Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...