Homeಕರ್ನಾಟಕಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

- Advertisement -
- Advertisement -

2015ರ ಆಗಸ್ಟ್ 30ರಂದು ಧಾರಾವಾಡದ ತಮ್ಮ ಮನೆಯಲ್ಲಿ ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಬುರ್ಗಿಯವರ ಪುತ್ರಿ ಧಾರಾವಾಡ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಹಂತಕರನ್ನು ಗುರುತಿಸಿದ್ದಾರೆ. ಮಾರ್ಚ್ 17ರಂದು ಪ್ರಕರಣದ ವಿಚಾರಣೆ ನಡೆದಿದೆ.

“29 ವರ್ಷದ ಗಣೇಶ್ ಮಿಸ್ಕಿನ್ ಎಂಬ ವ್ಯಕ್ತಿಯು ನನ್ನ ತಂದೆಗೆ ಗುಂಡು ಹಾರಿಸಿದ” ಎಂದು ಗುರುತಿಸಿದ ನಂತರ ಕಲ್ಬುರ್ಗಿ ಅವರ ಪುತ್ರಿ ರೂಪದರ್ಶಿ ಕೆ. (49) ಕುಸಿದುಬಿದ್ದರು. ಮನೆಯ ಬಳಿ ಮೋಟಾರ್ ಸೈಕಲ್‌ನಲ್ಲಿ ಗಣೇಶ್‌ಗಾಗಿ ಕಾಯುತ್ತಿದ್ದ ವ್ಯಕ್ತಿ 29 ವರ್ಷದ ಪ್ರವೀಣ್ ಚತುರ್ ಎಂದು ಅವರು ತಿಳಿಸಿದ್ದಾರೆ.

ಸನಾತನ ಸಂಸ್ಥೆ ಮತ್ತು ಅದರ ಅಂಗಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯಂತಹ ಗುಂಪುಗಳ ತೀವ್ರಗಾಮಿ ಸದಸ್ಯರಿಂದ ರಚಿಸಲ್ಪಟ್ಟ ಬಲಪಂಥೀಯ ಉಗ್ರಗಾಮಿ ಹಿಂದುತ್ವ ಸಂಘಟನೆಯೊಂದಿಗೆ ಗಣೇಶ್ ಸಂಬಂಧ ಹೊಂದಿದ್ದಾನೆ. ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಇವನ ಸಂಬಂಧ ಹೊಂದಿದ್ದಾನೆ. ಚತುರ್ ಕೂಡ ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ. 2018 ರಲ್ಲಿ ಪದ್ಮಾವತ್ ಚಲನಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹಿಂಸಾಚಾರದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ ರಚಿಸಲಾಗಿದ್ದ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಮಿಸ್ಕಿನ್ ಮತ್ತು ಚತುರ್ ಅವರನ್ನು ಬಂಧಿಸಿದೆ. ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿ, ಮಹಾರಾಷ್ಟ್ರದ ಪ್ರಗತಿಪರ ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಅವರ ಹತ್ಯೆಯಲ್ಲೂ ಇವರು ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಕಲ್ಬುರ್ಗಿಯವರ ಹತ್ಯೆಯ ಸಮಯದಲ್ಲಿ ರೂಪದರ್ಶಿಯವರು ತಂದೆಯ ಮನೆಯಲ್ಲಿದ್ದರು. ಬೆಳಿಗ್ಗೆ 8.45ರ ಸುಮಾರಿಗೆ ಕಲ್ಬುರ್ಗಿಯವರು ಫೋನ್‌ ಕರೆಯಲ್ಲಿದ್ದಾಗ ಬಾಗಿಲು ತಟ್ಟಲಾಗಿತ್ತು ಎಂದು ನ್ಯಾಯಾಲಯಕ್ಕೆ ರೂಪದರ್ಶಿ ತಿಳಿಸಿದ್ದಾರೆ.

ರೂಪದರ್ಶಿಯವರ ತಾಯಿ ಉಮಾದೇವಿ ಅವರು ಬಾಗಿಲ ಬಳಿ ಹೋದಾಗ ಆ ಅಪರಿಚಿತರು, “ಸರ್ ಅನ್ನು ಭೇಟಿಯಾಗಬೇಕು” ಎಂದು ಹೇಳಿದರು. ಕಲ್ಬುರ್ಗಿಯವರು ಬಾಗಿಲ ಬಳಿ ಹೋದಾಗ, ಗುಂಡಿನ ಸದ್ದು ಬಂತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. “ನನ್ನ ತಂದೆ ಕುಸಿದುಬಿದ್ದರು ಮತ್ತು ಹೊರಗೆ ಕಾಯುತ್ತಿದ್ದ ಸವಾರನೊಂದಿಗೆ ಒಬ್ಬ ವ್ಯಕ್ತಿ ಮೋಟರ್‌ನತ್ತ ಜಿಗಿಯುವುದನ್ನು ನೋಡಿದೆ” ಎಂದು ರೂಪದರ್ಶಿ ಹೇಳಿಕೆ ನೀಡಿದ್ದಾರೆ.

ಕುಟುಂಬದವರು ಕಲ್ಬುರ್ಗಿ ಅವರನ್ನು ಹತ್ತಿರದ ಆಸ್ಪತ್ರೆಗೆ, ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಲ್ಬುರ್ಗಿ ಅವರ ಮಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಿದ ನಂತರ ಭಾವುಕರಾಗಿ ಅತ್ತಿದ್ದಾರೆ. ಇದನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದ ಗಮನಕ್ಕೆ ತಂದರು ಎಂದು ವಿಚಾರಣಾ ನ್ಯಾಯಾಲಯವು ದಾಖಲು ಮಾಡಿದೆ. ಮುಂದಿನ ತಿಂಗಳು ಪಾಟೀ ಸವಾಲನ್ನು ರೂಪದರ್ಶಿ ಎದುರಿಸಲಿದ್ದಾರೆ.

ಕಲ್ಬುರ್ಗಿ ಅವರ ಪತ್ನಿ ಉಮಾದೇವಿಯವರು 2019ರ ಆರಂಭದಲ್ಲಿ, ಪ್ರಕರಣದ ಸಾಕ್ಷ್ಯದ ಭಾಗವಾಗಿರುವ ಅಧಿಕೃತ ಗುರುತಿನ ಪರೇಡ್‌ನಲ್ಲಿ ಕೊಲೆಗಾರರನ್ನು ಗುರುತಿಸಿದ್ದರು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...