Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...