Homeಮುಖಪುಟಗುಂಪು ಹಲ್ಲೆ ಎಂಬುದು ವಿದೇಶದಿಂದ ಎರವಲು ಬಂದಿದೆ: ಮೋಹನ್ ಭಾಗವತ್ ಹೇಳಿಕೆ

ಗುಂಪು ಹಲ್ಲೆ ಎಂಬುದು ವಿದೇಶದಿಂದ ಎರವಲು ಬಂದಿದೆ: ಮೋಹನ್ ಭಾಗವತ್ ಹೇಳಿಕೆ

- Advertisement -
- Advertisement -

ವಿಚಾರ ಹಾಗೂ ಅಭಿಪ್ರಾಯದ ವ್ಯತ್ಯಾಸ, ವೈರುಧ್ಯಗಳು ಏನೇ ಇರಲಿ, ಎಷ್ಟೇ ಪ್ರಚೋದನಕಾರಿ ಅಂಶಗಳು ನಡೆದಿರಲಿ, ಅವೆಲ್ಲವೂ ಸಂವಿಧಾನದ ಮಿತಿಯಲ್ಲಿ ಸಮಾಜ ವರ್ತಿಸಬೇಕು ಎಂದು ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.

ನಾಗ್ಪುರದಲ್ಲಿ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಸಾಮೂಹಿಕ ಹಲ್ಲೆ ಎಂಬುದು ವಿದೇಶಿಗರು ಕಟ್ಟಿದ ಕಟ್ಟಡ. ಇದು ಇಡೀ ದೇಶವನ್ನು ಹಾಳು ಮಾಡದಿರಲಿ. ಎಲ್ಲಿಯೇ ಪ್ರಚೋದನಕಾರಿ ಕೃತ್ಯಗಳು ನಡೆಯಲಿ, ಎಷ್ಟೇ ವೈಚಾರಿಕ ವ್ಯತ್ಯಾಸಗಳಿರಲಿ ಅದೆಲ್ಲವೂ ಸಂವಿಧಾನದ ಮಿತಿಯಲ್ಲಿರಬೇಕು. ಸಮಾಜ ಕೂಡ ಹೀಗೆ ವರ್ತಿಸಬೇಕು. ಇದು ಕೇವಲ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಕೆಲಸವಲ್ಲ. ಕೆಲವೊಮ್ಮೆ ಇದಕ್ಕೆ ವ್ಯತಿರಿಕ್ತವಾಗಿಯೂ ದಾಳಿ, ಹಲ್ಲೆ ನಡೆಯುತ್ತವೆ. ಕೆಲ ಸಂದರ್ಭದಲ್ಲಿ ನಡೆದ ಘಟನೆಗಳನ್ನು ತಿರುಚಲಾಗಿದೆ. ನಿರ್ದಿಷ್ಟ ಸಮುದಾಯಗಳು, ಕೆಲ ಸಮುದಾಯವನ್ನು ಕೇಂದ್ರೀಕರಿಸಿ, ಪರಸ್ಪರರ ಮಧ್ಯೆ ಬೆಂಕಿ ಹಚ್ಚುತ್ತಿವೆ ಎಂದು ಸಾಮೂಹಿಕ ಹಲ್ಲೆ, ಗುಂಪು ದಾಳಿಗೆ ಬೇರೆಯದೆ ಬಣ್ಣ ಹಚ್ಚಿದ್ದಾರೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಷಯಗಳನ್ನಿಟ್ಟುಕೊಂಡು ಬ್ರ್ಯಾಂಡಿಂಗ್ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇದರಿಂದ ದೇಶ ಹಾಳಾಗಲಿದೆ. ಹಿಂದೂ ಸಮಾಜ ಮತ್ತು ಇತರೆ ಸಮುದಾಯಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಸಾಮೂಹಿಕ ಹಲ್ಲೆ ಎಂಬುದು ಭಾರತದ್ದಲ್ಲ. ಇದು ಏಲಿಯನ್‍ನಂತೆ ಕಲ್ಪನಾತೀತ. ಲಿಂಚಿಂಗ್‌ ಎಂಬುದು ಭಾರತೀಯ ಪದವಲ್ಲ. ಇದು ಕಥೆಯೊಂದರಲ್ಲಿ ಧರ್ಮವನ್ನು ಬೇರ್ಪಡಿಸಲು ಇರುವ ಪದ. ಭಾರತದಲ್ಲಿ ಇಂತಹವುಗಳನ್ನು ಬಿತ್ತಬೇಡಿ ಎಂದು ಹೇಳಿದರು.

ಇನ್ನು ಸಾಮೂಹಿಕ ಹಲ್ಲೆ ಪ್ರಕರಣದಲ್ಲಿ 49 ಸೆಲೆಬ್ರಿಟಿಗಳ ವಿರುದ್ಧ ದಾಖಲಿಸಿರುವ ಎಫ್‍ಐಆರ್ ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಇದೇ ವಿಚಾರವಾಗಿ ಮೋಹನ್ ಭಾಗವತ್ ಮಾತನಾಡಿದ್ದಾರೆ. ದೇಶದಲ್ಲಿ ನಡೆದಿರುವ ಸಾಮೂಹಿಕ ಹಲ್ಲೆ ಬಗ್ಗೆ ಇದೊಂದು ಭಾರತೀಯ ಪದವಲ್ಲ ಎಂದಿದ್ದಾರೆ.

ಇನ್ನು ಜಾರ್ಖಂಡ್‍ನಲ್ಲಿ ಜೈಶ್ರೀರಾಮ್ ಘೋಷಣೆ ಕೂಗದ್ದಕ್ಕೆ 24 ವರ್ಷದ ತಬ್ರೇಜ್ ಅನ್ಸಾರಿ ಎಂಬ ಯುವಕನನ್ನು ಗುಂಪೊಂದು ಥಳಿಸಿತ್ತು. ಇದೇ ವಿಷಯ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು. ಇನ್ನು ಅನೇಕ ರೀತಿಯ ಗುಂಪು ಘರ್ಷಣೆ ಹಾಗೂ ಸಾಮೂಹಿಕ ಹಲ್ಲೆ ಪ್ರಕರಣಗಳು ದಾಖಲಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುರಾಣವನ್ನು ಇತಿಹಾಸವನ್ನಾಗಿ ಬಿಂಬಿಸಲು ಯತ್ನಿಸುತ್ತಿರುವ ಮನುವಾದಿಗಳು ಈಗ ದೇಶದಲ್ಲಿ ನಡೆದಿರುವ ನೈಜ ದುರ್ಘಟನೆಗಳನ್ನು ಕಪೋಲಕಲ್ಪಿತ ಪುರಾಣ ಕತೆಗಳನ್ನಾಗಿಸಲು ಶ್ರಮಿಸುತ್ತಿದ್ದಾರೆ. ವಾಹ್, ಇವರ ಪ್ರತಿಭೆಯನ್ನು ನಿಜಕ್ಕೂ ಮೆಚ್ಚಬೇಕು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....