HomeUncategorizedಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

- Advertisement -
- Advertisement -

ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು.

ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ ನೀತಿಸಂಹಿತೆ (ಮಾನಿಸಂ). ಖರೇ ಹೇಳಬೇಕಂದರ ಅದು ಸಂಸತ್ತು ಮಾಡಿದಲ್ಲ. ಆಯೋಗ ಮಾಡಿದ್ದು ಅಧೀನ ಶಾಸಕಾಂಗದ ಅಧಿಕಾರದೊಳಗ.

ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿಸಂಹಿತೆಯನ್ನ ಪ್ರತಿ ಚುನಾವಣೆಗೆ ಮುಂಚೆ ಬದಲಿಸಿಗೋತ, ಗಟ್ಟಿ ಮಾಡಿಕೋತ, ತಪ್ಪುಗಳನ್ನು ತಿದ್ದಿಕೋತ, ಹಿಂದಿನ ಚುನಾವಣೆ ಪಾಠಗಳನ್ನು ಕಲಕೋತ ಖರೇ ಅರ್ಥದೊಳಗ ಅದನ್ನ ಮಾದರಿ ಮಾಡಬೇಕು ಅನ್ನೊ ಕೆಲಸ ಮಾಡಿಕೋತ ಬಂದದ.

ಅದರ ಕೆಲವು ಅಂಶಗಳನ್ನು ನೋಡೋಣ.
 ಹೊಸ ಯೋಜನೆ ಘೋಷಿಸಬಾರದು, ಹೊಸ ಕಾರ್ಯಕ್ರಮ ಶುರುಮಾಡಬಾರದು
 ಸರಕಾರಿ ವಸತಿಗೃಹ, ಕಚೇರಿಗಳನ್ನ ರಾಜಕೀಯ ಕಾರಣಗಳಿಗೆ ಬಳಸಬಾರದು, ಮೀಟಿಂಗು ಮಾಡಬಾರದು
 ಸರಕಾರಿ ಸ್ಥಳಗಳನ್ನ ಅಂದಗೆಡಿಸಬಾರದು.
 ವಿರೋಧಿಗಳ ಮನೀ ಮುಂದ, ಅವರಿಗೆ ಕಿರಿಕಿರಿ ಆಗೋ ಹಂಗ ಪ್ರಭಾತಫೇರಿ ತೆಗೀಬಾರದು, ಹೊಯ್ಕೋ- ಬಡಕೋ ಮಾಡಬಾರದು
 ಸರಕಾರಿ ಮಾಧ್ಯಮದೊಳಗ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು
 ಮೈಕಾಸುರನನ್ನ ರಾತ್ರಿ ಒದರಸಬಾರದು.
 ಆಡಳಿತ ಪಕ್ಷ ತನ್ನ ಶಕ್ತಿಯ ದುರುಪಯೋಗ ಮಾಡಬಾರದು
 ಮಂತ್ರಿಗಳು ಗಾಡಿ, ಘೋಡಾ, ಪೀಏ, ಪೀಪಿ, ಗನ್ ಮ್ಯಾನು, ಉಪಯೋಗಿಸಬಾರದು.
 ಮತದಾನದ ದಿವಸ ಮತದಾರ ಮಹಾಪ್ರಭುಗಳನ್ನ ಹುದ್ದರಿಗಳು ತಮ್ಮ ಗಾಡಿಯೊಳಗ ಕರಕೊಂಡು ಹೋಗಬಾರದು.
 (ಅಧಿಕಾರಿಗಳಿಗೆ ಗೊತ್ತಾಗೋ ಹಂಗ) ಹಣ- ಹೆಂಡ ಹಂಚಬಾರದು, ಇತ್ಯಾದಿ, ಇತ್ಯಾದಿ.

ಒಟ್ಟಿನೊಳಗ, ನಾಯಕರು ಜನಪ್ರೀತಿಯಿಂದ ಚುನಾವಣೆ ಗೆಲ್ಲಬೇಕೇ ಹೊರತು ಜನರನ್ನು ಪ್ರಲೋಭಿಸಿ ಅಥವಾ ಹೆದರಿಸಿ ಗೆಲ್ಲಬಾರದು ಅನ್ನೋದು ಮಾನೀಸಂ ಉದ್ದೇಶ.

ಇದು ಚುನಾವಣೆ ಘೋಷಣೆ ಆದತಕ್ಷಣ ಜಾರಿಗೆ ಬರತದ. ಚುನಾವಣೆ ಪ್ರಕ್ರಿಯೆ ಮುಗಿಯೋ ತನಕಾ ಇರತದ.

ಬಹುಮಟ್ಟಿಗೆ ಯಾವುದಾದರೂ ಕ್ಷೇತ್ರದೊಳಗ ಚುನಾವಣೆ ಬಂದರ ಆ ಇಡೀ ರಾಜ್ಯ ಅಥವಾ ಜಿಲ್ಲೆಗೆ ಇದು ಲಾಗೂ ಆಗತದ.

ಇದನ್ನು ಉಲ್ಲಂಘಿಸಿದರ ಜೈಲಿಗೆ ಹಾಕೋದರಿಂದ ಹಿಡದು ಮುಂದಿನ ಚುನಾವಣೆಗೆ ಅಯೋಗ್ಯರನ್ನಾಗಿ ಮಾಡೋ ತನಕಾ ಆಯೋಗಕ್ಕ ಅಧಿಕಾರ ಐತಿ.

ಹಿಂದೆಲ್ಲಾ ಚುನಾವಣೆ ಅಧಿಕಾರಿಗಳಿಗೆ ಹೆಚ್ಚಿನ ಡ್ಯೂಟಿ ಹಾಕಿ ಮಾನೀಸಂ ಮೇಲುಸ್ತುವಾರಿ ಕೊಡತಿದ್ದರು. ಈಗ ಮಾನೀಸಂ ಜಾರಿಗೆ ಅಂತನೇ ಬ್ಯಾರೆ ಅಧಿಕಾರಿ ಇರತಾರ.
ಆದರೂ ಚುನಾವಣೆಗೆ ಬಡಿದ ಮುಸುಕು ಸರದಿಲ್ಲ. ಅವು ಪಾರದರ್ಶಕ ಆಗಿಲ್ಲ ಅನ್ನೋ ಮಾತು ಕಡಿಮಿ ಆಗಿಲ್ಲ.

ಇವೆಲ್ಲವನ್ನೂ ನಾವು ಸರಿಯಾಗಿ ಪಾಲಿಸಲಿಕ್ಕೆ ಹತ್ತೇವೇನು? ಇದಕ್ಕ `ಇಲ್ಲ’ ಅನ್ನೋ ಯಾಷಿ ಮಾತಿನಗಿಂತಾ `ಕಮ್ಮಿ ಖರೇ’ ಅನ್ನೋ ಸಿಹಿಮಾತಿನ ಉತ್ತರನ ಸರಿ ಆದೀತು.
ಈ ಹಿನ್ನೆಲೆಯೊಳಗ ಒಂದು ವಿಷಯ ನೆನಪು ಆಗತದ.

`ಅವರು ಭಾಳ ಪ್ರತಿಭಾವಂತರು, ಒಳ್ಳೆಯವರು, ಇತರರಿಗೆ ಮಾದರಿಯಾಗಬಲ್ಲವರು ಆದರೆ ಅವರಿಗೆ ಸಿಗಬೇಕಾದ ಮನ್ನಣೆ ಸಿಗಲಿಲ್ಲ” ಅನ್ನೋದು ಏನದಲಾ, ಅದು ನಂ ಹಿಂದೂಸ್ತಾನದಾಗ ಕೇಳಿ ಬರಕೋತನ ಇರೋ ಸಿಕ್ಕಾಪಟ್ಟೆ ಕೂಗುಗಳೊಳಗ ಒಂದು. ಈ ಮಾತಿಗೆ ತಕ್ಕಂತೆ ಇದ್ದ ಒಬ್ಬ ದೊಡ್ಡ ಮನಿಷ ಅಂದರ ಮಾಜಿ ಉಪಪ್ರಧಾನಿ, ಪ್ರಕಾಂಡಪಂಡಿತ ಬಾಬು ಜಗಜೀವನರಾಂ. ಅವರ ಧರ್ಮಪತ್ನಿ ಇಂದ್ರಾಣಿ ದೇವಿ. ಕಾನಪುರದ ಸಾಮಾಜಿಕ ಕಾರ್ಯಕರ್ತರ ಮಗಳಾದ ಇಂದ್ರಾಣಿ ದೇವಿ ಅವರು ಒಂದು ಪುಸ್ತಕ ಬರೆದರು ಅದರ ಹೆಸರು `ದೇಖಿ, ಸುನಿ, ಬೀತಿ ಬಾತೆಂ’ (ನೋಡಿದ, ಕೇಳಿದ, ಆಗಿ ಹೋದ ಮಾತುಗಳು).

ಅದರೊಳಗ ಒಂದು ಭಾರಿ ಮಜಾ ವಿಷಯ ಐತಿ. “ಅಮೆರಿಕಯಲ್ಲಿ ಬಿಳಿಯರು ಕರಿಯರಿಗೆ ಹಿಂಸೆ ಕೊಡಬಾರದು ಅಂತ ಅಬ್ರಹಾಂ ಲಿಂಕನ್ ಹಾಗೂ ಇತರ ನಾಯಕರು ಪ್ರಯತ್ನಿಸಿದಾಗ ಅಲ್ಲಿ ಭಯಂಕರ ಪ್ರತಿರೋಧ ಬಂತು. ಆದರೆ ಭಾರತದಲ್ಲಿ ಗುಲಾಮಗಿರಿ ಹಾಗೂ ಅಸ್ಪೃಶ್ಯತೆ ಯನ್ನು ಪ್ರತಿಬಂಧಿಸಿದಾಗ ಹಾಗಾಗಲಿಲ್ಲ” ಅನ್ನೋದು.

ಅದಕ್ಕೆ ಇಂದ್ರಾಣಿ ಅವರು ಕೊಡುವ ಕಾರಣ ಇನ್ನೂ ಮಜಾ. “ಯಾಕೆ ಗೊತ್ತೇ? ಈ ಕಾನೂನುಗಳನ್ನು ಈ ದೇಶದಲ್ಲಿ ಯಾರೂ ಸರಿಯಾಗಿ ಜಾರಿ ಮಾಡೋದಿಲ್ಲ. ಇಂತಹ ಎಷ್ಟು ಕಾನೂನು ಬಂದರೂ ಇಲ್ಲಿ ನಿಮ್ನ ವರ್ಗದ ಜನರ ಬದುಕು ಬದಲಾಗೋದಿಲ್ಲ” ಅಂತ ಅವರು ಷರಾ ಎಳೀತಾರ. ಆ ಪುಸ್ತಕ ಓದಿ ಕೆಳಗ ಇಡಬೇಕಾದರ ‘ಐವತ್ತು ವರ್ಷದ ಹಿಂದೆ ಹೇಳಿದ ಈ ಮಾತುಗಳು ಎಷ್ಟು ಪ್ರಸ್ತುತ’ ಅಂತ ಮತ್ತ ಕ್ಲೀಷೆಯೊಳಗ ಮಾತಾಡಬೇಕಾಗತದ.

ಹೆಚ್ಚಿನ ಮಾಹಿತಿಗೆ – ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...