HomeUncategorizedಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

- Advertisement -
- Advertisement -

ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು.

ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ ನೀತಿಸಂಹಿತೆ (ಮಾನಿಸಂ). ಖರೇ ಹೇಳಬೇಕಂದರ ಅದು ಸಂಸತ್ತು ಮಾಡಿದಲ್ಲ. ಆಯೋಗ ಮಾಡಿದ್ದು ಅಧೀನ ಶಾಸಕಾಂಗದ ಅಧಿಕಾರದೊಳಗ.

ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿಸಂಹಿತೆಯನ್ನ ಪ್ರತಿ ಚುನಾವಣೆಗೆ ಮುಂಚೆ ಬದಲಿಸಿಗೋತ, ಗಟ್ಟಿ ಮಾಡಿಕೋತ, ತಪ್ಪುಗಳನ್ನು ತಿದ್ದಿಕೋತ, ಹಿಂದಿನ ಚುನಾವಣೆ ಪಾಠಗಳನ್ನು ಕಲಕೋತ ಖರೇ ಅರ್ಥದೊಳಗ ಅದನ್ನ ಮಾದರಿ ಮಾಡಬೇಕು ಅನ್ನೊ ಕೆಲಸ ಮಾಡಿಕೋತ ಬಂದದ.

ಅದರ ಕೆಲವು ಅಂಶಗಳನ್ನು ನೋಡೋಣ.
 ಹೊಸ ಯೋಜನೆ ಘೋಷಿಸಬಾರದು, ಹೊಸ ಕಾರ್ಯಕ್ರಮ ಶುರುಮಾಡಬಾರದು
 ಸರಕಾರಿ ವಸತಿಗೃಹ, ಕಚೇರಿಗಳನ್ನ ರಾಜಕೀಯ ಕಾರಣಗಳಿಗೆ ಬಳಸಬಾರದು, ಮೀಟಿಂಗು ಮಾಡಬಾರದು
 ಸರಕಾರಿ ಸ್ಥಳಗಳನ್ನ ಅಂದಗೆಡಿಸಬಾರದು.
 ವಿರೋಧಿಗಳ ಮನೀ ಮುಂದ, ಅವರಿಗೆ ಕಿರಿಕಿರಿ ಆಗೋ ಹಂಗ ಪ್ರಭಾತಫೇರಿ ತೆಗೀಬಾರದು, ಹೊಯ್ಕೋ- ಬಡಕೋ ಮಾಡಬಾರದು
 ಸರಕಾರಿ ಮಾಧ್ಯಮದೊಳಗ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು
 ಮೈಕಾಸುರನನ್ನ ರಾತ್ರಿ ಒದರಸಬಾರದು.
 ಆಡಳಿತ ಪಕ್ಷ ತನ್ನ ಶಕ್ತಿಯ ದುರುಪಯೋಗ ಮಾಡಬಾರದು
 ಮಂತ್ರಿಗಳು ಗಾಡಿ, ಘೋಡಾ, ಪೀಏ, ಪೀಪಿ, ಗನ್ ಮ್ಯಾನು, ಉಪಯೋಗಿಸಬಾರದು.
 ಮತದಾನದ ದಿವಸ ಮತದಾರ ಮಹಾಪ್ರಭುಗಳನ್ನ ಹುದ್ದರಿಗಳು ತಮ್ಮ ಗಾಡಿಯೊಳಗ ಕರಕೊಂಡು ಹೋಗಬಾರದು.
 (ಅಧಿಕಾರಿಗಳಿಗೆ ಗೊತ್ತಾಗೋ ಹಂಗ) ಹಣ- ಹೆಂಡ ಹಂಚಬಾರದು, ಇತ್ಯಾದಿ, ಇತ್ಯಾದಿ.

ಒಟ್ಟಿನೊಳಗ, ನಾಯಕರು ಜನಪ್ರೀತಿಯಿಂದ ಚುನಾವಣೆ ಗೆಲ್ಲಬೇಕೇ ಹೊರತು ಜನರನ್ನು ಪ್ರಲೋಭಿಸಿ ಅಥವಾ ಹೆದರಿಸಿ ಗೆಲ್ಲಬಾರದು ಅನ್ನೋದು ಮಾನೀಸಂ ಉದ್ದೇಶ.

ಇದು ಚುನಾವಣೆ ಘೋಷಣೆ ಆದತಕ್ಷಣ ಜಾರಿಗೆ ಬರತದ. ಚುನಾವಣೆ ಪ್ರಕ್ರಿಯೆ ಮುಗಿಯೋ ತನಕಾ ಇರತದ.

ಬಹುಮಟ್ಟಿಗೆ ಯಾವುದಾದರೂ ಕ್ಷೇತ್ರದೊಳಗ ಚುನಾವಣೆ ಬಂದರ ಆ ಇಡೀ ರಾಜ್ಯ ಅಥವಾ ಜಿಲ್ಲೆಗೆ ಇದು ಲಾಗೂ ಆಗತದ.

ಇದನ್ನು ಉಲ್ಲಂಘಿಸಿದರ ಜೈಲಿಗೆ ಹಾಕೋದರಿಂದ ಹಿಡದು ಮುಂದಿನ ಚುನಾವಣೆಗೆ ಅಯೋಗ್ಯರನ್ನಾಗಿ ಮಾಡೋ ತನಕಾ ಆಯೋಗಕ್ಕ ಅಧಿಕಾರ ಐತಿ.

ಹಿಂದೆಲ್ಲಾ ಚುನಾವಣೆ ಅಧಿಕಾರಿಗಳಿಗೆ ಹೆಚ್ಚಿನ ಡ್ಯೂಟಿ ಹಾಕಿ ಮಾನೀಸಂ ಮೇಲುಸ್ತುವಾರಿ ಕೊಡತಿದ್ದರು. ಈಗ ಮಾನೀಸಂ ಜಾರಿಗೆ ಅಂತನೇ ಬ್ಯಾರೆ ಅಧಿಕಾರಿ ಇರತಾರ.
ಆದರೂ ಚುನಾವಣೆಗೆ ಬಡಿದ ಮುಸುಕು ಸರದಿಲ್ಲ. ಅವು ಪಾರದರ್ಶಕ ಆಗಿಲ್ಲ ಅನ್ನೋ ಮಾತು ಕಡಿಮಿ ಆಗಿಲ್ಲ.

ಇವೆಲ್ಲವನ್ನೂ ನಾವು ಸರಿಯಾಗಿ ಪಾಲಿಸಲಿಕ್ಕೆ ಹತ್ತೇವೇನು? ಇದಕ್ಕ `ಇಲ್ಲ’ ಅನ್ನೋ ಯಾಷಿ ಮಾತಿನಗಿಂತಾ `ಕಮ್ಮಿ ಖರೇ’ ಅನ್ನೋ ಸಿಹಿಮಾತಿನ ಉತ್ತರನ ಸರಿ ಆದೀತು.
ಈ ಹಿನ್ನೆಲೆಯೊಳಗ ಒಂದು ವಿಷಯ ನೆನಪು ಆಗತದ.

`ಅವರು ಭಾಳ ಪ್ರತಿಭಾವಂತರು, ಒಳ್ಳೆಯವರು, ಇತರರಿಗೆ ಮಾದರಿಯಾಗಬಲ್ಲವರು ಆದರೆ ಅವರಿಗೆ ಸಿಗಬೇಕಾದ ಮನ್ನಣೆ ಸಿಗಲಿಲ್ಲ” ಅನ್ನೋದು ಏನದಲಾ, ಅದು ನಂ ಹಿಂದೂಸ್ತಾನದಾಗ ಕೇಳಿ ಬರಕೋತನ ಇರೋ ಸಿಕ್ಕಾಪಟ್ಟೆ ಕೂಗುಗಳೊಳಗ ಒಂದು. ಈ ಮಾತಿಗೆ ತಕ್ಕಂತೆ ಇದ್ದ ಒಬ್ಬ ದೊಡ್ಡ ಮನಿಷ ಅಂದರ ಮಾಜಿ ಉಪಪ್ರಧಾನಿ, ಪ್ರಕಾಂಡಪಂಡಿತ ಬಾಬು ಜಗಜೀವನರಾಂ. ಅವರ ಧರ್ಮಪತ್ನಿ ಇಂದ್ರಾಣಿ ದೇವಿ. ಕಾನಪುರದ ಸಾಮಾಜಿಕ ಕಾರ್ಯಕರ್ತರ ಮಗಳಾದ ಇಂದ್ರಾಣಿ ದೇವಿ ಅವರು ಒಂದು ಪುಸ್ತಕ ಬರೆದರು ಅದರ ಹೆಸರು `ದೇಖಿ, ಸುನಿ, ಬೀತಿ ಬಾತೆಂ’ (ನೋಡಿದ, ಕೇಳಿದ, ಆಗಿ ಹೋದ ಮಾತುಗಳು).

ಅದರೊಳಗ ಒಂದು ಭಾರಿ ಮಜಾ ವಿಷಯ ಐತಿ. “ಅಮೆರಿಕಯಲ್ಲಿ ಬಿಳಿಯರು ಕರಿಯರಿಗೆ ಹಿಂಸೆ ಕೊಡಬಾರದು ಅಂತ ಅಬ್ರಹಾಂ ಲಿಂಕನ್ ಹಾಗೂ ಇತರ ನಾಯಕರು ಪ್ರಯತ್ನಿಸಿದಾಗ ಅಲ್ಲಿ ಭಯಂಕರ ಪ್ರತಿರೋಧ ಬಂತು. ಆದರೆ ಭಾರತದಲ್ಲಿ ಗುಲಾಮಗಿರಿ ಹಾಗೂ ಅಸ್ಪೃಶ್ಯತೆ ಯನ್ನು ಪ್ರತಿಬಂಧಿಸಿದಾಗ ಹಾಗಾಗಲಿಲ್ಲ” ಅನ್ನೋದು.

ಅದಕ್ಕೆ ಇಂದ್ರಾಣಿ ಅವರು ಕೊಡುವ ಕಾರಣ ಇನ್ನೂ ಮಜಾ. “ಯಾಕೆ ಗೊತ್ತೇ? ಈ ಕಾನೂನುಗಳನ್ನು ಈ ದೇಶದಲ್ಲಿ ಯಾರೂ ಸರಿಯಾಗಿ ಜಾರಿ ಮಾಡೋದಿಲ್ಲ. ಇಂತಹ ಎಷ್ಟು ಕಾನೂನು ಬಂದರೂ ಇಲ್ಲಿ ನಿಮ್ನ ವರ್ಗದ ಜನರ ಬದುಕು ಬದಲಾಗೋದಿಲ್ಲ” ಅಂತ ಅವರು ಷರಾ ಎಳೀತಾರ. ಆ ಪುಸ್ತಕ ಓದಿ ಕೆಳಗ ಇಡಬೇಕಾದರ ‘ಐವತ್ತು ವರ್ಷದ ಹಿಂದೆ ಹೇಳಿದ ಈ ಮಾತುಗಳು ಎಷ್ಟು ಪ್ರಸ್ತುತ’ ಅಂತ ಮತ್ತ ಕ್ಲೀಷೆಯೊಳಗ ಮಾತಾಡಬೇಕಾಗತದ.

ಹೆಚ್ಚಿನ ಮಾಹಿತಿಗೆ – ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...