Homeಮುಖಪುಟಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

- Advertisement -
- Advertisement -

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ ಸಮಾಜದೊಂದಿಗೆ ‘ಸಾಮೂಹಿಕ ಮತ್ತು ಗೌರವಾನ್ವಿತ ಬದುಕನ್ನು’ ಬಯಸುತ್ತದೆ ಎಂದು ಹೇಳಿದೆ.

ಹಿರಿಯ ನಾಯಕರಾದ ಮಲ್ಲೊಜುಲಾ, ಅಶಣ್ಣ ಶರಣಾದ ನಂತರ ಮತ್ತು ಉನ್ನತ ಕಮಾಂಡರ್ ಹಿಡ್ಮಾ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ನಂತರ ಮಾವೋವಾದಿ ಸಂಘಟನೆ ದುರ್ಬಲಗೊಂಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಕೇಂದ್ರ ಸರ್ಕಾರವು ನಮಗೆ ಪದೇ ಪದೇ ಮನವಿ ಮಾಡಿದ ನಂತರ ಉಳಿದ ಕಾರ್ಯಕರ್ತರು ಶರಣಾಗಲು ನಿರ್ಧರಿಸಿದ್ದಾರೆ” ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಕಾರ್ಯಕರ್ತರು ತಮ್ಮ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿ ಸರ್ಕಾರದ ಪುನರ್ವಸತಿ ಕಾರ್ಯಕ್ರಮಕ್ಕೆ ಸೇರುತ್ತಾರೆ ಎಂದು ಸಹ ಉಲ್ಲೇಖಿಸಲಾಗಿದೆ.

ಮೂರು ರಾಜ್ಯಗಳು ಸ್ಪಷ್ಟ ಭದ್ರತಾ ಖಾತರಿ ಮತ್ತು ಪಾರದರ್ಶಕ ಪುನರ್ವಸತಿ ಪ್ರಕ್ರಿಯೆಯನ್ನು ನೀಡಿದರೆ ಮಾತ್ರ ನಮ್ಮ ಗುಂಪು ಮುಖ್ಯವಾಹಿನಿಗೆ ಮರಳುತ್ತದೆ ಎಂದು ಅನಂತ್ ಹೇಳಿದರು. ಹಿಂದಿನ ಪುನರ್ವಸತಿ ಪ್ರಯತ್ನಗಳು ಕಾಗದದಲ್ಲಿ ಮಾತ್ರ ಉಳಿದಿವೆ, ಶರಣಾದ ಸದಸ್ಯರು ಅಥವಾ ಅವರ ಕುಟುಂಬಗಳಿಗೆ ಸುರಕ್ಷತೆಯನ್ನು ಖಚಿತಪಡಿಸಲಿಲ್ಲ ಎಂದು ಅವರು ಬೇಸರ ಹೊರಹಾಕಿದ್ದಾರೆ.

ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸರ್ಕಾರಗಳು ಜನವರಿ 1 ರವರೆಗೆ ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಮಾವೋವಾದಿಗಳು ಒತ್ತಾಯಿಸಿದರು. ಪ್ರತಿಯಾಗಿ, ಕಾರ್ಯಕರ್ತರು ಎಲ್ಲಾ ಸಶಸ್ತ್ರ ಚಟುವಟಿಕೆಗಳನ್ನು ಸಹ ನಿಲ್ಲಿಸುತ್ತಾರೆ. ನಮ್ಮ ಏಕತೆ ಅಖಂಡವಾಗಿ ಉಳಿಯಲು ನಾವೆಲ್ಲರೂ ಒಂದೇ ದಿನ ಒಟ್ಟಾಗಿ ಚಲಿಸುತ್ತೇವೆ ಎಂದು ಅನಂತ್ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ನಿರ್ಧಾರವು ಸಾಮೂಹಿಕ ಪಕ್ಷದ ಕಾರ್ಯತಂತ್ರದ ಭಾಗವಾಗಿದೆ, ನಮ್ಮ ಹೋರಾಟಕ್ಕೆ ಮಾಡುತ್ತಿರುವ ದ್ರೋಹವಲ್ಲ ಎಂದು ಅವರು ವಿವರಿಸಿದರು.

ಗುಂಪಿನ ಗುರಿ ಕೇವಲ ಶರಣಾಗತಿಯಲ್ಲ, ಆದರೆ ಸಮಾಜದೊಂದಿಗೆ ಗೌರವಯುತ ಪುನರ್‌ಮಿಲನವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನಮ್ಮ ಹೋರಾಟ ಯಾವಾಗಲೂ ಜನರಿಗಾಗಿ, ಅವರ ವಿರುದ್ಧವಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಬದಲಾಗುತ್ತಿರುವ ರಾಷ್ಟ್ರೀಯ ಮತ್ತು ಜಾಗತಿಕ ಪರಿಸ್ಥಿತಿಗಳು ಸಂಘಟನೆಯ ಉಳಿವಿನ ಜೊತೆಗೆ ಸ್ಥಳೀಯ ಸಮುದಾಯಗಳ ಕಲ್ಯಾಣಕ್ಕಾಗಿ ನಾಯಕತ್ವವು ಈ ಹೆಜ್ಜೆ ಇಡಲು ಕಾರಣವಾಗಿದೆ ಎಂದು ಅದು ಹೇಳಿದೆ.

ಅವರು, ಪತ್ರಕರ್ತರು ಮತ್ತು ಸಾರ್ವಜನಿಕ ವ್ಯಕ್ತಿಗಳಿಗೆ ಶಾಂತಿಯುತ ಪರಿವರ್ತನೆಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ, ಅಪನಂಬಿಕೆಯನ್ನು ಸೃಷ್ಟಿಸುವುದನ್ನು ತಪ್ಪಿಸುವಂತೆ ಕೇಳಿಕೊಂಡಿದ್ದಾರೆ. ನಕ್ಸಲ್ ಕಾರ್ಯಕರ್ತರು ಮತ್ತು ಅವರ ಕುಟುಂಬಗಳು ಶಾಂತಿ ಮತ್ತು ಸಮಾಜಕ್ಕೆ ಗೌರವಯುತ ಮರಳುವಿಕೆಯನ್ನು ಬಯಸುತ್ತಾರೆ ಎಂದು ಅವರು ಹೇಳಿದರು.

ಮುಂದಿನ ತಿಂಗಳಿಗೆ ಎಂಎಂಸಿ ನಿಯೋಗಗಳನ್ನು ನಿರ್ದಿಷ್ಟ ರೇಡಿಯೋ ಆವರ್ತನದ ಮೂಲಕ ಸಂಪರ್ಕಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಛತ್ತೀಸ್‌ಗಢ ಸರ್ಕಾರದ “ಪೂನಾ ಮಾರ್ಗಮ್” ಪುನರ್ವಸತಿ ಕಾರ್ಯಕ್ರಮವನ್ನು ಸ್ವೀಕರಿಸಲು ಗುಂಪು ಸಿದ್ಧವಾಗಿದೆ ಎಂದು ಬಿಜಾಪುರದಲ್ಲಿ ಪ್ರತ್ಯೇಕ ಹೇಳಿಕೆ ತಿಳಿಸಿದೆ.

ಕಳೆದ ವಾರ, ಮಾವೋವಾದಿಗಳು ಮುಖ್ಯವಾಹಿನಿಯ ಜೀವನದಲ್ಲಿ ಮತ್ತೆ ಒಂದಾಗಲು ಸಮಯ ಬೇಕು ಎಂದು ಹೇಳುವ ಹಿಂದಿನ ಪತ್ರವನ್ನು ನೀಡಿದ್ದರು.

ಎಂಎಂಸಿ ಜೋನ್ ಎಂದರೇನು?

ಎಂಎಂಸಿ ಜೋನ್ (ಮಹಾರಾಷ್ಟ್ರ–ಮಧ್ಯ ಪ್ರದೇಶ–ಛತ್ತೀಸ್‌ಗಢ) ಎಂಬುದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋಯಿಸ್ಟ್)ದ ವಿಶೇಷ ವಲಯ ಕಮಿಟಿಯಾಗಿದೆ. ಮಹಾರಾಷ್ಟ್ರದ ಗಢ್‌ಚಿರೋಳಿ, ಮಧ್ಯಪ್ರದೇಶದ ಬಲಾಘಟ್ ಮತ್ತು ಛತ್ತೀಸ್‌ಗಢದ ರಾಜನಾಂದಗಾವ್–ಕಬೀರ್ಧಾಮ್ ಜಿಲ್ಲೆಗಳ ದಟ್ಟ ಕಾಡುಗಳ ‘ಟ್ರೈ-ಜಂಕ್ಷನ್‌’ (ಮೂರು ರಾಜ್ಯಗಳ ಸಂಧಿ) ಪ್ರದೇಶವನ್ನು ಒಳಗೊಂಡಿದೆ. ಇದು ಉತ್ತರ ಮತ್ತು ಪಶ್ಚಿಮ ಪ್ರದೇಶಗಳನ್ನು ದಂಡಕಾರಣ್ಯ ಪ್ರದೇಶಕ್ಕೆ ಸೇರಿಸುವ ಕಾರಿಡಾರ್ ಆಗಿ ಕಾರ್ಯನಿರ್ವಹಿಸುತ್ತದೆ. ಈ ಜೋನ್‌ನಲ್ಲಿ ಮಾವೋವಾದಿಗಳು ಗೆರಿಲ್ಲಾ ಆಪರೇಷನ್‌ಗಳನ್ನು ನಡೆಸುತ್ತಾರೆ. ಸುಮಾರು 200ಕ್ಕೂ ಹೆಚ್ಚು ಸಶಸ್ತ್ರ ಕ್ಯಾಡರ್‌ಗಳು ಆಕ್ರಮಣದಲ್ಲಿರುತ್ತಾರೆಂದು ಅಂದಾಜಿಸಲಾಗಿದೆ. ಇದು ಭಾರತದ ನಕ್ಸಲ್ ಪರ್ವತಮಾನದಲ್ಲಿ ಪ್ರಮುಖ ಪ್ರದೇಶಗಳಲ್ಲಿ ಒಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...