Homeಮುಖಪುಟಸಂಸತ್ತಿನ ಮೊದಲ ಮಹಡಿಯಲ್ಲಿ 'ಮೋದಾನಿ' ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

- Advertisement -
- Advertisement -

ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ, ಆ ಬಗ್ಗೆ ಮಾತೇ ಆಡುತ್ತಿಲ್ಲ. ಹಾಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ವಿನೂತನವಾಗಿ ಪ್ರತಿಭಟಿಸಿವೆ.

ಮಂಗಳವಾರದ ಸಂಸತ್ತ ಕಲಾಪ ಆರಂಭವಾಗುವುದಕ್ಕೂ ಮುನ್ನ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ‘ವಿನೂತನ’ ಪ್ರತಿಭಟನೆಗೆ ನಿಧಾರ ತಗೆದುಕೊಳ್ಳಲಾಯಿತು.

ಸಂಸತ್ತಿನ ಉಭಯ ಸದನಗಳ ಕಲಾಪವು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾದ ಬಳಿಕ, 17 ಪ್ರತಿಪಕ್ಷಗಳ ಸಂಸದರು ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಎಸ್‌ಬಿಐ ಕಚೇರಿ ಎದುರು ಸೇರಿದರು. ಅದಾನಿ ಸಮೂಹಕ್ಕೆ ಸಾಲ ನೀಡಿರುವ ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಸಂಸತ್ತಿನ ಮೊದಲ ಮಹಡಿಯಲ್ಲಿ ಪ್ರತಿಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭಾವಚಿತ್ರಗಳಿರುವ ಬೃಹತ್ ಗಾತ್ರದ ಬ್ಯಾನರ್‌ನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದವು. ಸಂಸತ್ ಭವನದಲ್ಲಿ ಈ ರೀತಿಯ ದೊಡ್ಡ ಬ್ಯಾನರ್ ನೇತುಹಾಕಿ ಪ್ರತಿಭಟಿಸಿದ್ದು ಇದೇ ಮೊದಲು ಎನ್ನಬಹುದು.

ಆ ಬ್ಯಾನರ್‌ನಲ್ಲಿ ‘ಮೋದಾನಿ’, ‘ನಮಗೆ ಜೆಪಿಸಿ ಬೇಕು’ ಎಂದು ಬರೆಯಲಾಗಿದೆ. ಈ ವೇಳೆ ”ಮೋದಿ ಮತ್ತು ಅದಾನಿ ಅಣ್ಣತಮ್ಮಂದಿರು. ಇಬ್ಬರೂ ಸೇರಿ ದೇಶವನ್ನು ಮಾರುತ್ತಾರೆ” ಎನ್ನುವ ಘೋಷಣೆಗಳನ್ನು ಕೂಗಿ ಪ್ರತಿಪಕ್ಷಗಲು ತಮ್ಮ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್, ಎಎಪಿ, ಬಿಆರ್‌ಎಸ್, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎನ್‌ಸಿಪಿ ಹಾಗೂ ಎಸ್‌ಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಈ ಪ್ರತಿಪಕ್ಷಗಳ ಪ್ರತಿಭಟನೆಯಿಂದ ತೃಣಮೂಲ ಕಾಂಗ್ರೆಸ್ ಮತ್ತೆ ಅಂತರ ಕಾಯ್ದುಕೊಂಡಿದೆ. ಪ್ರತಿಪಕ್ಷಗಳ ಗುಂಪಿನಲ್ಲಿದ್ದರೂ, ಪ್ರತ್ಯೇಕ ಮಾರ್ಗ ಅನುಸರಿಸುತ್ತಿರುವ ಟಿಎಂಸಿ, ಅದಾನಿ ವಿಚಾರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದಾನಿಯನ್ನು ಬಂಧಿಸಿ ಎಂಬ ಬರಹವುಳ್ಳ ಹಾಗೂ ಎಲ್ಲ ಟಿಎಂಸಿ ಸಂಸದರ ಸಹಿ ಇರುವ ಟೋಪಿಯನ್ನು ಧರಿಸಿ ಸಂಸದರು ಸಂಸತ್ ಭವನದ ಪಕ್ಷದ ಕಚೇರಿಯಿಂದ ವಿಜಯ್ ಚೌಕದವರೆಗೆ ಮೆರವಣಿಗೆ ನಡೆಸಿದರು.

”ಹಣಕಾಸು ಸಚಿವರು, ಸೆಬಿ, ಎಲ್‌ಐಸಿ, ಎಸ್‌ಬಿಐ ಮುಖ್ಯಸ್ಥರಿಗೆ ಟೋಪಿಯನ್ನು ನೀಡಲಾಗುವುದು” ಎಂದು ರಾಜ್ಯಸಭೆಯಲ್ಲಿ ಟಿಎಂಸಿ ಪಕ್ಷದ ನಾಯಕರಾಗಿರುವ ಡೆರೆಕ್ ಒಬ್ರಿಯನ್ ತಿಳಿಸಿದರು.

ಅದಾನಿ ಪ್ರಕರಣದಲ್ಲಿ ಪಕ್ಷವು ಮೆದುವಾಗಿ ನಡೆದುಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಅದಾನಿಯನ್ನು ಬಂಧಿಸಿ ಎಂದು ಆಗ್ರಹಿಸಿರುವ ಏಕೈಕ ಪಕ್ಷ ತಮ್ಮದು ಎಂದು ಹೇಳಿಕೊಂಡಿದೆ.

ಸಂಸತ್ ಕಲಾಪದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮಂಗಳವಾರ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್ ಅವರು, ಕರೆದಿದ್ದ ಎರಡು ಸಭೆಗಳಿಗೆ ಪ್ರತಿಪಕ್ಷದ ಸದಸ್ಯರು ಹಾಜರಾಗಲಿಲ್ಲ. ”ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಸಿದ್ಧವಿಲ್ಲ ಎಂಬುದು ಈ ನಡೆಯಿಂದ ಗೊತ್ತಾಗುತ್ತದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸರ್ಕಾರದ ಜೊತೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ” ಎಂದು ಪ್ರತಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಭಾಗಿಯಾಗಿದ್ದವು. ಇನ್ನುಳಿದ ಪ್ರತಿಪಕ್ಷಗಳು ಸಭೆಗೆ ಹಾಜರಾಗದಿರುವುದು ಸರಿಯಯಾದ ವರ್ತನೆಯಲ್ಲ. ಸಭೆಗೂ ಮುನ್ನ ತಮ್ಮನ್ನು ಭೇಟಿಯಾಗಿದ್ದ ಕಾಂಗ್ರೆಸ್ ಮುಖ್ಯ ಸಚೇತಕ ಮತ್ತು ಡಿಎಂಕೆ ಸದನ ನಾಯಕರು ಸಭೆಗೆ ಹಾಜರಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದರು ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

ಧನಕರ್ ಅವರು ಮಧ್ಯಾಹ್ನ 2.30ಕ್ಕೆ ಮತ್ತೊಂದು ಸಭೆ ಕರೆದಿದ್ದರು. ಈ ಸಭೆಯಲ್ಲಿ ಪ್ರತಿಪಕ್ಷಗಳಾದ ಎನ್‌ಸಿಪಿ, ಡಿಎಂಕೆ ಹಾಗೂ ಟಿಎಂಸಿಯ ಕೆಲವು ಪ್ರತಿನಿಧಿಗಳು ಕಾಣಿಸಿಕೊಂಡರು. ಸಭಾಪತಿಗೆ ಪದೇಪದೇ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಕೆಲವರನ್ನು ಸಭೆಗೆ ಕಳುಹಿಸಲು ಪ್ರತಿಪಕ್ಷಗಳು ತೀರ್ಮಾನಿಸಿದ್ದವು ಎಂದು ಮೂಲಗಳು ಹೇಳಿವೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ತಮ್ಮ ವಿಷಯಗಳನ್ನು ಪಕ್ಕಕ್ಕಿಡಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಲಹೆ ನೀಡಿದ್ದಾರೆ. ಆಡಳಿತರೂಢ ಬಿಜೆಪಿ ಇದಕ್ಕೆ ಒಪ್ಪಿಕೊಂಡಿತು. ಆದರೆ, ಅದಾನಿ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು. ಇದೇ ವೇಳೆ ಅವರು, ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...