Homeಮುಖಪುಟಗುಂಪು ಹಲ್ಲೆ - ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಶಾಮ್ಲಿ ಜಿಲ್ಲೆಯ ಬನಾತ್‌‌ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕೊಲೆಯಾದ ಯುವಕನನ್ನು 22 ವರ್ಷದ ಸಮೀರ್ ಎಂಬ ಗುರುತಿಸಲಾಗಿದೆ.

ಸೆಪ್ಟೆಂಬರ್ 9 ರ ಗುರುವಾರದಂದು ಲಾಠಿ ಮತ್ತು ರಾಡ್‌ಗಳಿಂದ ಹೊಡೆದು ಯುವಕನನ್ನು ಹತ್ಯೆ ಮಾಡಿಲಾಗಿದೆ ಎಂದು ವರದಿಯಾಗಿದೆ. ಮೃತ ಯುವಕನ ಚಿಕ್ಕಪ್ಪ ಆದಿಲ್ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ಎಂಟು ಜನರನ್ನು ಹೆಸರಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣದ ವಿವರ

ಶಾಮ್ಲಿ ಜಿಲ್ಲೆಯ ಆದರ್ಶ್ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬನಾತ್ ಪಟ್ಟಣದಲ್ಲಿ ಹತ್ಯೆ ನಡೆದಿದೆ. ಮೊಹಲ್ಲಾ ಪ್ರೇಮ್‌ನಗರ್ ಬನಾತ್ ನಿವಾಸಿಯಾಗಿರುವ ಆದಿಲ್ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ. ಅವರ ಪ್ರಕಾರ, ಅವರ ಸಹೋದರನ ಮಗ ಸಮೀರ್ ಗುರುವಾರ ಸಂಜೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಪಟ್ಟಣದ 10 ರಿಂದ 12 ಜನರು ಹಳೆಯ ದ್ವೇಷದಿಂದ ಶಮೀರ್‌ಗೆ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಆದಿಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ಸಮೀರ್‌ ಮೇಲೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದೆ. ಆತನನ್ನು ಎತ್ತಿಕೊಂಡು ಹೋಗಿದ್ದಲ್ಲದೆ, ಆತನ ತಲೆಗೂ ಹೊಡೆದಿದ್ದಾರೆ ಅವರು ಹೇಳಿದ್ದಾರೆ. ನಂತರ ಸಮೀರ್ ಮೃತಪಟ್ಟಿದ್ದಾರೆ ಎಂದು ಭಾವಿಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಹಳೆಯ ದ್ವೇಷದ ಕಾರಣದಿಂದ ಸಮೇರ್‌ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಸಮೀರ್ ಏಜೆನ್ಸಿಯೊಂದರಲ್ಲಿ ‘ಮೇಸ್ತ್ರಿ’ ಆಗಿ ಕೆಲಸ ಮಾಡುತ್ತಿದ್ದರು ಎಂದು ಆದಿಲ್ ಹೇಳಿದ್ದಾರೆ.

ಆರೋಪಿಗಳು ಈ ಹಿಂದೆಯು ಗೂಂಡಾಗಿರಿ ಮಾಡಿದವರಾಗಿದ್ದು, ಅವರಲ್ಲಿ ಇಬ್ಬರು ಇತ್ತೀಚೆಗೆ ಜೈಲಿನಿಂದ ಹೊರ ಬಂದಿದ್ದರು ಎಂದು ಆದಿಲ್ ತಿಳಿಸಿದ್ದಾರೆ.

ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ನಿಧನ

ಹಲ್ಲೆ ನಡೆದ ನಂತರ ಸ್ಥಳಕ್ಕೆ ಬಂದ ಸಂಬಂಧಿಕರು ಸಮೀರ್ ಅವರನ್ನು ಶಾಮ್ಲಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಅವರ ಸ್ಥಿತಿ ಗಂಭೀರ ಇದ್ದುದರಿಂದ ನಂತರ ಮುಜಫರ್‌ನಗರಕ್ಕೆ ಕಳುಹಿಸಲಾಗಿದೆ. ಆದರೆ, ಸಮೀರ್ ಮುಜಾಫರ್ ನಗರಕ್ಕೆ ತೆರಳುತ್ತಿದ್ದ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಆದಿಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ಬಂಧನವನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಶಾಮ್ಲಿ ಎಸ್ಪಿ ಸುಕೀರ್ತಿ ಮಾಧವ್ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 142, 147, ಮತ್ತು 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಹಿಂದೂ ರಕ್ಷಣಾ ದಳದ ಮುಖ್ಯಸ್ಥ ಪಿಂಕಿ ಚೌಧರಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...