Homeಮುಖಪುಟಗುಂಪು ಹಲ್ಲೆ ಎಂಬುದು ವಿದೇಶದಿಂದ ಎರವಲು ಬಂದಿದೆ: ಮೋಹನ್ ಭಾಗವತ್ ಹೇಳಿಕೆ

ಗುಂಪು ಹಲ್ಲೆ ಎಂಬುದು ವಿದೇಶದಿಂದ ಎರವಲು ಬಂದಿದೆ: ಮೋಹನ್ ಭಾಗವತ್ ಹೇಳಿಕೆ

- Advertisement -
- Advertisement -

ವಿಚಾರ ಹಾಗೂ ಅಭಿಪ್ರಾಯದ ವ್ಯತ್ಯಾಸ, ವೈರುಧ್ಯಗಳು ಏನೇ ಇರಲಿ, ಎಷ್ಟೇ ಪ್ರಚೋದನಕಾರಿ ಅಂಶಗಳು ನಡೆದಿರಲಿ, ಅವೆಲ್ಲವೂ ಸಂವಿಧಾನದ ಮಿತಿಯಲ್ಲಿ ಸಮಾಜ ವರ್ತಿಸಬೇಕು ಎಂದು ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.

ನಾಗ್ಪುರದಲ್ಲಿ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಸಾಮೂಹಿಕ ಹಲ್ಲೆ ಎಂಬುದು ವಿದೇಶಿಗರು ಕಟ್ಟಿದ ಕಟ್ಟಡ. ಇದು ಇಡೀ ದೇಶವನ್ನು ಹಾಳು ಮಾಡದಿರಲಿ. ಎಲ್ಲಿಯೇ ಪ್ರಚೋದನಕಾರಿ ಕೃತ್ಯಗಳು ನಡೆಯಲಿ, ಎಷ್ಟೇ ವೈಚಾರಿಕ ವ್ಯತ್ಯಾಸಗಳಿರಲಿ ಅದೆಲ್ಲವೂ ಸಂವಿಧಾನದ ಮಿತಿಯಲ್ಲಿರಬೇಕು. ಸಮಾಜ ಕೂಡ ಹೀಗೆ ವರ್ತಿಸಬೇಕು. ಇದು ಕೇವಲ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಕೆಲಸವಲ್ಲ. ಕೆಲವೊಮ್ಮೆ ಇದಕ್ಕೆ ವ್ಯತಿರಿಕ್ತವಾಗಿಯೂ ದಾಳಿ, ಹಲ್ಲೆ ನಡೆಯುತ್ತವೆ. ಕೆಲ ಸಂದರ್ಭದಲ್ಲಿ ನಡೆದ ಘಟನೆಗಳನ್ನು ತಿರುಚಲಾಗಿದೆ. ನಿರ್ದಿಷ್ಟ ಸಮುದಾಯಗಳು, ಕೆಲ ಸಮುದಾಯವನ್ನು ಕೇಂದ್ರೀಕರಿಸಿ, ಪರಸ್ಪರರ ಮಧ್ಯೆ ಬೆಂಕಿ ಹಚ್ಚುತ್ತಿವೆ ಎಂದು ಸಾಮೂಹಿಕ ಹಲ್ಲೆ, ಗುಂಪು ದಾಳಿಗೆ ಬೇರೆಯದೆ ಬಣ್ಣ ಹಚ್ಚಿದ್ದಾರೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಷಯಗಳನ್ನಿಟ್ಟುಕೊಂಡು ಬ್ರ್ಯಾಂಡಿಂಗ್ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇದರಿಂದ ದೇಶ ಹಾಳಾಗಲಿದೆ. ಹಿಂದೂ ಸಮಾಜ ಮತ್ತು ಇತರೆ ಸಮುದಾಯಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಸಾಮೂಹಿಕ ಹಲ್ಲೆ ಎಂಬುದು ಭಾರತದ್ದಲ್ಲ. ಇದು ಏಲಿಯನ್‍ನಂತೆ ಕಲ್ಪನಾತೀತ. ಲಿಂಚಿಂಗ್‌ ಎಂಬುದು ಭಾರತೀಯ ಪದವಲ್ಲ. ಇದು ಕಥೆಯೊಂದರಲ್ಲಿ ಧರ್ಮವನ್ನು ಬೇರ್ಪಡಿಸಲು ಇರುವ ಪದ. ಭಾರತದಲ್ಲಿ ಇಂತಹವುಗಳನ್ನು ಬಿತ್ತಬೇಡಿ ಎಂದು ಹೇಳಿದರು.

ಇನ್ನು ಸಾಮೂಹಿಕ ಹಲ್ಲೆ ಪ್ರಕರಣದಲ್ಲಿ 49 ಸೆಲೆಬ್ರಿಟಿಗಳ ವಿರುದ್ಧ ದಾಖಲಿಸಿರುವ ಎಫ್‍ಐಆರ್ ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಇದೇ ವಿಚಾರವಾಗಿ ಮೋಹನ್ ಭಾಗವತ್ ಮಾತನಾಡಿದ್ದಾರೆ. ದೇಶದಲ್ಲಿ ನಡೆದಿರುವ ಸಾಮೂಹಿಕ ಹಲ್ಲೆ ಬಗ್ಗೆ ಇದೊಂದು ಭಾರತೀಯ ಪದವಲ್ಲ ಎಂದಿದ್ದಾರೆ.

ಇನ್ನು ಜಾರ್ಖಂಡ್‍ನಲ್ಲಿ ಜೈಶ್ರೀರಾಮ್ ಘೋಷಣೆ ಕೂಗದ್ದಕ್ಕೆ 24 ವರ್ಷದ ತಬ್ರೇಜ್ ಅನ್ಸಾರಿ ಎಂಬ ಯುವಕನನ್ನು ಗುಂಪೊಂದು ಥಳಿಸಿತ್ತು. ಇದೇ ವಿಷಯ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು. ಇನ್ನು ಅನೇಕ ರೀತಿಯ ಗುಂಪು ಘರ್ಷಣೆ ಹಾಗೂ ಸಾಮೂಹಿಕ ಹಲ್ಲೆ ಪ್ರಕರಣಗಳು ದಾಖಲಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುರಾಣವನ್ನು ಇತಿಹಾಸವನ್ನಾಗಿ ಬಿಂಬಿಸಲು ಯತ್ನಿಸುತ್ತಿರುವ ಮನುವಾದಿಗಳು ಈಗ ದೇಶದಲ್ಲಿ ನಡೆದಿರುವ ನೈಜ ದುರ್ಘಟನೆಗಳನ್ನು ಕಪೋಲಕಲ್ಪಿತ ಪುರಾಣ ಕತೆಗಳನ್ನಾಗಿಸಲು ಶ್ರಮಿಸುತ್ತಿದ್ದಾರೆ. ವಾಹ್, ಇವರ ಪ್ರತಿಭೆಯನ್ನು ನಿಜಕ್ಕೂ ಮೆಚ್ಚಬೇಕು.

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...