Homeಮುಖಪುಟಸಂಸತ್ತಿನ ಮೊದಲ ಮಹಡಿಯಲ್ಲಿ 'ಮೋದಾನಿ' ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

- Advertisement -
- Advertisement -

ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ, ಆ ಬಗ್ಗೆ ಮಾತೇ ಆಡುತ್ತಿಲ್ಲ. ಹಾಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ವಿನೂತನವಾಗಿ ಪ್ರತಿಭಟಿಸಿವೆ.

ಮಂಗಳವಾರದ ಸಂಸತ್ತ ಕಲಾಪ ಆರಂಭವಾಗುವುದಕ್ಕೂ ಮುನ್ನ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ‘ವಿನೂತನ’ ಪ್ರತಿಭಟನೆಗೆ ನಿಧಾರ ತಗೆದುಕೊಳ್ಳಲಾಯಿತು.

ಸಂಸತ್ತಿನ ಉಭಯ ಸದನಗಳ ಕಲಾಪವು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾದ ಬಳಿಕ, 17 ಪ್ರತಿಪಕ್ಷಗಳ ಸಂಸದರು ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಎಸ್‌ಬಿಐ ಕಚೇರಿ ಎದುರು ಸೇರಿದರು. ಅದಾನಿ ಸಮೂಹಕ್ಕೆ ಸಾಲ ನೀಡಿರುವ ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಸಂಸತ್ತಿನ ಮೊದಲ ಮಹಡಿಯಲ್ಲಿ ಪ್ರತಿಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭಾವಚಿತ್ರಗಳಿರುವ ಬೃಹತ್ ಗಾತ್ರದ ಬ್ಯಾನರ್‌ನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದವು. ಸಂಸತ್ ಭವನದಲ್ಲಿ ಈ ರೀತಿಯ ದೊಡ್ಡ ಬ್ಯಾನರ್ ನೇತುಹಾಕಿ ಪ್ರತಿಭಟಿಸಿದ್ದು ಇದೇ ಮೊದಲು ಎನ್ನಬಹುದು.

ಆ ಬ್ಯಾನರ್‌ನಲ್ಲಿ ‘ಮೋದಾನಿ’, ‘ನಮಗೆ ಜೆಪಿಸಿ ಬೇಕು’ ಎಂದು ಬರೆಯಲಾಗಿದೆ. ಈ ವೇಳೆ ”ಮೋದಿ ಮತ್ತು ಅದಾನಿ ಅಣ್ಣತಮ್ಮಂದಿರು. ಇಬ್ಬರೂ ಸೇರಿ ದೇಶವನ್ನು ಮಾರುತ್ತಾರೆ” ಎನ್ನುವ ಘೋಷಣೆಗಳನ್ನು ಕೂಗಿ ಪ್ರತಿಪಕ್ಷಗಲು ತಮ್ಮ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್, ಎಎಪಿ, ಬಿಆರ್‌ಎಸ್, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎನ್‌ಸಿಪಿ ಹಾಗೂ ಎಸ್‌ಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಈ ಪ್ರತಿಪಕ್ಷಗಳ ಪ್ರತಿಭಟನೆಯಿಂದ ತೃಣಮೂಲ ಕಾಂಗ್ರೆಸ್ ಮತ್ತೆ ಅಂತರ ಕಾಯ್ದುಕೊಂಡಿದೆ. ಪ್ರತಿಪಕ್ಷಗಳ ಗುಂಪಿನಲ್ಲಿದ್ದರೂ, ಪ್ರತ್ಯೇಕ ಮಾರ್ಗ ಅನುಸರಿಸುತ್ತಿರುವ ಟಿಎಂಸಿ, ಅದಾನಿ ವಿಚಾರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದಾನಿಯನ್ನು ಬಂಧಿಸಿ ಎಂಬ ಬರಹವುಳ್ಳ ಹಾಗೂ ಎಲ್ಲ ಟಿಎಂಸಿ ಸಂಸದರ ಸಹಿ ಇರುವ ಟೋಪಿಯನ್ನು ಧರಿಸಿ ಸಂಸದರು ಸಂಸತ್ ಭವನದ ಪಕ್ಷದ ಕಚೇರಿಯಿಂದ ವಿಜಯ್ ಚೌಕದವರೆಗೆ ಮೆರವಣಿಗೆ ನಡೆಸಿದರು.

”ಹಣಕಾಸು ಸಚಿವರು, ಸೆಬಿ, ಎಲ್‌ಐಸಿ, ಎಸ್‌ಬಿಐ ಮುಖ್ಯಸ್ಥರಿಗೆ ಟೋಪಿಯನ್ನು ನೀಡಲಾಗುವುದು” ಎಂದು ರಾಜ್ಯಸಭೆಯಲ್ಲಿ ಟಿಎಂಸಿ ಪಕ್ಷದ ನಾಯಕರಾಗಿರುವ ಡೆರೆಕ್ ಒಬ್ರಿಯನ್ ತಿಳಿಸಿದರು.

ಅದಾನಿ ಪ್ರಕರಣದಲ್ಲಿ ಪಕ್ಷವು ಮೆದುವಾಗಿ ನಡೆದುಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಅದಾನಿಯನ್ನು ಬಂಧಿಸಿ ಎಂದು ಆಗ್ರಹಿಸಿರುವ ಏಕೈಕ ಪಕ್ಷ ತಮ್ಮದು ಎಂದು ಹೇಳಿಕೊಂಡಿದೆ.

ಸಂಸತ್ ಕಲಾಪದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮಂಗಳವಾರ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್ ಅವರು, ಕರೆದಿದ್ದ ಎರಡು ಸಭೆಗಳಿಗೆ ಪ್ರತಿಪಕ್ಷದ ಸದಸ್ಯರು ಹಾಜರಾಗಲಿಲ್ಲ. ”ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಸಿದ್ಧವಿಲ್ಲ ಎಂಬುದು ಈ ನಡೆಯಿಂದ ಗೊತ್ತಾಗುತ್ತದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸರ್ಕಾರದ ಜೊತೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ” ಎಂದು ಪ್ರತಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಭಾಗಿಯಾಗಿದ್ದವು. ಇನ್ನುಳಿದ ಪ್ರತಿಪಕ್ಷಗಳು ಸಭೆಗೆ ಹಾಜರಾಗದಿರುವುದು ಸರಿಯಯಾದ ವರ್ತನೆಯಲ್ಲ. ಸಭೆಗೂ ಮುನ್ನ ತಮ್ಮನ್ನು ಭೇಟಿಯಾಗಿದ್ದ ಕಾಂಗ್ರೆಸ್ ಮುಖ್ಯ ಸಚೇತಕ ಮತ್ತು ಡಿಎಂಕೆ ಸದನ ನಾಯಕರು ಸಭೆಗೆ ಹಾಜರಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದರು ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

ಧನಕರ್ ಅವರು ಮಧ್ಯಾಹ್ನ 2.30ಕ್ಕೆ ಮತ್ತೊಂದು ಸಭೆ ಕರೆದಿದ್ದರು. ಈ ಸಭೆಯಲ್ಲಿ ಪ್ರತಿಪಕ್ಷಗಳಾದ ಎನ್‌ಸಿಪಿ, ಡಿಎಂಕೆ ಹಾಗೂ ಟಿಎಂಸಿಯ ಕೆಲವು ಪ್ರತಿನಿಧಿಗಳು ಕಾಣಿಸಿಕೊಂಡರು. ಸಭಾಪತಿಗೆ ಪದೇಪದೇ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಕೆಲವರನ್ನು ಸಭೆಗೆ ಕಳುಹಿಸಲು ಪ್ರತಿಪಕ್ಷಗಳು ತೀರ್ಮಾನಿಸಿದ್ದವು ಎಂದು ಮೂಲಗಳು ಹೇಳಿವೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ತಮ್ಮ ವಿಷಯಗಳನ್ನು ಪಕ್ಕಕ್ಕಿಡಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಲಹೆ ನೀಡಿದ್ದಾರೆ. ಆಡಳಿತರೂಢ ಬಿಜೆಪಿ ಇದಕ್ಕೆ ಒಪ್ಪಿಕೊಂಡಿತು. ಆದರೆ, ಅದಾನಿ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು. ಇದೇ ವೇಳೆ ಅವರು, ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...