Homeಮುಖಪುಟಸಂಸತ್ತಿನ ಮೊದಲ ಮಹಡಿಯಲ್ಲಿ 'ಮೋದಾನಿ' ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

- Advertisement -
- Advertisement -

ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ, ಆ ಬಗ್ಗೆ ಮಾತೇ ಆಡುತ್ತಿಲ್ಲ. ಹಾಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ವಿನೂತನವಾಗಿ ಪ್ರತಿಭಟಿಸಿವೆ.

ಮಂಗಳವಾರದ ಸಂಸತ್ತ ಕಲಾಪ ಆರಂಭವಾಗುವುದಕ್ಕೂ ಮುನ್ನ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ‘ವಿನೂತನ’ ಪ್ರತಿಭಟನೆಗೆ ನಿಧಾರ ತಗೆದುಕೊಳ್ಳಲಾಯಿತು.

ಸಂಸತ್ತಿನ ಉಭಯ ಸದನಗಳ ಕಲಾಪವು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾದ ಬಳಿಕ, 17 ಪ್ರತಿಪಕ್ಷಗಳ ಸಂಸದರು ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಎಸ್‌ಬಿಐ ಕಚೇರಿ ಎದುರು ಸೇರಿದರು. ಅದಾನಿ ಸಮೂಹಕ್ಕೆ ಸಾಲ ನೀಡಿರುವ ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಸಂಸತ್ತಿನ ಮೊದಲ ಮಹಡಿಯಲ್ಲಿ ಪ್ರತಿಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭಾವಚಿತ್ರಗಳಿರುವ ಬೃಹತ್ ಗಾತ್ರದ ಬ್ಯಾನರ್‌ನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದವು. ಸಂಸತ್ ಭವನದಲ್ಲಿ ಈ ರೀತಿಯ ದೊಡ್ಡ ಬ್ಯಾನರ್ ನೇತುಹಾಕಿ ಪ್ರತಿಭಟಿಸಿದ್ದು ಇದೇ ಮೊದಲು ಎನ್ನಬಹುದು.

ಆ ಬ್ಯಾನರ್‌ನಲ್ಲಿ ‘ಮೋದಾನಿ’, ‘ನಮಗೆ ಜೆಪಿಸಿ ಬೇಕು’ ಎಂದು ಬರೆಯಲಾಗಿದೆ. ಈ ವೇಳೆ ”ಮೋದಿ ಮತ್ತು ಅದಾನಿ ಅಣ್ಣತಮ್ಮಂದಿರು. ಇಬ್ಬರೂ ಸೇರಿ ದೇಶವನ್ನು ಮಾರುತ್ತಾರೆ” ಎನ್ನುವ ಘೋಷಣೆಗಳನ್ನು ಕೂಗಿ ಪ್ರತಿಪಕ್ಷಗಲು ತಮ್ಮ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್, ಎಎಪಿ, ಬಿಆರ್‌ಎಸ್, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎನ್‌ಸಿಪಿ ಹಾಗೂ ಎಸ್‌ಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಈ ಪ್ರತಿಪಕ್ಷಗಳ ಪ್ರತಿಭಟನೆಯಿಂದ ತೃಣಮೂಲ ಕಾಂಗ್ರೆಸ್ ಮತ್ತೆ ಅಂತರ ಕಾಯ್ದುಕೊಂಡಿದೆ. ಪ್ರತಿಪಕ್ಷಗಳ ಗುಂಪಿನಲ್ಲಿದ್ದರೂ, ಪ್ರತ್ಯೇಕ ಮಾರ್ಗ ಅನುಸರಿಸುತ್ತಿರುವ ಟಿಎಂಸಿ, ಅದಾನಿ ವಿಚಾರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದಾನಿಯನ್ನು ಬಂಧಿಸಿ ಎಂಬ ಬರಹವುಳ್ಳ ಹಾಗೂ ಎಲ್ಲ ಟಿಎಂಸಿ ಸಂಸದರ ಸಹಿ ಇರುವ ಟೋಪಿಯನ್ನು ಧರಿಸಿ ಸಂಸದರು ಸಂಸತ್ ಭವನದ ಪಕ್ಷದ ಕಚೇರಿಯಿಂದ ವಿಜಯ್ ಚೌಕದವರೆಗೆ ಮೆರವಣಿಗೆ ನಡೆಸಿದರು.

”ಹಣಕಾಸು ಸಚಿವರು, ಸೆಬಿ, ಎಲ್‌ಐಸಿ, ಎಸ್‌ಬಿಐ ಮುಖ್ಯಸ್ಥರಿಗೆ ಟೋಪಿಯನ್ನು ನೀಡಲಾಗುವುದು” ಎಂದು ರಾಜ್ಯಸಭೆಯಲ್ಲಿ ಟಿಎಂಸಿ ಪಕ್ಷದ ನಾಯಕರಾಗಿರುವ ಡೆರೆಕ್ ಒಬ್ರಿಯನ್ ತಿಳಿಸಿದರು.

ಅದಾನಿ ಪ್ರಕರಣದಲ್ಲಿ ಪಕ್ಷವು ಮೆದುವಾಗಿ ನಡೆದುಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಅದಾನಿಯನ್ನು ಬಂಧಿಸಿ ಎಂದು ಆಗ್ರಹಿಸಿರುವ ಏಕೈಕ ಪಕ್ಷ ತಮ್ಮದು ಎಂದು ಹೇಳಿಕೊಂಡಿದೆ.

ಸಂಸತ್ ಕಲಾಪದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮಂಗಳವಾರ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್ ಅವರು, ಕರೆದಿದ್ದ ಎರಡು ಸಭೆಗಳಿಗೆ ಪ್ರತಿಪಕ್ಷದ ಸದಸ್ಯರು ಹಾಜರಾಗಲಿಲ್ಲ. ”ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಸಿದ್ಧವಿಲ್ಲ ಎಂಬುದು ಈ ನಡೆಯಿಂದ ಗೊತ್ತಾಗುತ್ತದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸರ್ಕಾರದ ಜೊತೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ” ಎಂದು ಪ್ರತಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಭಾಗಿಯಾಗಿದ್ದವು. ಇನ್ನುಳಿದ ಪ್ರತಿಪಕ್ಷಗಳು ಸಭೆಗೆ ಹಾಜರಾಗದಿರುವುದು ಸರಿಯಯಾದ ವರ್ತನೆಯಲ್ಲ. ಸಭೆಗೂ ಮುನ್ನ ತಮ್ಮನ್ನು ಭೇಟಿಯಾಗಿದ್ದ ಕಾಂಗ್ರೆಸ್ ಮುಖ್ಯ ಸಚೇತಕ ಮತ್ತು ಡಿಎಂಕೆ ಸದನ ನಾಯಕರು ಸಭೆಗೆ ಹಾಜರಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದರು ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

ಧನಕರ್ ಅವರು ಮಧ್ಯಾಹ್ನ 2.30ಕ್ಕೆ ಮತ್ತೊಂದು ಸಭೆ ಕರೆದಿದ್ದರು. ಈ ಸಭೆಯಲ್ಲಿ ಪ್ರತಿಪಕ್ಷಗಳಾದ ಎನ್‌ಸಿಪಿ, ಡಿಎಂಕೆ ಹಾಗೂ ಟಿಎಂಸಿಯ ಕೆಲವು ಪ್ರತಿನಿಧಿಗಳು ಕಾಣಿಸಿಕೊಂಡರು. ಸಭಾಪತಿಗೆ ಪದೇಪದೇ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಕೆಲವರನ್ನು ಸಭೆಗೆ ಕಳುಹಿಸಲು ಪ್ರತಿಪಕ್ಷಗಳು ತೀರ್ಮಾನಿಸಿದ್ದವು ಎಂದು ಮೂಲಗಳು ಹೇಳಿವೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ತಮ್ಮ ವಿಷಯಗಳನ್ನು ಪಕ್ಕಕ್ಕಿಡಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಲಹೆ ನೀಡಿದ್ದಾರೆ. ಆಡಳಿತರೂಢ ಬಿಜೆಪಿ ಇದಕ್ಕೆ ಒಪ್ಪಿಕೊಂಡಿತು. ಆದರೆ, ಅದಾನಿ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು. ಇದೇ ವೇಳೆ ಅವರು, ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...