HomeUncategorizedಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

- Advertisement -
- Advertisement -

ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು.

ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ ನೀತಿಸಂಹಿತೆ (ಮಾನಿಸಂ). ಖರೇ ಹೇಳಬೇಕಂದರ ಅದು ಸಂಸತ್ತು ಮಾಡಿದಲ್ಲ. ಆಯೋಗ ಮಾಡಿದ್ದು ಅಧೀನ ಶಾಸಕಾಂಗದ ಅಧಿಕಾರದೊಳಗ.

ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿಸಂಹಿತೆಯನ್ನ ಪ್ರತಿ ಚುನಾವಣೆಗೆ ಮುಂಚೆ ಬದಲಿಸಿಗೋತ, ಗಟ್ಟಿ ಮಾಡಿಕೋತ, ತಪ್ಪುಗಳನ್ನು ತಿದ್ದಿಕೋತ, ಹಿಂದಿನ ಚುನಾವಣೆ ಪಾಠಗಳನ್ನು ಕಲಕೋತ ಖರೇ ಅರ್ಥದೊಳಗ ಅದನ್ನ ಮಾದರಿ ಮಾಡಬೇಕು ಅನ್ನೊ ಕೆಲಸ ಮಾಡಿಕೋತ ಬಂದದ.

ಅದರ ಕೆಲವು ಅಂಶಗಳನ್ನು ನೋಡೋಣ.
 ಹೊಸ ಯೋಜನೆ ಘೋಷಿಸಬಾರದು, ಹೊಸ ಕಾರ್ಯಕ್ರಮ ಶುರುಮಾಡಬಾರದು
 ಸರಕಾರಿ ವಸತಿಗೃಹ, ಕಚೇರಿಗಳನ್ನ ರಾಜಕೀಯ ಕಾರಣಗಳಿಗೆ ಬಳಸಬಾರದು, ಮೀಟಿಂಗು ಮಾಡಬಾರದು
 ಸರಕಾರಿ ಸ್ಥಳಗಳನ್ನ ಅಂದಗೆಡಿಸಬಾರದು.
 ವಿರೋಧಿಗಳ ಮನೀ ಮುಂದ, ಅವರಿಗೆ ಕಿರಿಕಿರಿ ಆಗೋ ಹಂಗ ಪ್ರಭಾತಫೇರಿ ತೆಗೀಬಾರದು, ಹೊಯ್ಕೋ- ಬಡಕೋ ಮಾಡಬಾರದು
 ಸರಕಾರಿ ಮಾಧ್ಯಮದೊಳಗ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು
 ಮೈಕಾಸುರನನ್ನ ರಾತ್ರಿ ಒದರಸಬಾರದು.
 ಆಡಳಿತ ಪಕ್ಷ ತನ್ನ ಶಕ್ತಿಯ ದುರುಪಯೋಗ ಮಾಡಬಾರದು
 ಮಂತ್ರಿಗಳು ಗಾಡಿ, ಘೋಡಾ, ಪೀಏ, ಪೀಪಿ, ಗನ್ ಮ್ಯಾನು, ಉಪಯೋಗಿಸಬಾರದು.
 ಮತದಾನದ ದಿವಸ ಮತದಾರ ಮಹಾಪ್ರಭುಗಳನ್ನ ಹುದ್ದರಿಗಳು ತಮ್ಮ ಗಾಡಿಯೊಳಗ ಕರಕೊಂಡು ಹೋಗಬಾರದು.
 (ಅಧಿಕಾರಿಗಳಿಗೆ ಗೊತ್ತಾಗೋ ಹಂಗ) ಹಣ- ಹೆಂಡ ಹಂಚಬಾರದು, ಇತ್ಯಾದಿ, ಇತ್ಯಾದಿ.

ಒಟ್ಟಿನೊಳಗ, ನಾಯಕರು ಜನಪ್ರೀತಿಯಿಂದ ಚುನಾವಣೆ ಗೆಲ್ಲಬೇಕೇ ಹೊರತು ಜನರನ್ನು ಪ್ರಲೋಭಿಸಿ ಅಥವಾ ಹೆದರಿಸಿ ಗೆಲ್ಲಬಾರದು ಅನ್ನೋದು ಮಾನೀಸಂ ಉದ್ದೇಶ.

ಇದು ಚುನಾವಣೆ ಘೋಷಣೆ ಆದತಕ್ಷಣ ಜಾರಿಗೆ ಬರತದ. ಚುನಾವಣೆ ಪ್ರಕ್ರಿಯೆ ಮುಗಿಯೋ ತನಕಾ ಇರತದ.

ಬಹುಮಟ್ಟಿಗೆ ಯಾವುದಾದರೂ ಕ್ಷೇತ್ರದೊಳಗ ಚುನಾವಣೆ ಬಂದರ ಆ ಇಡೀ ರಾಜ್ಯ ಅಥವಾ ಜಿಲ್ಲೆಗೆ ಇದು ಲಾಗೂ ಆಗತದ.

ಇದನ್ನು ಉಲ್ಲಂಘಿಸಿದರ ಜೈಲಿಗೆ ಹಾಕೋದರಿಂದ ಹಿಡದು ಮುಂದಿನ ಚುನಾವಣೆಗೆ ಅಯೋಗ್ಯರನ್ನಾಗಿ ಮಾಡೋ ತನಕಾ ಆಯೋಗಕ್ಕ ಅಧಿಕಾರ ಐತಿ.

ಹಿಂದೆಲ್ಲಾ ಚುನಾವಣೆ ಅಧಿಕಾರಿಗಳಿಗೆ ಹೆಚ್ಚಿನ ಡ್ಯೂಟಿ ಹಾಕಿ ಮಾನೀಸಂ ಮೇಲುಸ್ತುವಾರಿ ಕೊಡತಿದ್ದರು. ಈಗ ಮಾನೀಸಂ ಜಾರಿಗೆ ಅಂತನೇ ಬ್ಯಾರೆ ಅಧಿಕಾರಿ ಇರತಾರ.
ಆದರೂ ಚುನಾವಣೆಗೆ ಬಡಿದ ಮುಸುಕು ಸರದಿಲ್ಲ. ಅವು ಪಾರದರ್ಶಕ ಆಗಿಲ್ಲ ಅನ್ನೋ ಮಾತು ಕಡಿಮಿ ಆಗಿಲ್ಲ.

ಇವೆಲ್ಲವನ್ನೂ ನಾವು ಸರಿಯಾಗಿ ಪಾಲಿಸಲಿಕ್ಕೆ ಹತ್ತೇವೇನು? ಇದಕ್ಕ `ಇಲ್ಲ’ ಅನ್ನೋ ಯಾಷಿ ಮಾತಿನಗಿಂತಾ `ಕಮ್ಮಿ ಖರೇ’ ಅನ್ನೋ ಸಿಹಿಮಾತಿನ ಉತ್ತರನ ಸರಿ ಆದೀತು.
ಈ ಹಿನ್ನೆಲೆಯೊಳಗ ಒಂದು ವಿಷಯ ನೆನಪು ಆಗತದ.

`ಅವರು ಭಾಳ ಪ್ರತಿಭಾವಂತರು, ಒಳ್ಳೆಯವರು, ಇತರರಿಗೆ ಮಾದರಿಯಾಗಬಲ್ಲವರು ಆದರೆ ಅವರಿಗೆ ಸಿಗಬೇಕಾದ ಮನ್ನಣೆ ಸಿಗಲಿಲ್ಲ” ಅನ್ನೋದು ಏನದಲಾ, ಅದು ನಂ ಹಿಂದೂಸ್ತಾನದಾಗ ಕೇಳಿ ಬರಕೋತನ ಇರೋ ಸಿಕ್ಕಾಪಟ್ಟೆ ಕೂಗುಗಳೊಳಗ ಒಂದು. ಈ ಮಾತಿಗೆ ತಕ್ಕಂತೆ ಇದ್ದ ಒಬ್ಬ ದೊಡ್ಡ ಮನಿಷ ಅಂದರ ಮಾಜಿ ಉಪಪ್ರಧಾನಿ, ಪ್ರಕಾಂಡಪಂಡಿತ ಬಾಬು ಜಗಜೀವನರಾಂ. ಅವರ ಧರ್ಮಪತ್ನಿ ಇಂದ್ರಾಣಿ ದೇವಿ. ಕಾನಪುರದ ಸಾಮಾಜಿಕ ಕಾರ್ಯಕರ್ತರ ಮಗಳಾದ ಇಂದ್ರಾಣಿ ದೇವಿ ಅವರು ಒಂದು ಪುಸ್ತಕ ಬರೆದರು ಅದರ ಹೆಸರು `ದೇಖಿ, ಸುನಿ, ಬೀತಿ ಬಾತೆಂ’ (ನೋಡಿದ, ಕೇಳಿದ, ಆಗಿ ಹೋದ ಮಾತುಗಳು).

ಅದರೊಳಗ ಒಂದು ಭಾರಿ ಮಜಾ ವಿಷಯ ಐತಿ. “ಅಮೆರಿಕಯಲ್ಲಿ ಬಿಳಿಯರು ಕರಿಯರಿಗೆ ಹಿಂಸೆ ಕೊಡಬಾರದು ಅಂತ ಅಬ್ರಹಾಂ ಲಿಂಕನ್ ಹಾಗೂ ಇತರ ನಾಯಕರು ಪ್ರಯತ್ನಿಸಿದಾಗ ಅಲ್ಲಿ ಭಯಂಕರ ಪ್ರತಿರೋಧ ಬಂತು. ಆದರೆ ಭಾರತದಲ್ಲಿ ಗುಲಾಮಗಿರಿ ಹಾಗೂ ಅಸ್ಪೃಶ್ಯತೆ ಯನ್ನು ಪ್ರತಿಬಂಧಿಸಿದಾಗ ಹಾಗಾಗಲಿಲ್ಲ” ಅನ್ನೋದು.

ಅದಕ್ಕೆ ಇಂದ್ರಾಣಿ ಅವರು ಕೊಡುವ ಕಾರಣ ಇನ್ನೂ ಮಜಾ. “ಯಾಕೆ ಗೊತ್ತೇ? ಈ ಕಾನೂನುಗಳನ್ನು ಈ ದೇಶದಲ್ಲಿ ಯಾರೂ ಸರಿಯಾಗಿ ಜಾರಿ ಮಾಡೋದಿಲ್ಲ. ಇಂತಹ ಎಷ್ಟು ಕಾನೂನು ಬಂದರೂ ಇಲ್ಲಿ ನಿಮ್ನ ವರ್ಗದ ಜನರ ಬದುಕು ಬದಲಾಗೋದಿಲ್ಲ” ಅಂತ ಅವರು ಷರಾ ಎಳೀತಾರ. ಆ ಪುಸ್ತಕ ಓದಿ ಕೆಳಗ ಇಡಬೇಕಾದರ ‘ಐವತ್ತು ವರ್ಷದ ಹಿಂದೆ ಹೇಳಿದ ಈ ಮಾತುಗಳು ಎಷ್ಟು ಪ್ರಸ್ತುತ’ ಅಂತ ಮತ್ತ ಕ್ಲೀಷೆಯೊಳಗ ಮಾತಾಡಬೇಕಾಗತದ.

ಹೆಚ್ಚಿನ ಮಾಹಿತಿಗೆ – ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...