Homeಕರ್ನಾಟಕಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

ಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

- Advertisement -
- Advertisement -

ಬೆಂಗಳೂರಿನ ನಗರ್ತ ಪೇಟೆಯ ಟೆಲಿಕಾಂ ಅಂಗಡಿಯೊಂದರಲ್ಲಿ ಲೌಡ್ ಸ್ಪೀಕರ್ ವಿಚಾರವಾಗಿ ಅಂಗಡಿ ಮಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಪ್ರತಿಕ್ರಿಯಿಸಿದ್ದಾರೆ. ಇದು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದ ಗಲಾಟೆಯಲ್ಲ, ಇದನ್ನು ಇಷ್ಟೊಂದು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡಿದ್ದ ಬಿಜೆಪಿಗೆ ದೊಡ್ಡ ಮುಜುಗರವಾಗಿದೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಶಾಸಕ ಉದಯ್‌ ಗರುಡಾಚಾರ್‌, ಅದು ನನ್ನದೇ ಕ್ಷೇತ್ರ, ನಾನು ಘಟನೆ ಬಗ್ಗೆ ಎಲ್ಲಾ ತಿಳ್ಕೊಂಡಿದ್ದೇನೆ, ಇದನ್ನು ಇಷ್ಟು ದೊಡ್ಡ ಮಾಡುವ ಅಗತ್ಯ ಇರಲಿಲ್ಲ. ಈಗ ಚುನಾವಣೆ ಸಮಯ ಎಲ್ಲಾ ಉದ್ರೇಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನನಗೆ ತಿಳಿದಿದೆ. ಅನ್ಯ ಕೋಮಿನ ಜನರು ಹಲ್ಲೆ ಮಾಡಿದ್ದಾರೆ ಎಂದು ನಾನು ಯಾವತ್ತೂ ಹೇಳಲ್ಲ, ನಾನು ಸೆಕ್ಯೂಲರ್‌ ವ್ಯಕ್ತಿ ಎಲ್ಲಾ ಜನಾಂಗದವರು ಚೆನ್ನಾಗಿ ಇರಬೇಕು ಎಂದು ಹೇಳುವವನು. ನನ್ನ ಕ್ಷೇತ್ರದಲ್ಲಿ ಎಲ್ಲವೂ ನಿಯಂತ್ರಣದಲ್ಲಿದೆ. ಇದುವರೆಗೆ ನಮ್ಮಲ್ಲಿ ಯಾವುದೇ ಸಮಸ್ಯೆಯಾಗಿಲ್ಲ, ಕ್ಷೇತ್ರದಲ್ಲಿ ವ್ಯಾಪರಸ್ಥರು ಸೇರಿದಂತೆ ಎಲ್ಲರೂ ಸುಲಲಿತವಾಗಿ ಜೀವನವನ್ನು ನಡೆಸುತ್ತಿದ್ದಾರೆ. ಕಾನೂನು ನಂತರದ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ತೇಜಸ್ವಿ ಸೂರ್ಯ ನನ್ನಲ್ಲಿ ಮಾತನಾಡಿದ್ದಾರೆ, ಈ ವೇಳೆ ನಾನು ಸೂರ್ಯ ಅವರಲ್ಲಿ ಆರೋಪಿಗಳ ಬಂಧನವಾಗಿದೆ. ಇನ್ನು ಕಾನೂನು ಅದರ ಕೆಲಸವನ್ನು ಮಾಡುತ್ತದೆ ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಕರ್ನಾಟಕದ ಬಿಜೆಪಿಗರಿಗೆ ತಪರಾಕಿ ನೀಡಿದ್ದಾರೆ, ಇದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ.

ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ! ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.
ಏನಿದು ಘಟನೆ:

ಬೆಂಗಳೂರು ನಗರದ ಸಿದ್ದಣ್ಣ ಗಲ್ಲಿಯ ನಗರ್ತಪೇಟೆಯಲ್ಲಿ ಮೊಬೈಲ್‌ ಅಂಗಡಿ ಬಳಿ ಬಂದು ಅಂಗಡಿ ಮಾಲಕ ಮುಖೇಶ್ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಮುಖೇಶ್ ಅಂಗಡಿಗೆ ಬಂದ ಯುವಕರ ಗುಂಪಿನ ಜೊತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು, ಮಾತಿಗೆ ಮಾತು ಬೆಳೆದು ಗುಂಪಿನಲ್ಲಿದ್ದ ಯುವಕನೊಬ್ಬ ಮುಖೇಶ್‍ ಮೇಲೆ ಹಲ್ಲೆ ಮಾಡುವುದು. ಈ ವೇಳೆ ಅಂಗಡಿಯಿಂದ ಹೊರ ಬರುವ ಮುಖೇಶ್ ಯುವಕರ ಮೇಲೆ ಪ್ರತಿ ಹಲ್ಲೆ ನಡೆಸುವುದು ಸೆರೆಯಾಗಿದೆ.

ಆದರೆ ಈ ಬಗ್ಗೆ ಸುಳ್ಳು ಆಯಾಮಗಳನ್ನು ನೀಡಿ ಕನ್ನಡ ಮಾದ್ಯಮಗಳು ಮತ್ತು ಬಿಜೆಪಿ ಪ್ರಚಾರವನ್ನು ಮಾಡಿತ್ತು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಎಂದು ಯುವಕನಿಗೆ ಥಳಿಸಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಬಿತ್ತಲಾಗಿತ್ತು. ದೂರುದಾರ ನೀಡಿದ ದೂರಿನಲ್ಲಿಯೂ ಆಝಾನ್, ಹನುಮಾನ್ ಚಾಲಿಸಾದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ. ಆದರೆ ಬಿಜೆಪಿ ಚುನಾವಣೆ ಹೊಸ್ತಿಲಲ್ಲ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿ ರಾಜಕೀಯ ಲಾಭವನ್ನು ಪಡೆಯಲು ಮುಂದಾಗಿರುವುದು ವಿಪರ್ಯಾಸವಾಗಿದೆ. ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಎಫ್‍ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ಇದು ಸುಳ್ಳು ಆರೋಪ ಎನ್ನುವುದು ಆ ಬಳಿಕ ಬಯಲಾಗಿತ್ತು.

ಮುಖೇಶ್ ತನ್ನ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಭಜನೆ ಹಾಡುಗಳನ್ನು ಹಾಕಿದ್ದನ್ನು ಆಕ್ಷೇಪಿಸಿ ಅವರ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದರು.

ಇದನ್ನು ಓದಿ: ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...