Homeಮುಖಪುಟಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

- Advertisement -
- Advertisement -

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ ಸಮಾಜದೊಂದಿಗೆ ‘ಸಾಮೂಹಿಕ ಮತ್ತು ಗೌರವಾನ್ವಿತ ಬದುಕನ್ನು’ ಬಯಸುತ್ತದೆ ಎಂದು ಹೇಳಿದೆ.

ಹಿರಿಯ ನಾಯಕರಾದ ಮಲ್ಲೊಜುಲಾ, ಅಶಣ್ಣ ಶರಣಾದ ನಂತರ ಮತ್ತು ಉನ್ನತ ಕಮಾಂಡರ್ ಹಿಡ್ಮಾ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ನಂತರ ಮಾವೋವಾದಿ ಸಂಘಟನೆ ದುರ್ಬಲಗೊಂಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಕೇಂದ್ರ ಸರ್ಕಾರವು ನಮಗೆ ಪದೇ ಪದೇ ಮನವಿ ಮಾಡಿದ ನಂತರ ಉಳಿದ ಕಾರ್ಯಕರ್ತರು ಶರಣಾಗಲು ನಿರ್ಧರಿಸಿದ್ದಾರೆ” ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಕಾರ್ಯಕರ್ತರು ತಮ್ಮ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿ ಸರ್ಕಾರದ ಪುನರ್ವಸತಿ ಕಾರ್ಯಕ್ರಮಕ್ಕೆ ಸೇರುತ್ತಾರೆ ಎಂದು ಸಹ ಉಲ್ಲೇಖಿಸಲಾಗಿದೆ.

ಮೂರು ರಾಜ್ಯಗಳು ಸ್ಪಷ್ಟ ಭದ್ರತಾ ಖಾತರಿ ಮತ್ತು ಪಾರದರ್ಶಕ ಪುನರ್ವಸತಿ ಪ್ರಕ್ರಿಯೆಯನ್ನು ನೀಡಿದರೆ ಮಾತ್ರ ನಮ್ಮ ಗುಂಪು ಮುಖ್ಯವಾಹಿನಿಗೆ ಮರಳುತ್ತದೆ ಎಂದು ಅನಂತ್ ಹೇಳಿದರು. ಹಿಂದಿನ ಪುನರ್ವಸತಿ ಪ್ರಯತ್ನಗಳು ಕಾಗದದಲ್ಲಿ ಮಾತ್ರ ಉಳಿದಿವೆ, ಶರಣಾದ ಸದಸ್ಯರು ಅಥವಾ ಅವರ ಕುಟುಂಬಗಳಿಗೆ ಸುರಕ್ಷತೆಯನ್ನು ಖಚಿತಪಡಿಸಲಿಲ್ಲ ಎಂದು ಅವರು ಬೇಸರ ಹೊರಹಾಕಿದ್ದಾರೆ.

ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸರ್ಕಾರಗಳು ಜನವರಿ 1 ರವರೆಗೆ ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಮಾವೋವಾದಿಗಳು ಒತ್ತಾಯಿಸಿದರು. ಪ್ರತಿಯಾಗಿ, ಕಾರ್ಯಕರ್ತರು ಎಲ್ಲಾ ಸಶಸ್ತ್ರ ಚಟುವಟಿಕೆಗಳನ್ನು ಸಹ ನಿಲ್ಲಿಸುತ್ತಾರೆ. ನಮ್ಮ ಏಕತೆ ಅಖಂಡವಾಗಿ ಉಳಿಯಲು ನಾವೆಲ್ಲರೂ ಒಂದೇ ದಿನ ಒಟ್ಟಾಗಿ ಚಲಿಸುತ್ತೇವೆ ಎಂದು ಅನಂತ್ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ನಿರ್ಧಾರವು ಸಾಮೂಹಿಕ ಪಕ್ಷದ ಕಾರ್ಯತಂತ್ರದ ಭಾಗವಾಗಿದೆ, ನಮ್ಮ ಹೋರಾಟಕ್ಕೆ ಮಾಡುತ್ತಿರುವ ದ್ರೋಹವಲ್ಲ ಎಂದು ಅವರು ವಿವರಿಸಿದರು.

ಗುಂಪಿನ ಗುರಿ ಕೇವಲ ಶರಣಾಗತಿಯಲ್ಲ, ಆದರೆ ಸಮಾಜದೊಂದಿಗೆ ಗೌರವಯುತ ಪುನರ್‌ಮಿಲನವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನಮ್ಮ ಹೋರಾಟ ಯಾವಾಗಲೂ ಜನರಿಗಾಗಿ, ಅವರ ವಿರುದ್ಧವಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಬದಲಾಗುತ್ತಿರುವ ರಾಷ್ಟ್ರೀಯ ಮತ್ತು ಜಾಗತಿಕ ಪರಿಸ್ಥಿತಿಗಳು ಸಂಘಟನೆಯ ಉಳಿವಿನ ಜೊತೆಗೆ ಸ್ಥಳೀಯ ಸಮುದಾಯಗಳ ಕಲ್ಯಾಣಕ್ಕಾಗಿ ನಾಯಕತ್ವವು ಈ ಹೆಜ್ಜೆ ಇಡಲು ಕಾರಣವಾಗಿದೆ ಎಂದು ಅದು ಹೇಳಿದೆ.

ಅವರು, ಪತ್ರಕರ್ತರು ಮತ್ತು ಸಾರ್ವಜನಿಕ ವ್ಯಕ್ತಿಗಳಿಗೆ ಶಾಂತಿಯುತ ಪರಿವರ್ತನೆಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ, ಅಪನಂಬಿಕೆಯನ್ನು ಸೃಷ್ಟಿಸುವುದನ್ನು ತಪ್ಪಿಸುವಂತೆ ಕೇಳಿಕೊಂಡಿದ್ದಾರೆ. ನಕ್ಸಲ್ ಕಾರ್ಯಕರ್ತರು ಮತ್ತು ಅವರ ಕುಟುಂಬಗಳು ಶಾಂತಿ ಮತ್ತು ಸಮಾಜಕ್ಕೆ ಗೌರವಯುತ ಮರಳುವಿಕೆಯನ್ನು ಬಯಸುತ್ತಾರೆ ಎಂದು ಅವರು ಹೇಳಿದರು.

ಮುಂದಿನ ತಿಂಗಳಿಗೆ ಎಂಎಂಸಿ ನಿಯೋಗಗಳನ್ನು ನಿರ್ದಿಷ್ಟ ರೇಡಿಯೋ ಆವರ್ತನದ ಮೂಲಕ ಸಂಪರ್ಕಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಛತ್ತೀಸ್‌ಗಢ ಸರ್ಕಾರದ “ಪೂನಾ ಮಾರ್ಗಮ್” ಪುನರ್ವಸತಿ ಕಾರ್ಯಕ್ರಮವನ್ನು ಸ್ವೀಕರಿಸಲು ಗುಂಪು ಸಿದ್ಧವಾಗಿದೆ ಎಂದು ಬಿಜಾಪುರದಲ್ಲಿ ಪ್ರತ್ಯೇಕ ಹೇಳಿಕೆ ತಿಳಿಸಿದೆ.

ಕಳೆದ ವಾರ, ಮಾವೋವಾದಿಗಳು ಮುಖ್ಯವಾಹಿನಿಯ ಜೀವನದಲ್ಲಿ ಮತ್ತೆ ಒಂದಾಗಲು ಸಮಯ ಬೇಕು ಎಂದು ಹೇಳುವ ಹಿಂದಿನ ಪತ್ರವನ್ನು ನೀಡಿದ್ದರು.

ಎಂಎಂಸಿ ಜೋನ್ ಎಂದರೇನು?

ಎಂಎಂಸಿ ಜೋನ್ (ಮಹಾರಾಷ್ಟ್ರ–ಮಧ್ಯ ಪ್ರದೇಶ–ಛತ್ತೀಸ್‌ಗಢ) ಎಂಬುದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋಯಿಸ್ಟ್)ದ ವಿಶೇಷ ವಲಯ ಕಮಿಟಿಯಾಗಿದೆ. ಮಹಾರಾಷ್ಟ್ರದ ಗಢ್‌ಚಿರೋಳಿ, ಮಧ್ಯಪ್ರದೇಶದ ಬಲಾಘಟ್ ಮತ್ತು ಛತ್ತೀಸ್‌ಗಢದ ರಾಜನಾಂದಗಾವ್–ಕಬೀರ್ಧಾಮ್ ಜಿಲ್ಲೆಗಳ ದಟ್ಟ ಕಾಡುಗಳ ‘ಟ್ರೈ-ಜಂಕ್ಷನ್‌’ (ಮೂರು ರಾಜ್ಯಗಳ ಸಂಧಿ) ಪ್ರದೇಶವನ್ನು ಒಳಗೊಂಡಿದೆ. ಇದು ಉತ್ತರ ಮತ್ತು ಪಶ್ಚಿಮ ಪ್ರದೇಶಗಳನ್ನು ದಂಡಕಾರಣ್ಯ ಪ್ರದೇಶಕ್ಕೆ ಸೇರಿಸುವ ಕಾರಿಡಾರ್ ಆಗಿ ಕಾರ್ಯನಿರ್ವಹಿಸುತ್ತದೆ. ಈ ಜೋನ್‌ನಲ್ಲಿ ಮಾವೋವಾದಿಗಳು ಗೆರಿಲ್ಲಾ ಆಪರೇಷನ್‌ಗಳನ್ನು ನಡೆಸುತ್ತಾರೆ. ಸುಮಾರು 200ಕ್ಕೂ ಹೆಚ್ಚು ಸಶಸ್ತ್ರ ಕ್ಯಾಡರ್‌ಗಳು ಆಕ್ರಮಣದಲ್ಲಿರುತ್ತಾರೆಂದು ಅಂದಾಜಿಸಲಾಗಿದೆ. ಇದು ಭಾರತದ ನಕ್ಸಲ್ ಪರ್ವತಮಾನದಲ್ಲಿ ಪ್ರಮುಖ ಪ್ರದೇಶಗಳಲ್ಲಿ ಒಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...