Homeಮುಖಪುಟಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

- Advertisement -
- Advertisement -

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಮಧ್ಯಪ್ರದೇಶದ ಅಲಿರಾಜ್‌ಪುರದಲ್ಲಿ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೇಸರಿ ಶಾಲು ಧರಿಸಿದ ಕೆಲವು ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು  ವಿಡಿಯೋದಲ್ಲಿ ಕಾಣಬಹುದು. ಭಗೋರಿಯಾ ಹಬ್ಬದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಕಾಂಗ್ರೆಸ್ ನಾಯಕ ಕೆಕೆ ಮಿಶ್ರಾ ಅವರು ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಕ್ರಮ ತೆಗೆದುಕೊಳ್ಳದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಈ ಘಟನೆ ನಡೆದಿದೆ. ಅಲಿರಾಜಪುರ ಜಿಲ್ಲೆಯ ವಾಲ್ಪುರ್ ಗ್ರಾಮದಲ್ಲಿ ಮಾರ್ಚ್ 11 ರಂದು ಭಗೋರಿಯಾ ಜಾತ್ರೆ ನಡೆಯಿತು ಎಂದು ತಿಳಿದುಬಂದಿದೆ.

ವೈರಲ್‌ ಆಗಿರುವ ವಿಡಿಯೊದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಯುವಕರ ಗುಂಪು ಕಿರುಕುಳ ನೀಡುತ್ತಿರುವುದನ್ನು ಕಾಣಬಹುದು. ವಾಹನ ಮರೆಯಲ್ಲಿರುವ ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಒಂದೆಡೆಯಾದರೆ, ಮತ್ತೊಬ್ಬ ಬಾಲಕಿಯನ್ನು ನಡುಬೀದಿಯಲ್ಲಿ ಎಳೆದಾಡಿ ಕಿರುಕುಳ ನೀಡುವುದನ್ನು ಕಾಣಬಹುದು.

ಘಟನೆಯ ಬಗ್ಗೆ ದೂರುಗಳು ಬಂದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಎಚ್ಚೆತ್ತುಕೊಂಡು ಕ್ರಮ ಜರುಗಿಸಿದ್ದಾರೆ ಎಂದು ಅಲಿರಾಜ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮನೋಜ್ ಸಿಂಗ್ ಹೇಳಿದ್ದಾರೆ. ನಾವು ಕೆಲವು ಯುವಕರನ್ನು ಗುರುತಿಸಿದ್ದೇವೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯಗಳು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಗೋರಿಯಾವನ್ನು ಆಯೋಜಿಸಲಾಗುತ್ತದೆ. ಇದು ಆದಿವಾಸಿಗಳ ದೊಡ್ಡ ಹಬ್ಬವೆಂದು ಪರಿಗಣಿಸಲ್ಪಟ್ಟಿದೆ. ಪ್ರತಿ ವರ್ಷ ಗಂಗಾ ಮಹಾದೇವನ ದೇವಸ್ಥಾನದಲ್ಲಿ ಜಾತ್ರೆಯನ್ನು ಆಯೋಜಿಸುವುದರೊಂದಿಗೆ ಹಬ್ಬ ಪ್ರಾರಂಭವಾಗುತ್ತದೆ. ಅಲಿರಾಜಪುರದ ವಾಲ್ಪುರ್‌ನ ಭಗೋರಿಯಾ ಹಬ್ಬ ಬಹಳ ಜನಪ್ರಿಯವಾಗಿದೆ.

ಟ್ರೈಬಲ್‌ ಆರ್ಮಿ ಟ್ವಿಟರ್‌ ಖಾತೆಯಲ್ಲಿ ಘಟನೆಯ ಕುರಿತು ಟ್ವೀಟ್ ಮಾಡಲಾಗಿದ್ದು, “ಇದು ಭೀಕರ ದೃಶ್ಯ. ಬುಡಕಟ್ಟು ಮಹಿಳೆಯರ ಮೇಲಾಗಿರುವ ಇಂತಹ ಘಟನೆಗಳು ನಿತ್ಯವೂ ಘಟಿಸುತ್ತವೆ. ಯಾಕೆಂದರೆ ಬುಡಕಟ್ಟು ಮಹಿಳೆಯರು ಅಲಕ್ಷಿತ ಸಮುದಾಯಕ್ಕೆ ಸೇರಿರುವುದರಿಂದ ಇಂತಹ ಘಟನೆಗಳಾಗುತ್ತವೆ” ಎಂದು ಅಭಿಪ್ರಾಯಪಡಲಾಗಿದೆ.

‘ದಿ ದಲಿತ್‌ ವಾಯ್ಸ್‌’ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದ್ದು, “ಅತ್ಯಂತ ಭಯಾನಕವಾಗಿ ಬುಡಕಟ್ಟು ಹುಡುಗಿಯೊಬ್ಬಳನ್ನು ಕೇಸರಿ ವಸ್ತ್ರಧಾರಿ ಹಿಂದೂ ಗೂಂಡಾಗಳು ಹಾಡಹಗಲೇ ಕಿರುಕುಳ ನೀಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.


ಇದನ್ನೂ ಓದಿರಿ: ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...