Homeಮುಖಪುಟಸಂಸತ್ತಿನ ಮೊದಲ ಮಹಡಿಯಲ್ಲಿ 'ಮೋದಾನಿ' ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

- Advertisement -
- Advertisement -

ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ, ಆ ಬಗ್ಗೆ ಮಾತೇ ಆಡುತ್ತಿಲ್ಲ. ಹಾಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ವಿನೂತನವಾಗಿ ಪ್ರತಿಭಟಿಸಿವೆ.

ಮಂಗಳವಾರದ ಸಂಸತ್ತ ಕಲಾಪ ಆರಂಭವಾಗುವುದಕ್ಕೂ ಮುನ್ನ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ‘ವಿನೂತನ’ ಪ್ರತಿಭಟನೆಗೆ ನಿಧಾರ ತಗೆದುಕೊಳ್ಳಲಾಯಿತು.

ಸಂಸತ್ತಿನ ಉಭಯ ಸದನಗಳ ಕಲಾಪವು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾದ ಬಳಿಕ, 17 ಪ್ರತಿಪಕ್ಷಗಳ ಸಂಸದರು ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಎಸ್‌ಬಿಐ ಕಚೇರಿ ಎದುರು ಸೇರಿದರು. ಅದಾನಿ ಸಮೂಹಕ್ಕೆ ಸಾಲ ನೀಡಿರುವ ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಸಂಸತ್ತಿನ ಮೊದಲ ಮಹಡಿಯಲ್ಲಿ ಪ್ರತಿಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭಾವಚಿತ್ರಗಳಿರುವ ಬೃಹತ್ ಗಾತ್ರದ ಬ್ಯಾನರ್‌ನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದವು. ಸಂಸತ್ ಭವನದಲ್ಲಿ ಈ ರೀತಿಯ ದೊಡ್ಡ ಬ್ಯಾನರ್ ನೇತುಹಾಕಿ ಪ್ರತಿಭಟಿಸಿದ್ದು ಇದೇ ಮೊದಲು ಎನ್ನಬಹುದು.

ಆ ಬ್ಯಾನರ್‌ನಲ್ಲಿ ‘ಮೋದಾನಿ’, ‘ನಮಗೆ ಜೆಪಿಸಿ ಬೇಕು’ ಎಂದು ಬರೆಯಲಾಗಿದೆ. ಈ ವೇಳೆ ”ಮೋದಿ ಮತ್ತು ಅದಾನಿ ಅಣ್ಣತಮ್ಮಂದಿರು. ಇಬ್ಬರೂ ಸೇರಿ ದೇಶವನ್ನು ಮಾರುತ್ತಾರೆ” ಎನ್ನುವ ಘೋಷಣೆಗಳನ್ನು ಕೂಗಿ ಪ್ರತಿಪಕ್ಷಗಲು ತಮ್ಮ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್, ಎಎಪಿ, ಬಿಆರ್‌ಎಸ್, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎನ್‌ಸಿಪಿ ಹಾಗೂ ಎಸ್‌ಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಈ ಪ್ರತಿಪಕ್ಷಗಳ ಪ್ರತಿಭಟನೆಯಿಂದ ತೃಣಮೂಲ ಕಾಂಗ್ರೆಸ್ ಮತ್ತೆ ಅಂತರ ಕಾಯ್ದುಕೊಂಡಿದೆ. ಪ್ರತಿಪಕ್ಷಗಳ ಗುಂಪಿನಲ್ಲಿದ್ದರೂ, ಪ್ರತ್ಯೇಕ ಮಾರ್ಗ ಅನುಸರಿಸುತ್ತಿರುವ ಟಿಎಂಸಿ, ಅದಾನಿ ವಿಚಾರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದಾನಿಯನ್ನು ಬಂಧಿಸಿ ಎಂಬ ಬರಹವುಳ್ಳ ಹಾಗೂ ಎಲ್ಲ ಟಿಎಂಸಿ ಸಂಸದರ ಸಹಿ ಇರುವ ಟೋಪಿಯನ್ನು ಧರಿಸಿ ಸಂಸದರು ಸಂಸತ್ ಭವನದ ಪಕ್ಷದ ಕಚೇರಿಯಿಂದ ವಿಜಯ್ ಚೌಕದವರೆಗೆ ಮೆರವಣಿಗೆ ನಡೆಸಿದರು.

”ಹಣಕಾಸು ಸಚಿವರು, ಸೆಬಿ, ಎಲ್‌ಐಸಿ, ಎಸ್‌ಬಿಐ ಮುಖ್ಯಸ್ಥರಿಗೆ ಟೋಪಿಯನ್ನು ನೀಡಲಾಗುವುದು” ಎಂದು ರಾಜ್ಯಸಭೆಯಲ್ಲಿ ಟಿಎಂಸಿ ಪಕ್ಷದ ನಾಯಕರಾಗಿರುವ ಡೆರೆಕ್ ಒಬ್ರಿಯನ್ ತಿಳಿಸಿದರು.

ಅದಾನಿ ಪ್ರಕರಣದಲ್ಲಿ ಪಕ್ಷವು ಮೆದುವಾಗಿ ನಡೆದುಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಅದಾನಿಯನ್ನು ಬಂಧಿಸಿ ಎಂದು ಆಗ್ರಹಿಸಿರುವ ಏಕೈಕ ಪಕ್ಷ ತಮ್ಮದು ಎಂದು ಹೇಳಿಕೊಂಡಿದೆ.

ಸಂಸತ್ ಕಲಾಪದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮಂಗಳವಾರ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್ ಅವರು, ಕರೆದಿದ್ದ ಎರಡು ಸಭೆಗಳಿಗೆ ಪ್ರತಿಪಕ್ಷದ ಸದಸ್ಯರು ಹಾಜರಾಗಲಿಲ್ಲ. ”ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಸಿದ್ಧವಿಲ್ಲ ಎಂಬುದು ಈ ನಡೆಯಿಂದ ಗೊತ್ತಾಗುತ್ತದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸರ್ಕಾರದ ಜೊತೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ” ಎಂದು ಪ್ರತಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಭಾಗಿಯಾಗಿದ್ದವು. ಇನ್ನುಳಿದ ಪ್ರತಿಪಕ್ಷಗಳು ಸಭೆಗೆ ಹಾಜರಾಗದಿರುವುದು ಸರಿಯಯಾದ ವರ್ತನೆಯಲ್ಲ. ಸಭೆಗೂ ಮುನ್ನ ತಮ್ಮನ್ನು ಭೇಟಿಯಾಗಿದ್ದ ಕಾಂಗ್ರೆಸ್ ಮುಖ್ಯ ಸಚೇತಕ ಮತ್ತು ಡಿಎಂಕೆ ಸದನ ನಾಯಕರು ಸಭೆಗೆ ಹಾಜರಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದರು ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

ಧನಕರ್ ಅವರು ಮಧ್ಯಾಹ್ನ 2.30ಕ್ಕೆ ಮತ್ತೊಂದು ಸಭೆ ಕರೆದಿದ್ದರು. ಈ ಸಭೆಯಲ್ಲಿ ಪ್ರತಿಪಕ್ಷಗಳಾದ ಎನ್‌ಸಿಪಿ, ಡಿಎಂಕೆ ಹಾಗೂ ಟಿಎಂಸಿಯ ಕೆಲವು ಪ್ರತಿನಿಧಿಗಳು ಕಾಣಿಸಿಕೊಂಡರು. ಸಭಾಪತಿಗೆ ಪದೇಪದೇ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಕೆಲವರನ್ನು ಸಭೆಗೆ ಕಳುಹಿಸಲು ಪ್ರತಿಪಕ್ಷಗಳು ತೀರ್ಮಾನಿಸಿದ್ದವು ಎಂದು ಮೂಲಗಳು ಹೇಳಿವೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ತಮ್ಮ ವಿಷಯಗಳನ್ನು ಪಕ್ಕಕ್ಕಿಡಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಲಹೆ ನೀಡಿದ್ದಾರೆ. ಆಡಳಿತರೂಢ ಬಿಜೆಪಿ ಇದಕ್ಕೆ ಒಪ್ಪಿಕೊಂಡಿತು. ಆದರೆ, ಅದಾನಿ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು. ಇದೇ ವೇಳೆ ಅವರು, ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...