Homeಕರ್ನಾಟಕಶಾಲಾ ಗೋಡೆಗಳ ಮೇಲೆ ಮೂಡಿದ ರಸ್ತೆ ನಿಯಮಗಳ ಚಿತ್ತಾರಗಳು: ಶಿಕ್ಷಕರಿಂದ ಶ್ಲಾಘನೀಯ ಪ್ರಯತ್ನ

ಶಾಲಾ ಗೋಡೆಗಳ ಮೇಲೆ ಮೂಡಿದ ರಸ್ತೆ ನಿಯಮಗಳ ಚಿತ್ತಾರಗಳು: ಶಿಕ್ಷಕರಿಂದ ಶ್ಲಾಘನೀಯ ಪ್ರಯತ್ನ

- Advertisement -
- Advertisement -

ಇಂದು ಜನಸಂಖ್ಯೆಯ ಹೆಚ್ಚಳದ ಕಾರಣಕ್ಕೂ, ಜನರ ಧಾವಂತ ಹೆಚ್ಚಾದ ಕಾರಣಕ್ಕೂ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಪಘಾತಗಳಿಂದ ಸಾವುಗಳು ಹೆಚ್ಚುತ್ತಿವೆ. ಇವುಗಳ ಕುರಿತು ಸರ್ಕಾರ, ಸಾರಿಗೆ ಇಲಾಖೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ.

ಈ ಅಪಘಾತಗಳಿಗೆ ಮುಖ್ಯ ಕಾರಣ ಬಹಳಷ್ಟು ಜನರು ಸಂಚಾರಿ ನಿಯಮಗಳನ್ನು ಪಾಲಿಸದಿರುವುದೇ ಆಗಿದೆ. ಕೆಲವು ರಸ್ತೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಹಲವರು ಅಮಾಯಕರು ಸಹ ತಮ್ಮದಲ್ಲದ ತಪ್ಪಿಗೆ ಅಪಘಾತಕ್ಕೊಳಗಾಗಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಿವೆ. ಈ ಸಮಸ್ಯೆಗೆ ಸಣ್ಣ ಮಟ್ಟದಲ್ಲಿ ಆದರೆ ವಿಶಿಷ್ಟವಾಗಿ ಪರಿಹಾರ ಹುಡುಕಲು ಸರ್ಕಾರಿ ಶಾಲಾ ಶಿಕ್ಷಕರ ತಂಡವೊಂದು ಸಿದ್ದವಾಗಿದೆ.

ಅಂದರೆ ಮಕ್ಕಳಿಗೆ ಶಾಲಾ ಹಂತದಲ್ಲಿಯೆ ರಸ್ತೆ ನಿಯಮಗಳು ಏನನ್ನು ಹೇಳುತ್ತವೆ? ಅವುಗಳ ಮಹತ್ವವೇನು? ಎಂಬುದರ ಕುರಿತು ಅರಿವು ಮೂಡಿಸಲು ಉಡುಪಿ ಜಿಲ್ಲೆಯ ಶಿಕ್ಷಕರ ತಂಡವೊಂದು ಮುಂದಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆಯ ಮೇಲೆ ರಸ್ತೆ ನಿಯಮಗಳ ಚಿತ್ತಾರಗಳನ್ನು ಈ ತಂಡಿ ಚಿತ್ರಿಸಿದೆ. ಆಕರ್ಷಕವಾಗಿ ಚಿತ್ರಗಳ ಮೂಲಕ ಇಡೀ ರಸ್ತೆ ನಿಯಮಗಳು ಮಕ್ಕಳ ಮನಸ್ಸಿನಲ್ಲಿ ಇಳಿಯುವಂತೆ ಮಾಡುವ ವಿನೂತನ ಪ್ರಯತ್ನ ನಡೆಯುತ್ತಿದೆ.

ನಮ್ಮ ಶಾಲಾ ಗೋಡೆಯ ಮೇಲೆ ಚಿತ್ತಾರವನ್ನು ಅರಳಿಸಿದವರು ಸಮೀಪದ ಬೇಳೂರು, ಕೆದೂರು, ವಕ್ವಾಡಿ, ಬೀಜಾಡಿ ಮತ್ತು ವಡೇರಹೋಬಳಿ ಸರಕಾರಿ ಪ್ರೌಢಶಾಲಾ ಚಿತ್ರಕಲಾ ಅಧ್ಯಾಪಕರು. ಧನ್ಯವಾದ ಹಾಗೂ ಅಭಿನಂದನೆಗಳು ಆ ನಮ್ಮ ಚಿತ್ರಕಲಾ ಅಧ್ಯಾಪಕರಿಗೆ ಸಲ್ಲಬೇಕು. ಇವತ್ತು ಬೆಳ್ಳಿಗ್ಗೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆಯೂ ತಮ್ಮ ಕುಂಚದಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೂ ಅನುಕೂಲವಾಗುವ ಈ ಮಾಹಿತಿಯನ್ನು ಅರಳಿಸಿದರು ಎನ್ನುತ್ತಾರೆ ಕುಂಭಾಶಿಯ ಶಿಕ್ಷಕಿಯಾದ ಸುಚಿತ್ರರವರು.

ಒಟ್ಟಿನಲ್ಲಿ ಈ ಶಿಕ್ಷಕರು ಮಾಡುತ್ತಿರುವ   ಈ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತಲೇ ನಾವು ಕೂಡ ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾ ಇತರರಿಗೂ ತಿಳಿಸಬೇಕಾಗಿದೆ. ಈ ಶಿಕ್ಷಕರನ್ನು ಉಳಿದ ಶಿಕ್ಷಕರು ಮಾದರಿಯಾಗಿ ಸ್ವೀಕರಿಸುತ್ತಾರೆಂದು ಆಶಿಸೋಣ.

ಆ ಶಿಕ್ಷಕರು ಶಾಲಾ ಗೋಡೆಗಳ ಮೇಲೆ ಬಿಡಿಸಿರುವ ಕೆಲ ಚಿತ್ರಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...