Homeಕರ್ನಾಟಕಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

- Advertisement -
- Advertisement -

2015ರ ಆಗಸ್ಟ್ 30ರಂದು ಧಾರಾವಾಡದ ತಮ್ಮ ಮನೆಯಲ್ಲಿ ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಬುರ್ಗಿಯವರ ಪುತ್ರಿ ಧಾರಾವಾಡ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಹಂತಕರನ್ನು ಗುರುತಿಸಿದ್ದಾರೆ. ಮಾರ್ಚ್ 17ರಂದು ಪ್ರಕರಣದ ವಿಚಾರಣೆ ನಡೆದಿದೆ.

“29 ವರ್ಷದ ಗಣೇಶ್ ಮಿಸ್ಕಿನ್ ಎಂಬ ವ್ಯಕ್ತಿಯು ನನ್ನ ತಂದೆಗೆ ಗುಂಡು ಹಾರಿಸಿದ” ಎಂದು ಗುರುತಿಸಿದ ನಂತರ ಕಲ್ಬುರ್ಗಿ ಅವರ ಪುತ್ರಿ ರೂಪದರ್ಶಿ ಕೆ. (49) ಕುಸಿದುಬಿದ್ದರು. ಮನೆಯ ಬಳಿ ಮೋಟಾರ್ ಸೈಕಲ್‌ನಲ್ಲಿ ಗಣೇಶ್‌ಗಾಗಿ ಕಾಯುತ್ತಿದ್ದ ವ್ಯಕ್ತಿ 29 ವರ್ಷದ ಪ್ರವೀಣ್ ಚತುರ್ ಎಂದು ಅವರು ತಿಳಿಸಿದ್ದಾರೆ.

ಸನಾತನ ಸಂಸ್ಥೆ ಮತ್ತು ಅದರ ಅಂಗಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯಂತಹ ಗುಂಪುಗಳ ತೀವ್ರಗಾಮಿ ಸದಸ್ಯರಿಂದ ರಚಿಸಲ್ಪಟ್ಟ ಬಲಪಂಥೀಯ ಉಗ್ರಗಾಮಿ ಹಿಂದುತ್ವ ಸಂಘಟನೆಯೊಂದಿಗೆ ಗಣೇಶ್ ಸಂಬಂಧ ಹೊಂದಿದ್ದಾನೆ. ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಇವನ ಸಂಬಂಧ ಹೊಂದಿದ್ದಾನೆ. ಚತುರ್ ಕೂಡ ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ. 2018 ರಲ್ಲಿ ಪದ್ಮಾವತ್ ಚಲನಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹಿಂಸಾಚಾರದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ ರಚಿಸಲಾಗಿದ್ದ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಮಿಸ್ಕಿನ್ ಮತ್ತು ಚತುರ್ ಅವರನ್ನು ಬಂಧಿಸಿದೆ. ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿ, ಮಹಾರಾಷ್ಟ್ರದ ಪ್ರಗತಿಪರ ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಅವರ ಹತ್ಯೆಯಲ್ಲೂ ಇವರು ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಕಲ್ಬುರ್ಗಿಯವರ ಹತ್ಯೆಯ ಸಮಯದಲ್ಲಿ ರೂಪದರ್ಶಿಯವರು ತಂದೆಯ ಮನೆಯಲ್ಲಿದ್ದರು. ಬೆಳಿಗ್ಗೆ 8.45ರ ಸುಮಾರಿಗೆ ಕಲ್ಬುರ್ಗಿಯವರು ಫೋನ್‌ ಕರೆಯಲ್ಲಿದ್ದಾಗ ಬಾಗಿಲು ತಟ್ಟಲಾಗಿತ್ತು ಎಂದು ನ್ಯಾಯಾಲಯಕ್ಕೆ ರೂಪದರ್ಶಿ ತಿಳಿಸಿದ್ದಾರೆ.

ರೂಪದರ್ಶಿಯವರ ತಾಯಿ ಉಮಾದೇವಿ ಅವರು ಬಾಗಿಲ ಬಳಿ ಹೋದಾಗ ಆ ಅಪರಿಚಿತರು, “ಸರ್ ಅನ್ನು ಭೇಟಿಯಾಗಬೇಕು” ಎಂದು ಹೇಳಿದರು. ಕಲ್ಬುರ್ಗಿಯವರು ಬಾಗಿಲ ಬಳಿ ಹೋದಾಗ, ಗುಂಡಿನ ಸದ್ದು ಬಂತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. “ನನ್ನ ತಂದೆ ಕುಸಿದುಬಿದ್ದರು ಮತ್ತು ಹೊರಗೆ ಕಾಯುತ್ತಿದ್ದ ಸವಾರನೊಂದಿಗೆ ಒಬ್ಬ ವ್ಯಕ್ತಿ ಮೋಟರ್‌ನತ್ತ ಜಿಗಿಯುವುದನ್ನು ನೋಡಿದೆ” ಎಂದು ರೂಪದರ್ಶಿ ಹೇಳಿಕೆ ನೀಡಿದ್ದಾರೆ.

ಕುಟುಂಬದವರು ಕಲ್ಬುರ್ಗಿ ಅವರನ್ನು ಹತ್ತಿರದ ಆಸ್ಪತ್ರೆಗೆ, ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಲ್ಬುರ್ಗಿ ಅವರ ಮಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಿದ ನಂತರ ಭಾವುಕರಾಗಿ ಅತ್ತಿದ್ದಾರೆ. ಇದನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದ ಗಮನಕ್ಕೆ ತಂದರು ಎಂದು ವಿಚಾರಣಾ ನ್ಯಾಯಾಲಯವು ದಾಖಲು ಮಾಡಿದೆ. ಮುಂದಿನ ತಿಂಗಳು ಪಾಟೀ ಸವಾಲನ್ನು ರೂಪದರ್ಶಿ ಎದುರಿಸಲಿದ್ದಾರೆ.

ಕಲ್ಬುರ್ಗಿ ಅವರ ಪತ್ನಿ ಉಮಾದೇವಿಯವರು 2019ರ ಆರಂಭದಲ್ಲಿ, ಪ್ರಕರಣದ ಸಾಕ್ಷ್ಯದ ಭಾಗವಾಗಿರುವ ಅಧಿಕೃತ ಗುರುತಿನ ಪರೇಡ್‌ನಲ್ಲಿ ಕೊಲೆಗಾರರನ್ನು ಗುರುತಿಸಿದ್ದರು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...