂತರ ಕಲ್ಬುರ್ಗಿ ಅವರ ಪುತ್ರಿ ರೂಪದರ್ಶಿ ಕೆ. (49) ಕುಸಿದುಬಿದ್ದರು. ಮನೆಯ ಬಳಿ ಮೋಟಾರ್ ಸೈಕಲ್‌ನಲ್ಲಿ ಗಣೇಶ್‌ಗಾಗಿ ಕಾಯುತ್ತಿದ್ದ ವ್ಯಕ್ತಿ 29 ವರ್ಷದ ಪ್ರವೀಣ್ ಚತುರ್ ಎಂದು ಅವರು ತಿಳಿಸಿದ್ದಾರೆ.

ಸನಾತನ ಸಂಸ್ಥೆ ಮತ್ತು ಅದರ ಅಂಗಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯಂತಹ ಗುಂಪುಗಳ ತೀವ್ರಗಾಮಿ ಸದಸ್ಯರಿಂದ ರಚಿಸಲ್ಪಟ್ಟ ಬಲಪಂಥೀಯ ಉಗ್ರಗಾಮಿ ಹಿಂದುತ್ವ ಸಂಘಟನೆಯೊಂದಿಗೆ ಗಣೇಶ್ ಸಂಬಂಧ ಹೊಂದಿದ್ದಾನೆ. ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಇವನ ಸಂಬಂಧ ಹೊಂದಿದ್ದಾನೆ. ಚತುರ್ ಕೂಡ ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ. 2018 ರಲ್ಲಿ ಪದ್ಮಾವತ್ ಚಲನಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹಿಂಸಾಚಾರದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ ರಚಿಸಲಾಗಿದ್ದ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಮಿಸ್ಕಿನ್ ಮತ್ತು ಚತುರ್ ಅವರನ್ನು ಬಂಧಿಸಿದೆ. ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿ, ಮಹಾರಾಷ್ಟ್ರದ ಪ್ರಗತಿಪರ ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಅವರ ಹತ್ಯೆಯಲ್ಲೂ ಇವರು ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಕಲ್ಬುರ್ಗಿಯವರ ಹತ್ಯೆಯ ಸಮಯದಲ್ಲಿ ರೂಪದರ್ಶಿಯವರು ತಂದೆಯ ಮನೆಯಲ್ಲಿದ್ದರು. ಬೆಳಿಗ್ಗೆ 8.45ರ ಸುಮಾರಿಗೆ ಕಲ್ಬುರ್ಗಿಯವರು ಫೋನ್‌ ಕರೆಯಲ್ಲಿದ್ದಾಗ ಬಾಗಿಲು ತಟ್ಟಲಾಗಿತ್ತು ಎಂದು ನ್ಯಾಯಾಲಯಕ್ಕೆ ರೂಪದರ್ಶಿ ತಿಳಿಸಿದ್ದಾರೆ.

ರೂಪದರ್ಶಿಯವರ ತಾಯಿ ಉಮಾದೇವಿ ಅವರು ಬಾಗಿಲ ಬಳಿ ಹೋದಾಗ ಆ ಅಪರಿಚಿತರು, “ಸರ್ ಅನ್ನು ಭೇಟಿಯಾಗಬೇಕು” ಎಂದು ಹೇಳಿದರು. ಕಲ್ಬುರ್ಗಿಯವರು ಬಾಗಿಲ ಬಳಿ ಹೋದಾಗ, ಗುಂಡಿನ ಸದ್ದು ಬಂತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. “ನನ್ನ ತಂದೆ ಕುಸಿದುಬಿದ್ದರು ಮತ್ತು ಹೊರಗೆ ಕಾಯುತ್ತಿದ್ದ ಸವಾರನೊಂದಿಗೆ ಒಬ್ಬ ವ್ಯಕ್ತಿ ಮೋಟರ್‌ನತ್ತ ಜಿಗಿಯುವುದನ್ನು ನೋಡಿದೆ” ಎಂದು ರೂಪದರ್ಶಿ ಹೇಳಿಕೆ ನೀಡಿದ್ದಾರೆ.

ಕುಟುಂಬದವರು ಕಲ್ಬುರ್ಗಿ ಅವರನ್ನು ಹತ್ತಿರದ ಆಸ್ಪತ್ರೆಗೆ, ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಲ್ಬುರ್ಗಿ ಅವರ ಮಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಿದ ನಂತರ ಭಾವುಕರಾಗಿ ಅತ್ತಿದ್ದಾರೆ. ಇದನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದ ಗಮನಕ್ಕೆ ತಂದರು ಎಂದು ವಿಚಾರಣಾ ನ್ಯಾಯಾಲಯವು ದಾಖಲು ಮಾಡಿದೆ. ಮುಂದಿನ ತಿಂಗಳು ಪಾಟೀ ಸವಾಲನ್ನು ರೂಪದರ್ಶಿ ಎದುರಿಸಲಿದ್ದಾರೆ.

ಕಲ್ಬುರ್ಗಿ ಅವರ ಪತ್ನಿ ಉಮಾದೇವಿಯವರು 2019ರ ಆರಂಭದಲ್ಲಿ, ಪ್ರಕರಣದ ಸಾಕ್ಷ್ಯದ ಭಾಗವಾಗಿರುವ ಅಧಿಕೃತ ಗುರುತಿನ ಪರೇಡ್‌ನಲ್ಲಿ ಕೊಲೆಗಾರರನ್ನು ಗುರುತಿಸಿದ್ದರು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...