Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...