Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ಸುಳ್ಳು ಹೆಸರು ಹೇಳಿದ್ದಕ್ಕೆ ಥಳಿಸಿದ್ದಾರೆ ಎಂದ ಸಚಿವ!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ಸುಳ್ಳು ಹೆಸರು ಹೇಳಿದ್ದಕ್ಕೆ ಥಳಿಸಿದ್ದಾರೆ ಎಂದ ಸಚಿವ!

ಈ ವಿಡಿಯೋ ಅಫ್ಘಾನಿಸ್ತಾನದ್ದಲ್ಲ, ಬದಲಾಗಿ ಭಾರತದ ಮಧ್ಯಪ್ರದೇಶದ ಇಂದೋರ್‌ನದ್ದು ಎಂದ ನೆಟ್ಟಿಗರು

- Advertisement -
- Advertisement -

ಬಳೆ ಮಾರಾಟ ಮಾಡುತ್ತಿದ್ದ 25 ವರ್ಷದ ಯುವಕನನ್ನು ಸಾರ್ವಜನಿಕರ ಎದುರೇ ಗುಂಪೊಂದು ಕ್ರೂರವಾಗಿ ಥಳಿಸಿದ್ದು, ಅವರ ಬಳಿಯಿದ್ದ 10,000 ರೂಗಳನ್ನು ಕಸಿದುಕೊಂಡು ಹೋಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ನಡೆದಿದೆ. ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನೂರಾರು ಜನರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ನಂತರ ತಡರಾತ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಹಲ್ಲೆಗೊಳಗಾದ ಯುವಕ ತನ್ನ ವ್ಯಾಪಾರಕ್ಕಾಗಿ ಸುಳ್ಳು ಹೆಸರಿನಿಂದ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಜನರ ಅರಿವಿಗೆ ಬಂದದ್ದರಿಂದ ಅವರ ಮೇಲೆ ದಾಳಿ ನಡೆದಿದೆ” ಎಂದು ರಾಜ್ಯದ ಗೃಹ ಸಚಿವ ನರೋತ್ತಮ್‌ ಮಿಶ್ರಾ ಅವರು ಪೊಲೀಸ್‌ ತನಿಖೆಯನ್ನು ಉಲ್ಲೇಖಿಸುತ್ತಾ ಹೇಳಿದ್ದಾರೆ. ಘಟನೆಗೆ ಕೊಮು ಬಣ್ಣ ನೀಡಬಾರದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು!

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂತ್ರಸ್ತ ಯುವಕನನ್ನು ತಸ್ಲೀಮ್ ಎಂದು ಗುರುತಿಸಲಾಗಿದೆ. ಇಂದೋರ್‌ನ ಬಂಗಾಂಗಾ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ದುಷ್ಕರ್ಮಿಗಳ ಗುಂಪು ಥಳಿಸುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ದುಷ್ಕರ್ಮಿಗಳು ಯುವಕನನ್ನು ಸುತ್ತುವರೆದು ಥಳಿಸುತ್ತಿರುವಾಗ ಕೋಮು ನಿಂದನೆ ಭಾಷೆಯನ್ನು ಬಳಸಿರುವುದು ಕಂಡು ಬಂದಿದೆ.

“ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ. ಅವನು ಇನ್ನು ಮುಂದೆ ಈ ಪ್ರದೇಶದಲ್ಲಿ ಕಾಣಬಾರದು” ಎಂದು ಒಬ್ಬ ವ್ಯಕ್ತಿ ಬ್ಯಾಗಿನಿಂದ ಬಳೆಗಳನ್ನು ತೆಗೆಯುತ್ತಾ ಹೇಳುತ್ತಾನೆ. ಅದೇ ವ್ಯಕ್ತಿ ಸಾರ್ವಜನಿಕರನ್ನು ಮುಂದೆ ಬಂದು ಯುವಕನನ್ನು ಥಳಿಸುವಂತೆ ಕೇಳುತ್ತಾನೆ. ಇದರ ನಂತರ, ಮೂರರಿಂದ ನಾಲ್ಕು ಜನರು ಯುವಕನಿಗೆ ನಿರ್ದಯವಾಗಿ ಥಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಜಾತಿ ಕಾರಣಕ್ಕೆ ಗಲಾಟೆ – ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

“ಅವರು ಮೊದಲು ನನ್ನ ಹೆಸರು ಕೇಳಿದರು. ನಾನು ಹೆಸರು ಹೇಳಿದ ನಂತರ ನನಗೆ ಹೊಡೆಯಲಾರಂಭಿಸಿದ್ದಾರೆ. ನನ್ನ ಬಳಿಯಿದ್ದ 10,000 ರೂ. ದೋಚಿದ್ದಲ್ಲದೆ, ನನ್ನ ಬಳಿಯಿದ್ದ ಬಳೆಗಳು ಮತ್ತು ಇತರ ವಸ್ತುಗಳನ್ನು ನಾಶ ಮಾಡಿದ್ದಾರೆ” ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರೊಂದಿಗೆ ನಾವು ಕೇಳುತ್ತಿದ್ದವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಾಗಿಯು ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಈ ವಿಡಿಯೋ ಅಫ್ಘಾನಿಸ್ತಾನದ್ದಲ್ಲ, ಬದಲಾಗಿ ಭಾರತದ ಮಧ್ಯಪ್ರದೇಶದ ಇಂದೋರ್‌ನದ್ದು. ಯುವಕನ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸುತ್ತಾರೆ, ಅವರಿಂದ ಬಳೆಗಳನ್ನು ಲೂಟಿ ಮಾಡುತ್ತಾರೆ. ಯುವಕ ಮಾಡಿದ ಏಕೈಕ ತಪ್ಪೆಂದರೆ ಆತ ಹಿಂದು ಪ್ರದೇಶದಲ್ಲಿ ಬಳೆಗಳನ್ನು ಮಾರಾಟ ಮಾಡಲು ತೆರಳಿದ್ದು” ಎಂದು ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...