HomeUncategorizedಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

- Advertisement -
- Advertisement -

ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು.

ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ ನೀತಿಸಂಹಿತೆ (ಮಾನಿಸಂ). ಖರೇ ಹೇಳಬೇಕಂದರ ಅದು ಸಂಸತ್ತು ಮಾಡಿದಲ್ಲ. ಆಯೋಗ ಮಾಡಿದ್ದು ಅಧೀನ ಶಾಸಕಾಂಗದ ಅಧಿಕಾರದೊಳಗ.

ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿಸಂಹಿತೆಯನ್ನ ಪ್ರತಿ ಚುನಾವಣೆಗೆ ಮುಂಚೆ ಬದಲಿಸಿಗೋತ, ಗಟ್ಟಿ ಮಾಡಿಕೋತ, ತಪ್ಪುಗಳನ್ನು ತಿದ್ದಿಕೋತ, ಹಿಂದಿನ ಚುನಾವಣೆ ಪಾಠಗಳನ್ನು ಕಲಕೋತ ಖರೇ ಅರ್ಥದೊಳಗ ಅದನ್ನ ಮಾದರಿ ಮಾಡಬೇಕು ಅನ್ನೊ ಕೆಲಸ ಮಾಡಿಕೋತ ಬಂದದ.

ಅದರ ಕೆಲವು ಅಂಶಗಳನ್ನು ನೋಡೋಣ.
 ಹೊಸ ಯೋಜನೆ ಘೋಷಿಸಬಾರದು, ಹೊಸ ಕಾರ್ಯಕ್ರಮ ಶುರುಮಾಡಬಾರದು
 ಸರಕಾರಿ ವಸತಿಗೃಹ, ಕಚೇರಿಗಳನ್ನ ರಾಜಕೀಯ ಕಾರಣಗಳಿಗೆ ಬಳಸಬಾರದು, ಮೀಟಿಂಗು ಮಾಡಬಾರದು
 ಸರಕಾರಿ ಸ್ಥಳಗಳನ್ನ ಅಂದಗೆಡಿಸಬಾರದು.
 ವಿರೋಧಿಗಳ ಮನೀ ಮುಂದ, ಅವರಿಗೆ ಕಿರಿಕಿರಿ ಆಗೋ ಹಂಗ ಪ್ರಭಾತಫೇರಿ ತೆಗೀಬಾರದು, ಹೊಯ್ಕೋ- ಬಡಕೋ ಮಾಡಬಾರದು
 ಸರಕಾರಿ ಮಾಧ್ಯಮದೊಳಗ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು
 ಮೈಕಾಸುರನನ್ನ ರಾತ್ರಿ ಒದರಸಬಾರದು.
 ಆಡಳಿತ ಪಕ್ಷ ತನ್ನ ಶಕ್ತಿಯ ದುರುಪಯೋಗ ಮಾಡಬಾರದು
 ಮಂತ್ರಿಗಳು ಗಾಡಿ, ಘೋಡಾ, ಪೀಏ, ಪೀಪಿ, ಗನ್ ಮ್ಯಾನು, ಉಪಯೋಗಿಸಬಾರದು.
 ಮತದಾನದ ದಿವಸ ಮತದಾರ ಮಹಾಪ್ರಭುಗಳನ್ನ ಹುದ್ದರಿಗಳು ತಮ್ಮ ಗಾಡಿಯೊಳಗ ಕರಕೊಂಡು ಹೋಗಬಾರದು.
 (ಅಧಿಕಾರಿಗಳಿಗೆ ಗೊತ್ತಾಗೋ ಹಂಗ) ಹಣ- ಹೆಂಡ ಹಂಚಬಾರದು, ಇತ್ಯಾದಿ, ಇತ್ಯಾದಿ.

ಒಟ್ಟಿನೊಳಗ, ನಾಯಕರು ಜನಪ್ರೀತಿಯಿಂದ ಚುನಾವಣೆ ಗೆಲ್ಲಬೇಕೇ ಹೊರತು ಜನರನ್ನು ಪ್ರಲೋಭಿಸಿ ಅಥವಾ ಹೆದರಿಸಿ ಗೆಲ್ಲಬಾರದು ಅನ್ನೋದು ಮಾನೀಸಂ ಉದ್ದೇಶ.

ಇದು ಚುನಾವಣೆ ಘೋಷಣೆ ಆದತಕ್ಷಣ ಜಾರಿಗೆ ಬರತದ. ಚುನಾವಣೆ ಪ್ರಕ್ರಿಯೆ ಮುಗಿಯೋ ತನಕಾ ಇರತದ.

ಬಹುಮಟ್ಟಿಗೆ ಯಾವುದಾದರೂ ಕ್ಷೇತ್ರದೊಳಗ ಚುನಾವಣೆ ಬಂದರ ಆ ಇಡೀ ರಾಜ್ಯ ಅಥವಾ ಜಿಲ್ಲೆಗೆ ಇದು ಲಾಗೂ ಆಗತದ.

ಇದನ್ನು ಉಲ್ಲಂಘಿಸಿದರ ಜೈಲಿಗೆ ಹಾಕೋದರಿಂದ ಹಿಡದು ಮುಂದಿನ ಚುನಾವಣೆಗೆ ಅಯೋಗ್ಯರನ್ನಾಗಿ ಮಾಡೋ ತನಕಾ ಆಯೋಗಕ್ಕ ಅಧಿಕಾರ ಐತಿ.

ಹಿಂದೆಲ್ಲಾ ಚುನಾವಣೆ ಅಧಿಕಾರಿಗಳಿಗೆ ಹೆಚ್ಚಿನ ಡ್ಯೂಟಿ ಹಾಕಿ ಮಾನೀಸಂ ಮೇಲುಸ್ತುವಾರಿ ಕೊಡತಿದ್ದರು. ಈಗ ಮಾನೀಸಂ ಜಾರಿಗೆ ಅಂತನೇ ಬ್ಯಾರೆ ಅಧಿಕಾರಿ ಇರತಾರ.
ಆದರೂ ಚುನಾವಣೆಗೆ ಬಡಿದ ಮುಸುಕು ಸರದಿಲ್ಲ. ಅವು ಪಾರದರ್ಶಕ ಆಗಿಲ್ಲ ಅನ್ನೋ ಮಾತು ಕಡಿಮಿ ಆಗಿಲ್ಲ.

ಇವೆಲ್ಲವನ್ನೂ ನಾವು ಸರಿಯಾಗಿ ಪಾಲಿಸಲಿಕ್ಕೆ ಹತ್ತೇವೇನು? ಇದಕ್ಕ `ಇಲ್ಲ’ ಅನ್ನೋ ಯಾಷಿ ಮಾತಿನಗಿಂತಾ `ಕಮ್ಮಿ ಖರೇ’ ಅನ್ನೋ ಸಿಹಿಮಾತಿನ ಉತ್ತರನ ಸರಿ ಆದೀತು.
ಈ ಹಿನ್ನೆಲೆಯೊಳಗ ಒಂದು ವಿಷಯ ನೆನಪು ಆಗತದ.

`ಅವರು ಭಾಳ ಪ್ರತಿಭಾವಂತರು, ಒಳ್ಳೆಯವರು, ಇತರರಿಗೆ ಮಾದರಿಯಾಗಬಲ್ಲವರು ಆದರೆ ಅವರಿಗೆ ಸಿಗಬೇಕಾದ ಮನ್ನಣೆ ಸಿಗಲಿಲ್ಲ” ಅನ್ನೋದು ಏನದಲಾ, ಅದು ನಂ ಹಿಂದೂಸ್ತಾನದಾಗ ಕೇಳಿ ಬರಕೋತನ ಇರೋ ಸಿಕ್ಕಾಪಟ್ಟೆ ಕೂಗುಗಳೊಳಗ ಒಂದು. ಈ ಮಾತಿಗೆ ತಕ್ಕಂತೆ ಇದ್ದ ಒಬ್ಬ ದೊಡ್ಡ ಮನಿಷ ಅಂದರ ಮಾಜಿ ಉಪಪ್ರಧಾನಿ, ಪ್ರಕಾಂಡಪಂಡಿತ ಬಾಬು ಜಗಜೀವನರಾಂ. ಅವರ ಧರ್ಮಪತ್ನಿ ಇಂದ್ರಾಣಿ ದೇವಿ. ಕಾನಪುರದ ಸಾಮಾಜಿಕ ಕಾರ್ಯಕರ್ತರ ಮಗಳಾದ ಇಂದ್ರಾಣಿ ದೇವಿ ಅವರು ಒಂದು ಪುಸ್ತಕ ಬರೆದರು ಅದರ ಹೆಸರು `ದೇಖಿ, ಸುನಿ, ಬೀತಿ ಬಾತೆಂ’ (ನೋಡಿದ, ಕೇಳಿದ, ಆಗಿ ಹೋದ ಮಾತುಗಳು).

ಅದರೊಳಗ ಒಂದು ಭಾರಿ ಮಜಾ ವಿಷಯ ಐತಿ. “ಅಮೆರಿಕಯಲ್ಲಿ ಬಿಳಿಯರು ಕರಿಯರಿಗೆ ಹಿಂಸೆ ಕೊಡಬಾರದು ಅಂತ ಅಬ್ರಹಾಂ ಲಿಂಕನ್ ಹಾಗೂ ಇತರ ನಾಯಕರು ಪ್ರಯತ್ನಿಸಿದಾಗ ಅಲ್ಲಿ ಭಯಂಕರ ಪ್ರತಿರೋಧ ಬಂತು. ಆದರೆ ಭಾರತದಲ್ಲಿ ಗುಲಾಮಗಿರಿ ಹಾಗೂ ಅಸ್ಪೃಶ್ಯತೆ ಯನ್ನು ಪ್ರತಿಬಂಧಿಸಿದಾಗ ಹಾಗಾಗಲಿಲ್ಲ” ಅನ್ನೋದು.

ಅದಕ್ಕೆ ಇಂದ್ರಾಣಿ ಅವರು ಕೊಡುವ ಕಾರಣ ಇನ್ನೂ ಮಜಾ. “ಯಾಕೆ ಗೊತ್ತೇ? ಈ ಕಾನೂನುಗಳನ್ನು ಈ ದೇಶದಲ್ಲಿ ಯಾರೂ ಸರಿಯಾಗಿ ಜಾರಿ ಮಾಡೋದಿಲ್ಲ. ಇಂತಹ ಎಷ್ಟು ಕಾನೂನು ಬಂದರೂ ಇಲ್ಲಿ ನಿಮ್ನ ವರ್ಗದ ಜನರ ಬದುಕು ಬದಲಾಗೋದಿಲ್ಲ” ಅಂತ ಅವರು ಷರಾ ಎಳೀತಾರ. ಆ ಪುಸ್ತಕ ಓದಿ ಕೆಳಗ ಇಡಬೇಕಾದರ ‘ಐವತ್ತು ವರ್ಷದ ಹಿಂದೆ ಹೇಳಿದ ಈ ಮಾತುಗಳು ಎಷ್ಟು ಪ್ರಸ್ತುತ’ ಅಂತ ಮತ್ತ ಕ್ಲೀಷೆಯೊಳಗ ಮಾತಾಡಬೇಕಾಗತದ.

ಹೆಚ್ಚಿನ ಮಾಹಿತಿಗೆ – ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...