Homeಕರ್ನಾಟಕಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣದ ಆರೋಪಿಗಳನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್ಐ ಒತ್ತಾಯಿಸಿದ್ದು, ಸಂತ್ರಸ್ತರಿಗೆ ನಷ್ಟ ಪರಿಹಾರ ನೀಡಲು ಮತ್ತು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದೆ.

ಕಾಣಿಯೂರು ಪ್ರದೇಶದಲ್ಲಿ ಜವಳಿ ಮಾರಾಟಮಾಡಲು ತೆರಳಿದ್ದ ಮಂಗಳೂರಿನ ಅಡ್ಡೂರಿನ ವ್ಯಾಪಾರಸ್ಥರಾದ ರಫೀಕ್ ಮತ್ತು ರಮೀಝ್ ಎಂಬವರ ಮೇಲೆ ಬಿಜೆಪಿ ಬೆಂಬಲಿಗರು ಎಂದು ಆರೋಪಿಸಲಾಗಿರುವ ಗುಂಪೊಂದು ಮಾರಣಾಂತಿಕ ಹಲ್ಲೆಯನ್ನು ನಡೆಸಿತ್ತು. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಹಲ್ಲೆ ನಡೆಸಿದ ತಪ್ಪಿತಸ್ಥರನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿದ್ದು, ಜಿಲ್ಲಾ ಎಸ್‌ಪಿಗೆ ಶನಿವಾರ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ; 2 ಪ್ರಕರಣ ದಾಖಲು

“ಅಡ್ಡೂರಿನ ರಫೀಕ್ ಮತ್ತು ರಮೀಝ್ ಅನ್ನುವ ವ್ಯಾಪಾರಿಗಳು ಕಳೆದ ಹಲವಾರು ವರುಷಗಳಿಂದ ಊರಿಂದೂರಿಗೆ ಮನೆ ಮನೆ ತೆರಳಿ ಬೆಡ್ ಶೀಟ್ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ಅವರು ಕಾಣಿಯೂರು ಪ್ರದೇಶದಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಮುಸಲ್ಮಾನರು ಎಂಬ ಕಾರಣಕ್ಕೆ ಬಿಜೆಪಿ ಬೆಂಬಲಿತ ಅಕ್ರಮ ಕೂಟವೊಂದು ಅವರ ಮೇಲೆ ಮುಗಿಬಿದ್ದು ಕಬ್ಬಿಣದ ಸರಳು, ದೊಣ್ಣೆ ಇನ್ನಿತರ ಆಯುಧಗಳಿಂದ ಕೈಕಾಲು ಮುರಿಯುವಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದಲ್ಲದೆ, ಅವರ ಮೈಮೇಲೆ ವಾಹನಗಳನ್ನು ಹತ್ತಿಸಿ ಕೊಲೆಯತ್ನಕ್ಕೂ ಪ್ರಯತ್ನಿಸಿರುತ್ತಾರೆ” ಎಂದು ಡಿವೈಎಫ್‌ಐ ಹೇಳಿದೆ.

“ಸತತ ಎರಡು ಗಂಟೆಗಳ ಕಾಲ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ದೃಶ್ಯದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣ ನಡೆದು ಎರಡು ದಿನಗಳಾದರೂ ಪೊಲೀಸ್ ಇಲಾಖೆ ಈವರೆಗೆ ಯಾವೊಬ್ಬನನ್ನು ಬಂಧಿಸದೆ ಮತೀಯ ತಾರತಮ್ಯವನ್ನು ಎಸಗಿದೆ” ಎಂದು ಡಿವೈಎಫ್‌ಐ ಆಕ್ರೋಶ ವ್ಯಕ್ತಪಡಿಸಿದೆ.

ಮುಸಲ್ಮಾನರನ್ನು ಗುರಿಯಾಗಿಸಿ ನಿರಂತರ ನಡೆಯುವಂತಹ ದಾಳಿಗಳಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಘಟನೆ ಸಾಕ್ಷಿಯಾಗಿದೆ ಎಂದು ಹೇಳಿರುವ ಡಿವೈಎಫ್‌ಐ, “೧ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು ಹಾಗೂ ಮುಸ್ಲಿಂ ವ್ಯಾಪಾರಿಗಳಾದ ರಫೀಕ್ ಮತ್ತು ರಮೀಝ್ ಮೇಲಿನ ಮಾರಾಣಾಂತಿಕ ಹಲ್ಲೆಗೆ ಕಾರಣರಾದವರ ಮೇಲೆ ಕೊಲೆಯತ್ನ ಪ್ರಕರಣದಡಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಸರಕಾರ ಸಂತ್ರಸ್ತರಿಗೆ ನಷ್ಟ ಪರಿಹಾರವನ್ನು ನೀಡಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಸಂತ್ರಸ್ತರನ್ನು ಭೇಟಿಯಾದ ಡಿವೈಎಫ್‌ಐ ಮುಖಂಡರು

ಕಾಣಿಯೂರಿನಲ್ಲಿ ಗುಂಪು ಹಲ್ಲೆಗೊಳಗಾದ ಸಂತ್ರಸ್ತರನ್ನು ಡಿವೈಎಫ್‌ಐ ಮುಖಂಡರು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದ್ದಾರೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಡಿವೈಎಫ್ಐ ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ಮುಸ್ತಫ ಕಲ್ಲಕಟ್ಟೆ, ಆಸೀಫ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...