Homeಮುಖಪುಟಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

- Advertisement -
- Advertisement -

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗೆ ನುಗ್ಗಿದ ಗುಂಪೊಂದು ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.  ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಹಲವು ಭಾರಿ ಅಂತರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದ್ದವು, ಹಲವು ರಾಷ್ಟ್ರಗಳು ಈ ಬಗ್ಗೆ ಧ್ವನಿಯನ್ನು ಎತ್ತಿದ್ದವು, ಇದೀಗ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ.

ಹಾಸ್ಟೆಲ್‌ನಲ್ಲಿದ್ದ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಲಾಗಿದೆ.  ಕ್ಯಾಂಪಸ್‌ನಲ್ಲಿ ಮಸೀದಿ ಇಲ್ಲ, ಆದ್ದರಿಂದ ರಂಜಾನ್ ಸಮಯದಲ್ಲಿ ರಾತ್ರಿ ಮಾಡಲಾಗುವ ತರಾವೀಹ್  ನಮಾಜ್ ಮಾಡಲು ಹಾಸ್ಟೆಲ್‌ನೊಳಗೆ ಸೇರಿದ್ದೆವು. ಸ್ವಲ್ಪ ಸಮಯದ ನಂತರ, ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾದ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ದಾಳಿ ಮಾಡಿ ಕೊಠಡಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಹಾಸ್ಟೆಲ್‌ನ ಸೆಕ್ಯುರಿಟಿ ಗಾರ್ಡ್ ಗುಂಪನ್ನು ತಡೆಯಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಗುಂಪಿನಲ್ಲಿದ್ದವರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡಲು ಯಾರು ಅನುಮತಿಸಿದರು ಎಂದು ಅವರು ಪ್ರಶ್ನಿಸಿದ್ದಾರೆ ಎಂದು ಆಫ್ಘಾನಿಸ್ತಾನದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಅವರು ಕೊಠಡಿಗೆ ನುಗ್ಗಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ಲ್ಯಾಪ್‌ಟಾಪ್‌ಗಳು, ಫೋನ್‌ಗಳನ್ನು ಒಡೆದು ಹಾಕಿದ್ದು, ಬೈಕ್‌ಗಳನ್ನು ಹಾನಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಗಾಯಗೊಂಡ ಐವರು ವಿದ್ಯಾರ್ಥಿಗಳಲ್ಲಿ ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್‌ನ ತಲಾ ಓರ್ವರು ಮತ್ತು ಆಫ್ರಿಕನ್ ದೇಶದ ಇಬ್ಬರು ಸೇರಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಘಟನೆ ನಡೆದು ಅರ್ಧ ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಬಂದಿದ್ದು, ಈ ವೇಳೆ ಗುಂಪು ಅಲ್ಲಿಂದ ಪಲಾಯನ ಮಾಡಿತ್ತು. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಾನಿಗೊಳಗಾದ ಬೈಕ್‌ಗಳು, ಒಡೆದ ಲ್ಯಾಪ್‌ಟಾಪ್‌ಗಳು ಮತ್ತು ಧ್ವಂಸಗೊಂಡ ಕೊಠಡಿಗಳು ಕಂಡು ಬಂದಿದೆ. ಕೆಲವು ದೃಶ್ಯಗಳಲ್ಲಿ, ಗುಂಪು ಹಾಸ್ಟೆಲ್‌ಗೆ ಕಲ್ಲು ಎಸೆಯುತ್ತಿರುವುದು, ವಿದ್ಯಾರ್ಥಿಗಳ ಮೇಲೆ ನಿಂದನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಒಂದು ವೀಡಿಯೊದಲ್ಲಿ, ಗುಂಪಿನಲ್ಲಿದ್ದ ಯುವಕನೊಬ್ಬ ಸೆಕ್ಯುರಿಟಿ ಗಾರ್ಡ್‌ನಲ್ಲಿ “ಅವರು ಏಕೆ ನಮಾಜ್ ಮಾಡುತ್ತಿದ್ದಾರೆ, ಇದು ಸ್ಥಳವೇ?” ಎಂದು ಕೇಳುವುದು ಕೇಳಿಸುತ್ತದೆ. ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುವುದು ಕಂಡು ಬಂದಿದೆ. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಮಾದ್ಯಮ ಬಳಕೆದಾರರು ಗುಂಪು ಹಿಂಸೆಯನ್ನು ಖಂಡಿಸಿದ್ದಾರೆ.

ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಎಂತಹ ನಾಚಿಕೆಗೇಡಿನ ಸಂಗತಿ, ಮುಸ್ಲಿಮರು ಶಾಂತಿಯುತವಾಗಿ ಅವರ ಧರ್ಮವನ್ನು ಆಚರಿಸಿದಾಗ ಮಾತ್ರ ನಿಮ್ಮ ಭಕ್ತಿ ಮತ್ತು ಧಾರ್ಮಿಕ ಘೋಷಣೆಗಳು ಕೇಳಿಸುತ್ತದೆ. ಮುಸ್ಲಿಮರನ್ನು ಕಂಡ ಮಾತ್ರಕ್ಕೆ ನಿಮಗೆ ಯಾಕಿಷ್ಟು ಕೋಪ? ಇದು ಅಮಿತ್‌ ಶಾ ಮತ್ತು ಮೋದಿಯ ತವರು ರಾಜ್ಯವಾಗಿದೆ. ಅವರು ಈ ಬಗ್ಗೆ ಬಲವಾದ ಸಂದೇಶವನ್ನು ಕಳುಹಿಸಲು ಮಧ್ಯಪ್ರವೇಶಿಸುತ್ತಾರಾ? ಎಂದು ಅವರು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗುಜರಾತ್‌ನ ಗೃಹ ಸಚಿವ ಹರ್ಷ ಸಾಂಘವಿ, ಈ ಬಗ್ಗೆ ಗುಜರಾತ್‌ನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಮತ್ತು ನ್ಯಾಯಯುತ ತನಿಖೆಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...