Homeಮುಖಪುಟಗುಂಪು ಹಲ್ಲೆ - ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಶಾಮ್ಲಿ ಜಿಲ್ಲೆಯ ಬನಾತ್‌‌ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕೊಲೆಯಾದ ಯುವಕನನ್ನು 22 ವರ್ಷದ ಸಮೀರ್ ಎಂಬ ಗುರುತಿಸಲಾಗಿದೆ.

ಸೆಪ್ಟೆಂಬರ್ 9 ರ ಗುರುವಾರದಂದು ಲಾಠಿ ಮತ್ತು ರಾಡ್‌ಗಳಿಂದ ಹೊಡೆದು ಯುವಕನನ್ನು ಹತ್ಯೆ ಮಾಡಿಲಾಗಿದೆ ಎಂದು ವರದಿಯಾಗಿದೆ. ಮೃತ ಯುವಕನ ಚಿಕ್ಕಪ್ಪ ಆದಿಲ್ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ಎಂಟು ಜನರನ್ನು ಹೆಸರಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣದ ವಿವರ

ಶಾಮ್ಲಿ ಜಿಲ್ಲೆಯ ಆದರ್ಶ್ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬನಾತ್ ಪಟ್ಟಣದಲ್ಲಿ ಹತ್ಯೆ ನಡೆದಿದೆ. ಮೊಹಲ್ಲಾ ಪ್ರೇಮ್‌ನಗರ್ ಬನಾತ್ ನಿವಾಸಿಯಾಗಿರುವ ಆದಿಲ್ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ. ಅವರ ಪ್ರಕಾರ, ಅವರ ಸಹೋದರನ ಮಗ ಸಮೀರ್ ಗುರುವಾರ ಸಂಜೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಪಟ್ಟಣದ 10 ರಿಂದ 12 ಜನರು ಹಳೆಯ ದ್ವೇಷದಿಂದ ಶಮೀರ್‌ಗೆ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಆದಿಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ಸಮೀರ್‌ ಮೇಲೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದೆ. ಆತನನ್ನು ಎತ್ತಿಕೊಂಡು ಹೋಗಿದ್ದಲ್ಲದೆ, ಆತನ ತಲೆಗೂ ಹೊಡೆದಿದ್ದಾರೆ ಅವರು ಹೇಳಿದ್ದಾರೆ. ನಂತರ ಸಮೀರ್ ಮೃತಪಟ್ಟಿದ್ದಾರೆ ಎಂದು ಭಾವಿಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಹಳೆಯ ದ್ವೇಷದ ಕಾರಣದಿಂದ ಸಮೇರ್‌ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಸಮೀರ್ ಏಜೆನ್ಸಿಯೊಂದರಲ್ಲಿ ‘ಮೇಸ್ತ್ರಿ’ ಆಗಿ ಕೆಲಸ ಮಾಡುತ್ತಿದ್ದರು ಎಂದು ಆದಿಲ್ ಹೇಳಿದ್ದಾರೆ.

ಆರೋಪಿಗಳು ಈ ಹಿಂದೆಯು ಗೂಂಡಾಗಿರಿ ಮಾಡಿದವರಾಗಿದ್ದು, ಅವರಲ್ಲಿ ಇಬ್ಬರು ಇತ್ತೀಚೆಗೆ ಜೈಲಿನಿಂದ ಹೊರ ಬಂದಿದ್ದರು ಎಂದು ಆದಿಲ್ ತಿಳಿಸಿದ್ದಾರೆ.

ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ನಿಧನ

ಹಲ್ಲೆ ನಡೆದ ನಂತರ ಸ್ಥಳಕ್ಕೆ ಬಂದ ಸಂಬಂಧಿಕರು ಸಮೀರ್ ಅವರನ್ನು ಶಾಮ್ಲಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಅವರ ಸ್ಥಿತಿ ಗಂಭೀರ ಇದ್ದುದರಿಂದ ನಂತರ ಮುಜಫರ್‌ನಗರಕ್ಕೆ ಕಳುಹಿಸಲಾಗಿದೆ. ಆದರೆ, ಸಮೀರ್ ಮುಜಾಫರ್ ನಗರಕ್ಕೆ ತೆರಳುತ್ತಿದ್ದ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಆದಿಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ಬಂಧನವನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಶಾಮ್ಲಿ ಎಸ್ಪಿ ಸುಕೀರ್ತಿ ಮಾಧವ್ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 142, 147, ಮತ್ತು 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಹಿಂದೂ ರಕ್ಷಣಾ ದಳದ ಮುಖ್ಯಸ್ಥ ಪಿಂಕಿ ಚೌಧರಿ ಪೊಲೀಸರಿಗೆ ಶರಣು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...