HomeUncategorizedಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

- Advertisement -
- Advertisement -

ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು.

ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ ನೀತಿಸಂಹಿತೆ (ಮಾನಿಸಂ). ಖರೇ ಹೇಳಬೇಕಂದರ ಅದು ಸಂಸತ್ತು ಮಾಡಿದಲ್ಲ. ಆಯೋಗ ಮಾಡಿದ್ದು ಅಧೀನ ಶಾಸಕಾಂಗದ ಅಧಿಕಾರದೊಳಗ.

ಕೇಂದ್ರ ಚುನಾವಣಾ ಆಯೋಗ ಮಾದರಿ ನೀತಿಸಂಹಿತೆಯನ್ನ ಪ್ರತಿ ಚುನಾವಣೆಗೆ ಮುಂಚೆ ಬದಲಿಸಿಗೋತ, ಗಟ್ಟಿ ಮಾಡಿಕೋತ, ತಪ್ಪುಗಳನ್ನು ತಿದ್ದಿಕೋತ, ಹಿಂದಿನ ಚುನಾವಣೆ ಪಾಠಗಳನ್ನು ಕಲಕೋತ ಖರೇ ಅರ್ಥದೊಳಗ ಅದನ್ನ ಮಾದರಿ ಮಾಡಬೇಕು ಅನ್ನೊ ಕೆಲಸ ಮಾಡಿಕೋತ ಬಂದದ.

ಅದರ ಕೆಲವು ಅಂಶಗಳನ್ನು ನೋಡೋಣ.
 ಹೊಸ ಯೋಜನೆ ಘೋಷಿಸಬಾರದು, ಹೊಸ ಕಾರ್ಯಕ್ರಮ ಶುರುಮಾಡಬಾರದು
 ಸರಕಾರಿ ವಸತಿಗೃಹ, ಕಚೇರಿಗಳನ್ನ ರಾಜಕೀಯ ಕಾರಣಗಳಿಗೆ ಬಳಸಬಾರದು, ಮೀಟಿಂಗು ಮಾಡಬಾರದು
 ಸರಕಾರಿ ಸ್ಥಳಗಳನ್ನ ಅಂದಗೆಡಿಸಬಾರದು.
 ವಿರೋಧಿಗಳ ಮನೀ ಮುಂದ, ಅವರಿಗೆ ಕಿರಿಕಿರಿ ಆಗೋ ಹಂಗ ಪ್ರಭಾತಫೇರಿ ತೆಗೀಬಾರದು, ಹೊಯ್ಕೋ- ಬಡಕೋ ಮಾಡಬಾರದು
 ಸರಕಾರಿ ಮಾಧ್ಯಮದೊಳಗ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು
 ಮೈಕಾಸುರನನ್ನ ರಾತ್ರಿ ಒದರಸಬಾರದು.
 ಆಡಳಿತ ಪಕ್ಷ ತನ್ನ ಶಕ್ತಿಯ ದುರುಪಯೋಗ ಮಾಡಬಾರದು
 ಮಂತ್ರಿಗಳು ಗಾಡಿ, ಘೋಡಾ, ಪೀಏ, ಪೀಪಿ, ಗನ್ ಮ್ಯಾನು, ಉಪಯೋಗಿಸಬಾರದು.
 ಮತದಾನದ ದಿವಸ ಮತದಾರ ಮಹಾಪ್ರಭುಗಳನ್ನ ಹುದ್ದರಿಗಳು ತಮ್ಮ ಗಾಡಿಯೊಳಗ ಕರಕೊಂಡು ಹೋಗಬಾರದು.
 (ಅಧಿಕಾರಿಗಳಿಗೆ ಗೊತ್ತಾಗೋ ಹಂಗ) ಹಣ- ಹೆಂಡ ಹಂಚಬಾರದು, ಇತ್ಯಾದಿ, ಇತ್ಯಾದಿ.

ಒಟ್ಟಿನೊಳಗ, ನಾಯಕರು ಜನಪ್ರೀತಿಯಿಂದ ಚುನಾವಣೆ ಗೆಲ್ಲಬೇಕೇ ಹೊರತು ಜನರನ್ನು ಪ್ರಲೋಭಿಸಿ ಅಥವಾ ಹೆದರಿಸಿ ಗೆಲ್ಲಬಾರದು ಅನ್ನೋದು ಮಾನೀಸಂ ಉದ್ದೇಶ.

ಇದು ಚುನಾವಣೆ ಘೋಷಣೆ ಆದತಕ್ಷಣ ಜಾರಿಗೆ ಬರತದ. ಚುನಾವಣೆ ಪ್ರಕ್ರಿಯೆ ಮುಗಿಯೋ ತನಕಾ ಇರತದ.

ಬಹುಮಟ್ಟಿಗೆ ಯಾವುದಾದರೂ ಕ್ಷೇತ್ರದೊಳಗ ಚುನಾವಣೆ ಬಂದರ ಆ ಇಡೀ ರಾಜ್ಯ ಅಥವಾ ಜಿಲ್ಲೆಗೆ ಇದು ಲಾಗೂ ಆಗತದ.

ಇದನ್ನು ಉಲ್ಲಂಘಿಸಿದರ ಜೈಲಿಗೆ ಹಾಕೋದರಿಂದ ಹಿಡದು ಮುಂದಿನ ಚುನಾವಣೆಗೆ ಅಯೋಗ್ಯರನ್ನಾಗಿ ಮಾಡೋ ತನಕಾ ಆಯೋಗಕ್ಕ ಅಧಿಕಾರ ಐತಿ.

ಹಿಂದೆಲ್ಲಾ ಚುನಾವಣೆ ಅಧಿಕಾರಿಗಳಿಗೆ ಹೆಚ್ಚಿನ ಡ್ಯೂಟಿ ಹಾಕಿ ಮಾನೀಸಂ ಮೇಲುಸ್ತುವಾರಿ ಕೊಡತಿದ್ದರು. ಈಗ ಮಾನೀಸಂ ಜಾರಿಗೆ ಅಂತನೇ ಬ್ಯಾರೆ ಅಧಿಕಾರಿ ಇರತಾರ.
ಆದರೂ ಚುನಾವಣೆಗೆ ಬಡಿದ ಮುಸುಕು ಸರದಿಲ್ಲ. ಅವು ಪಾರದರ್ಶಕ ಆಗಿಲ್ಲ ಅನ್ನೋ ಮಾತು ಕಡಿಮಿ ಆಗಿಲ್ಲ.

ಇವೆಲ್ಲವನ್ನೂ ನಾವು ಸರಿಯಾಗಿ ಪಾಲಿಸಲಿಕ್ಕೆ ಹತ್ತೇವೇನು? ಇದಕ್ಕ `ಇಲ್ಲ’ ಅನ್ನೋ ಯಾಷಿ ಮಾತಿನಗಿಂತಾ `ಕಮ್ಮಿ ಖರೇ’ ಅನ್ನೋ ಸಿಹಿಮಾತಿನ ಉತ್ತರನ ಸರಿ ಆದೀತು.
ಈ ಹಿನ್ನೆಲೆಯೊಳಗ ಒಂದು ವಿಷಯ ನೆನಪು ಆಗತದ.

`ಅವರು ಭಾಳ ಪ್ರತಿಭಾವಂತರು, ಒಳ್ಳೆಯವರು, ಇತರರಿಗೆ ಮಾದರಿಯಾಗಬಲ್ಲವರು ಆದರೆ ಅವರಿಗೆ ಸಿಗಬೇಕಾದ ಮನ್ನಣೆ ಸಿಗಲಿಲ್ಲ” ಅನ್ನೋದು ಏನದಲಾ, ಅದು ನಂ ಹಿಂದೂಸ್ತಾನದಾಗ ಕೇಳಿ ಬರಕೋತನ ಇರೋ ಸಿಕ್ಕಾಪಟ್ಟೆ ಕೂಗುಗಳೊಳಗ ಒಂದು. ಈ ಮಾತಿಗೆ ತಕ್ಕಂತೆ ಇದ್ದ ಒಬ್ಬ ದೊಡ್ಡ ಮನಿಷ ಅಂದರ ಮಾಜಿ ಉಪಪ್ರಧಾನಿ, ಪ್ರಕಾಂಡಪಂಡಿತ ಬಾಬು ಜಗಜೀವನರಾಂ. ಅವರ ಧರ್ಮಪತ್ನಿ ಇಂದ್ರಾಣಿ ದೇವಿ. ಕಾನಪುರದ ಸಾಮಾಜಿಕ ಕಾರ್ಯಕರ್ತರ ಮಗಳಾದ ಇಂದ್ರಾಣಿ ದೇವಿ ಅವರು ಒಂದು ಪುಸ್ತಕ ಬರೆದರು ಅದರ ಹೆಸರು `ದೇಖಿ, ಸುನಿ, ಬೀತಿ ಬಾತೆಂ’ (ನೋಡಿದ, ಕೇಳಿದ, ಆಗಿ ಹೋದ ಮಾತುಗಳು).

ಅದರೊಳಗ ಒಂದು ಭಾರಿ ಮಜಾ ವಿಷಯ ಐತಿ. “ಅಮೆರಿಕಯಲ್ಲಿ ಬಿಳಿಯರು ಕರಿಯರಿಗೆ ಹಿಂಸೆ ಕೊಡಬಾರದು ಅಂತ ಅಬ್ರಹಾಂ ಲಿಂಕನ್ ಹಾಗೂ ಇತರ ನಾಯಕರು ಪ್ರಯತ್ನಿಸಿದಾಗ ಅಲ್ಲಿ ಭಯಂಕರ ಪ್ರತಿರೋಧ ಬಂತು. ಆದರೆ ಭಾರತದಲ್ಲಿ ಗುಲಾಮಗಿರಿ ಹಾಗೂ ಅಸ್ಪೃಶ್ಯತೆ ಯನ್ನು ಪ್ರತಿಬಂಧಿಸಿದಾಗ ಹಾಗಾಗಲಿಲ್ಲ” ಅನ್ನೋದು.

ಅದಕ್ಕೆ ಇಂದ್ರಾಣಿ ಅವರು ಕೊಡುವ ಕಾರಣ ಇನ್ನೂ ಮಜಾ. “ಯಾಕೆ ಗೊತ್ತೇ? ಈ ಕಾನೂನುಗಳನ್ನು ಈ ದೇಶದಲ್ಲಿ ಯಾರೂ ಸರಿಯಾಗಿ ಜಾರಿ ಮಾಡೋದಿಲ್ಲ. ಇಂತಹ ಎಷ್ಟು ಕಾನೂನು ಬಂದರೂ ಇಲ್ಲಿ ನಿಮ್ನ ವರ್ಗದ ಜನರ ಬದುಕು ಬದಲಾಗೋದಿಲ್ಲ” ಅಂತ ಅವರು ಷರಾ ಎಳೀತಾರ. ಆ ಪುಸ್ತಕ ಓದಿ ಕೆಳಗ ಇಡಬೇಕಾದರ ‘ಐವತ್ತು ವರ್ಷದ ಹಿಂದೆ ಹೇಳಿದ ಈ ಮಾತುಗಳು ಎಷ್ಟು ಪ್ರಸ್ತುತ’ ಅಂತ ಮತ್ತ ಕ್ಲೀಷೆಯೊಳಗ ಮಾತಾಡಬೇಕಾಗತದ.

ಹೆಚ್ಚಿನ ಮಾಹಿತಿಗೆ – ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...