Homeಕರ್ನಾಟಕಶಾಲಾ ಗೋಡೆಗಳ ಮೇಲೆ ಮೂಡಿದ ರಸ್ತೆ ನಿಯಮಗಳ ಚಿತ್ತಾರಗಳು: ಶಿಕ್ಷಕರಿಂದ ಶ್ಲಾಘನೀಯ ಪ್ರಯತ್ನ

ಶಾಲಾ ಗೋಡೆಗಳ ಮೇಲೆ ಮೂಡಿದ ರಸ್ತೆ ನಿಯಮಗಳ ಚಿತ್ತಾರಗಳು: ಶಿಕ್ಷಕರಿಂದ ಶ್ಲಾಘನೀಯ ಪ್ರಯತ್ನ

- Advertisement -
- Advertisement -

ಇಂದು ಜನಸಂಖ್ಯೆಯ ಹೆಚ್ಚಳದ ಕಾರಣಕ್ಕೂ, ಜನರ ಧಾವಂತ ಹೆಚ್ಚಾದ ಕಾರಣಕ್ಕೂ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಪಘಾತಗಳಿಂದ ಸಾವುಗಳು ಹೆಚ್ಚುತ್ತಿವೆ. ಇವುಗಳ ಕುರಿತು ಸರ್ಕಾರ, ಸಾರಿಗೆ ಇಲಾಖೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ.

ಈ ಅಪಘಾತಗಳಿಗೆ ಮುಖ್ಯ ಕಾರಣ ಬಹಳಷ್ಟು ಜನರು ಸಂಚಾರಿ ನಿಯಮಗಳನ್ನು ಪಾಲಿಸದಿರುವುದೇ ಆಗಿದೆ. ಕೆಲವು ರಸ್ತೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಹಲವರು ಅಮಾಯಕರು ಸಹ ತಮ್ಮದಲ್ಲದ ತಪ್ಪಿಗೆ ಅಪಘಾತಕ್ಕೊಳಗಾಗಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಿವೆ. ಈ ಸಮಸ್ಯೆಗೆ ಸಣ್ಣ ಮಟ್ಟದಲ್ಲಿ ಆದರೆ ವಿಶಿಷ್ಟವಾಗಿ ಪರಿಹಾರ ಹುಡುಕಲು ಸರ್ಕಾರಿ ಶಾಲಾ ಶಿಕ್ಷಕರ ತಂಡವೊಂದು ಸಿದ್ದವಾಗಿದೆ.

ಅಂದರೆ ಮಕ್ಕಳಿಗೆ ಶಾಲಾ ಹಂತದಲ್ಲಿಯೆ ರಸ್ತೆ ನಿಯಮಗಳು ಏನನ್ನು ಹೇಳುತ್ತವೆ? ಅವುಗಳ ಮಹತ್ವವೇನು? ಎಂಬುದರ ಕುರಿತು ಅರಿವು ಮೂಡಿಸಲು ಉಡುಪಿ ಜಿಲ್ಲೆಯ ಶಿಕ್ಷಕರ ತಂಡವೊಂದು ಮುಂದಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆಯ ಮೇಲೆ ರಸ್ತೆ ನಿಯಮಗಳ ಚಿತ್ತಾರಗಳನ್ನು ಈ ತಂಡಿ ಚಿತ್ರಿಸಿದೆ. ಆಕರ್ಷಕವಾಗಿ ಚಿತ್ರಗಳ ಮೂಲಕ ಇಡೀ ರಸ್ತೆ ನಿಯಮಗಳು ಮಕ್ಕಳ ಮನಸ್ಸಿನಲ್ಲಿ ಇಳಿಯುವಂತೆ ಮಾಡುವ ವಿನೂತನ ಪ್ರಯತ್ನ ನಡೆಯುತ್ತಿದೆ.

ನಮ್ಮ ಶಾಲಾ ಗೋಡೆಯ ಮೇಲೆ ಚಿತ್ತಾರವನ್ನು ಅರಳಿಸಿದವರು ಸಮೀಪದ ಬೇಳೂರು, ಕೆದೂರು, ವಕ್ವಾಡಿ, ಬೀಜಾಡಿ ಮತ್ತು ವಡೇರಹೋಬಳಿ ಸರಕಾರಿ ಪ್ರೌಢಶಾಲಾ ಚಿತ್ರಕಲಾ ಅಧ್ಯಾಪಕರು. ಧನ್ಯವಾದ ಹಾಗೂ ಅಭಿನಂದನೆಗಳು ಆ ನಮ್ಮ ಚಿತ್ರಕಲಾ ಅಧ್ಯಾಪಕರಿಗೆ ಸಲ್ಲಬೇಕು. ಇವತ್ತು ಬೆಳ್ಳಿಗ್ಗೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆಯೂ ತಮ್ಮ ಕುಂಚದಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೂ ಅನುಕೂಲವಾಗುವ ಈ ಮಾಹಿತಿಯನ್ನು ಅರಳಿಸಿದರು ಎನ್ನುತ್ತಾರೆ ಕುಂಭಾಶಿಯ ಶಿಕ್ಷಕಿಯಾದ ಸುಚಿತ್ರರವರು.

ಒಟ್ಟಿನಲ್ಲಿ ಈ ಶಿಕ್ಷಕರು ಮಾಡುತ್ತಿರುವ   ಈ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತಲೇ ನಾವು ಕೂಡ ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾ ಇತರರಿಗೂ ತಿಳಿಸಬೇಕಾಗಿದೆ. ಈ ಶಿಕ್ಷಕರನ್ನು ಉಳಿದ ಶಿಕ್ಷಕರು ಮಾದರಿಯಾಗಿ ಸ್ವೀಕರಿಸುತ್ತಾರೆಂದು ಆಶಿಸೋಣ.

ಆ ಶಿಕ್ಷಕರು ಶಾಲಾ ಗೋಡೆಗಳ ಮೇಲೆ ಬಿಡಿಸಿರುವ ಕೆಲ ಚಿತ್ರಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...