Homeಮುಖಪುಟಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

- Advertisement -
- Advertisement -

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗೆ ನುಗ್ಗಿದ ಗುಂಪೊಂದು ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.  ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಹಲವು ಭಾರಿ ಅಂತರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದ್ದವು, ಹಲವು ರಾಷ್ಟ್ರಗಳು ಈ ಬಗ್ಗೆ ಧ್ವನಿಯನ್ನು ಎತ್ತಿದ್ದವು, ಇದೀಗ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ.

ಹಾಸ್ಟೆಲ್‌ನಲ್ಲಿದ್ದ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಲಾಗಿದೆ.  ಕ್ಯಾಂಪಸ್‌ನಲ್ಲಿ ಮಸೀದಿ ಇಲ್ಲ, ಆದ್ದರಿಂದ ರಂಜಾನ್ ಸಮಯದಲ್ಲಿ ರಾತ್ರಿ ಮಾಡಲಾಗುವ ತರಾವೀಹ್  ನಮಾಜ್ ಮಾಡಲು ಹಾಸ್ಟೆಲ್‌ನೊಳಗೆ ಸೇರಿದ್ದೆವು. ಸ್ವಲ್ಪ ಸಮಯದ ನಂತರ, ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾದ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ದಾಳಿ ಮಾಡಿ ಕೊಠಡಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಹಾಸ್ಟೆಲ್‌ನ ಸೆಕ್ಯುರಿಟಿ ಗಾರ್ಡ್ ಗುಂಪನ್ನು ತಡೆಯಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಗುಂಪಿನಲ್ಲಿದ್ದವರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡಲು ಯಾರು ಅನುಮತಿಸಿದರು ಎಂದು ಅವರು ಪ್ರಶ್ನಿಸಿದ್ದಾರೆ ಎಂದು ಆಫ್ಘಾನಿಸ್ತಾನದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಅವರು ಕೊಠಡಿಗೆ ನುಗ್ಗಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ಲ್ಯಾಪ್‌ಟಾಪ್‌ಗಳು, ಫೋನ್‌ಗಳನ್ನು ಒಡೆದು ಹಾಕಿದ್ದು, ಬೈಕ್‌ಗಳನ್ನು ಹಾನಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಗಾಯಗೊಂಡ ಐವರು ವಿದ್ಯಾರ್ಥಿಗಳಲ್ಲಿ ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್‌ನ ತಲಾ ಓರ್ವರು ಮತ್ತು ಆಫ್ರಿಕನ್ ದೇಶದ ಇಬ್ಬರು ಸೇರಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಘಟನೆ ನಡೆದು ಅರ್ಧ ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಬಂದಿದ್ದು, ಈ ವೇಳೆ ಗುಂಪು ಅಲ್ಲಿಂದ ಪಲಾಯನ ಮಾಡಿತ್ತು. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಾನಿಗೊಳಗಾದ ಬೈಕ್‌ಗಳು, ಒಡೆದ ಲ್ಯಾಪ್‌ಟಾಪ್‌ಗಳು ಮತ್ತು ಧ್ವಂಸಗೊಂಡ ಕೊಠಡಿಗಳು ಕಂಡು ಬಂದಿದೆ. ಕೆಲವು ದೃಶ್ಯಗಳಲ್ಲಿ, ಗುಂಪು ಹಾಸ್ಟೆಲ್‌ಗೆ ಕಲ್ಲು ಎಸೆಯುತ್ತಿರುವುದು, ವಿದ್ಯಾರ್ಥಿಗಳ ಮೇಲೆ ನಿಂದನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಒಂದು ವೀಡಿಯೊದಲ್ಲಿ, ಗುಂಪಿನಲ್ಲಿದ್ದ ಯುವಕನೊಬ್ಬ ಸೆಕ್ಯುರಿಟಿ ಗಾರ್ಡ್‌ನಲ್ಲಿ “ಅವರು ಏಕೆ ನಮಾಜ್ ಮಾಡುತ್ತಿದ್ದಾರೆ, ಇದು ಸ್ಥಳವೇ?” ಎಂದು ಕೇಳುವುದು ಕೇಳಿಸುತ್ತದೆ. ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುವುದು ಕಂಡು ಬಂದಿದೆ. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಮಾದ್ಯಮ ಬಳಕೆದಾರರು ಗುಂಪು ಹಿಂಸೆಯನ್ನು ಖಂಡಿಸಿದ್ದಾರೆ.

ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಎಂತಹ ನಾಚಿಕೆಗೇಡಿನ ಸಂಗತಿ, ಮುಸ್ಲಿಮರು ಶಾಂತಿಯುತವಾಗಿ ಅವರ ಧರ್ಮವನ್ನು ಆಚರಿಸಿದಾಗ ಮಾತ್ರ ನಿಮ್ಮ ಭಕ್ತಿ ಮತ್ತು ಧಾರ್ಮಿಕ ಘೋಷಣೆಗಳು ಕೇಳಿಸುತ್ತದೆ. ಮುಸ್ಲಿಮರನ್ನು ಕಂಡ ಮಾತ್ರಕ್ಕೆ ನಿಮಗೆ ಯಾಕಿಷ್ಟು ಕೋಪ? ಇದು ಅಮಿತ್‌ ಶಾ ಮತ್ತು ಮೋದಿಯ ತವರು ರಾಜ್ಯವಾಗಿದೆ. ಅವರು ಈ ಬಗ್ಗೆ ಬಲವಾದ ಸಂದೇಶವನ್ನು ಕಳುಹಿಸಲು ಮಧ್ಯಪ್ರವೇಶಿಸುತ್ತಾರಾ? ಎಂದು ಅವರು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗುಜರಾತ್‌ನ ಗೃಹ ಸಚಿವ ಹರ್ಷ ಸಾಂಘವಿ, ಈ ಬಗ್ಗೆ ಗುಜರಾತ್‌ನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಮತ್ತು ನ್ಯಾಯಯುತ ತನಿಖೆಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...