Homeಕರ್ನಾಟಕಶಾಲಾ ಗೋಡೆಗಳ ಮೇಲೆ ಮೂಡಿದ ರಸ್ತೆ ನಿಯಮಗಳ ಚಿತ್ತಾರಗಳು: ಶಿಕ್ಷಕರಿಂದ ಶ್ಲಾಘನೀಯ ಪ್ರಯತ್ನ

ಶಾಲಾ ಗೋಡೆಗಳ ಮೇಲೆ ಮೂಡಿದ ರಸ್ತೆ ನಿಯಮಗಳ ಚಿತ್ತಾರಗಳು: ಶಿಕ್ಷಕರಿಂದ ಶ್ಲಾಘನೀಯ ಪ್ರಯತ್ನ

- Advertisement -
- Advertisement -

ಇಂದು ಜನಸಂಖ್ಯೆಯ ಹೆಚ್ಚಳದ ಕಾರಣಕ್ಕೂ, ಜನರ ಧಾವಂತ ಹೆಚ್ಚಾದ ಕಾರಣಕ್ಕೂ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಪಘಾತಗಳಿಂದ ಸಾವುಗಳು ಹೆಚ್ಚುತ್ತಿವೆ. ಇವುಗಳ ಕುರಿತು ಸರ್ಕಾರ, ಸಾರಿಗೆ ಇಲಾಖೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ.

ಈ ಅಪಘಾತಗಳಿಗೆ ಮುಖ್ಯ ಕಾರಣ ಬಹಳಷ್ಟು ಜನರು ಸಂಚಾರಿ ನಿಯಮಗಳನ್ನು ಪಾಲಿಸದಿರುವುದೇ ಆಗಿದೆ. ಕೆಲವು ರಸ್ತೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಹಲವರು ಅಮಾಯಕರು ಸಹ ತಮ್ಮದಲ್ಲದ ತಪ್ಪಿಗೆ ಅಪಘಾತಕ್ಕೊಳಗಾಗಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಿವೆ. ಈ ಸಮಸ್ಯೆಗೆ ಸಣ್ಣ ಮಟ್ಟದಲ್ಲಿ ಆದರೆ ವಿಶಿಷ್ಟವಾಗಿ ಪರಿಹಾರ ಹುಡುಕಲು ಸರ್ಕಾರಿ ಶಾಲಾ ಶಿಕ್ಷಕರ ತಂಡವೊಂದು ಸಿದ್ದವಾಗಿದೆ.

ಅಂದರೆ ಮಕ್ಕಳಿಗೆ ಶಾಲಾ ಹಂತದಲ್ಲಿಯೆ ರಸ್ತೆ ನಿಯಮಗಳು ಏನನ್ನು ಹೇಳುತ್ತವೆ? ಅವುಗಳ ಮಹತ್ವವೇನು? ಎಂಬುದರ ಕುರಿತು ಅರಿವು ಮೂಡಿಸಲು ಉಡುಪಿ ಜಿಲ್ಲೆಯ ಶಿಕ್ಷಕರ ತಂಡವೊಂದು ಮುಂದಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆಯ ಮೇಲೆ ರಸ್ತೆ ನಿಯಮಗಳ ಚಿತ್ತಾರಗಳನ್ನು ಈ ತಂಡಿ ಚಿತ್ರಿಸಿದೆ. ಆಕರ್ಷಕವಾಗಿ ಚಿತ್ರಗಳ ಮೂಲಕ ಇಡೀ ರಸ್ತೆ ನಿಯಮಗಳು ಮಕ್ಕಳ ಮನಸ್ಸಿನಲ್ಲಿ ಇಳಿಯುವಂತೆ ಮಾಡುವ ವಿನೂತನ ಪ್ರಯತ್ನ ನಡೆಯುತ್ತಿದೆ.

ನಮ್ಮ ಶಾಲಾ ಗೋಡೆಯ ಮೇಲೆ ಚಿತ್ತಾರವನ್ನು ಅರಳಿಸಿದವರು ಸಮೀಪದ ಬೇಳೂರು, ಕೆದೂರು, ವಕ್ವಾಡಿ, ಬೀಜಾಡಿ ಮತ್ತು ವಡೇರಹೋಬಳಿ ಸರಕಾರಿ ಪ್ರೌಢಶಾಲಾ ಚಿತ್ರಕಲಾ ಅಧ್ಯಾಪಕರು. ಧನ್ಯವಾದ ಹಾಗೂ ಅಭಿನಂದನೆಗಳು ಆ ನಮ್ಮ ಚಿತ್ರಕಲಾ ಅಧ್ಯಾಪಕರಿಗೆ ಸಲ್ಲಬೇಕು. ಇವತ್ತು ಬೆಳ್ಳಿಗ್ಗೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆಯೂ ತಮ್ಮ ಕುಂಚದಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೂ ಅನುಕೂಲವಾಗುವ ಈ ಮಾಹಿತಿಯನ್ನು ಅರಳಿಸಿದರು ಎನ್ನುತ್ತಾರೆ ಕುಂಭಾಶಿಯ ಶಿಕ್ಷಕಿಯಾದ ಸುಚಿತ್ರರವರು.

ಒಟ್ಟಿನಲ್ಲಿ ಈ ಶಿಕ್ಷಕರು ಮಾಡುತ್ತಿರುವ   ಈ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತಲೇ ನಾವು ಕೂಡ ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾ ಇತರರಿಗೂ ತಿಳಿಸಬೇಕಾಗಿದೆ. ಈ ಶಿಕ್ಷಕರನ್ನು ಉಳಿದ ಶಿಕ್ಷಕರು ಮಾದರಿಯಾಗಿ ಸ್ವೀಕರಿಸುತ್ತಾರೆಂದು ಆಶಿಸೋಣ.

ಆ ಶಿಕ್ಷಕರು ಶಾಲಾ ಗೋಡೆಗಳ ಮೇಲೆ ಬಿಡಿಸಿರುವ ಕೆಲ ಚಿತ್ರಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...