Homeಕರ್ನಾಟಕಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

- Advertisement -
- Advertisement -

2015ರ ಆಗಸ್ಟ್ 30ರಂದು ಧಾರಾವಾಡದ ತಮ್ಮ ಮನೆಯಲ್ಲಿ ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಬುರ್ಗಿಯವರ ಪುತ್ರಿ ಧಾರಾವಾಡ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಹಂತಕರನ್ನು ಗುರುತಿಸಿದ್ದಾರೆ. ಮಾರ್ಚ್ 17ರಂದು ಪ್ರಕರಣದ ವಿಚಾರಣೆ ನಡೆದಿದೆ.

“29 ವರ್ಷದ ಗಣೇಶ್ ಮಿಸ್ಕಿನ್ ಎಂಬ ವ್ಯಕ್ತಿಯು ನನ್ನ ತಂದೆಗೆ ಗುಂಡು ಹಾರಿಸಿದ” ಎಂದು ಗುರುತಿಸಿದ ನಂತರ ಕಲ್ಬುರ್ಗಿ ಅವರ ಪುತ್ರಿ ರೂಪದರ್ಶಿ ಕೆ. (49) ಕುಸಿದುಬಿದ್ದರು. ಮನೆಯ ಬಳಿ ಮೋಟಾರ್ ಸೈಕಲ್‌ನಲ್ಲಿ ಗಣೇಶ್‌ಗಾಗಿ ಕಾಯುತ್ತಿದ್ದ ವ್ಯಕ್ತಿ 29 ವರ್ಷದ ಪ್ರವೀಣ್ ಚತುರ್ ಎಂದು ಅವರು ತಿಳಿಸಿದ್ದಾರೆ.

ಸನಾತನ ಸಂಸ್ಥೆ ಮತ್ತು ಅದರ ಅಂಗಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯಂತಹ ಗುಂಪುಗಳ ತೀವ್ರಗಾಮಿ ಸದಸ್ಯರಿಂದ ರಚಿಸಲ್ಪಟ್ಟ ಬಲಪಂಥೀಯ ಉಗ್ರಗಾಮಿ ಹಿಂದುತ್ವ ಸಂಘಟನೆಯೊಂದಿಗೆ ಗಣೇಶ್ ಸಂಬಂಧ ಹೊಂದಿದ್ದಾನೆ. ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಇವನ ಸಂಬಂಧ ಹೊಂದಿದ್ದಾನೆ. ಚತುರ್ ಕೂಡ ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ. 2018 ರಲ್ಲಿ ಪದ್ಮಾವತ್ ಚಲನಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹಿಂಸಾಚಾರದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ ರಚಿಸಲಾಗಿದ್ದ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಮಿಸ್ಕಿನ್ ಮತ್ತು ಚತುರ್ ಅವರನ್ನು ಬಂಧಿಸಿದೆ. ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿ, ಮಹಾರಾಷ್ಟ್ರದ ಪ್ರಗತಿಪರ ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಅವರ ಹತ್ಯೆಯಲ್ಲೂ ಇವರು ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಕಲ್ಬುರ್ಗಿಯವರ ಹತ್ಯೆಯ ಸಮಯದಲ್ಲಿ ರೂಪದರ್ಶಿಯವರು ತಂದೆಯ ಮನೆಯಲ್ಲಿದ್ದರು. ಬೆಳಿಗ್ಗೆ 8.45ರ ಸುಮಾರಿಗೆ ಕಲ್ಬುರ್ಗಿಯವರು ಫೋನ್‌ ಕರೆಯಲ್ಲಿದ್ದಾಗ ಬಾಗಿಲು ತಟ್ಟಲಾಗಿತ್ತು ಎಂದು ನ್ಯಾಯಾಲಯಕ್ಕೆ ರೂಪದರ್ಶಿ ತಿಳಿಸಿದ್ದಾರೆ.

ರೂಪದರ್ಶಿಯವರ ತಾಯಿ ಉಮಾದೇವಿ ಅವರು ಬಾಗಿಲ ಬಳಿ ಹೋದಾಗ ಆ ಅಪರಿಚಿತರು, “ಸರ್ ಅನ್ನು ಭೇಟಿಯಾಗಬೇಕು” ಎಂದು ಹೇಳಿದರು. ಕಲ್ಬುರ್ಗಿಯವರು ಬಾಗಿಲ ಬಳಿ ಹೋದಾಗ, ಗುಂಡಿನ ಸದ್ದು ಬಂತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. “ನನ್ನ ತಂದೆ ಕುಸಿದುಬಿದ್ದರು ಮತ್ತು ಹೊರಗೆ ಕಾಯುತ್ತಿದ್ದ ಸವಾರನೊಂದಿಗೆ ಒಬ್ಬ ವ್ಯಕ್ತಿ ಮೋಟರ್‌ನತ್ತ ಜಿಗಿಯುವುದನ್ನು ನೋಡಿದೆ” ಎಂದು ರೂಪದರ್ಶಿ ಹೇಳಿಕೆ ನೀಡಿದ್ದಾರೆ.

ಕುಟುಂಬದವರು ಕಲ್ಬುರ್ಗಿ ಅವರನ್ನು ಹತ್ತಿರದ ಆಸ್ಪತ್ರೆಗೆ, ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಲ್ಬುರ್ಗಿ ಅವರ ಮಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಿದ ನಂತರ ಭಾವುಕರಾಗಿ ಅತ್ತಿದ್ದಾರೆ. ಇದನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದ ಗಮನಕ್ಕೆ ತಂದರು ಎಂದು ವಿಚಾರಣಾ ನ್ಯಾಯಾಲಯವು ದಾಖಲು ಮಾಡಿದೆ. ಮುಂದಿನ ತಿಂಗಳು ಪಾಟೀ ಸವಾಲನ್ನು ರೂಪದರ್ಶಿ ಎದುರಿಸಲಿದ್ದಾರೆ.

ಕಲ್ಬುರ್ಗಿ ಅವರ ಪತ್ನಿ ಉಮಾದೇವಿಯವರು 2019ರ ಆರಂಭದಲ್ಲಿ, ಪ್ರಕರಣದ ಸಾಕ್ಷ್ಯದ ಭಾಗವಾಗಿರುವ ಅಧಿಕೃತ ಗುರುತಿನ ಪರೇಡ್‌ನಲ್ಲಿ ಕೊಲೆಗಾರರನ್ನು ಗುರುತಿಸಿದ್ದರು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...