Homeಅಂಕಣಗಳುಮೋದಿಜಿಯ ಸಮುದ್ರ ಗೀತೆಗಳು

ಮೋದಿಜಿಯ ಸಮುದ್ರ ಗೀತೆಗಳು

- Advertisement -
- Advertisement -

| ಥೂತ್ತೇರಿ ಯಾಹೂ |

ಭಾಜಪದ ಮೊದಲ ಪ್ರಧಾನಿ ವಾಜಪೇಯಿ ಆಗಾಗ್ಗೆ ಕವನ ಕೆರೆಯುತ್ತಿದ್ದರು. ಕವಿ ಹೃದಯವೂ ಅವರಿಗಿತ್ತು. ಆದ್ದರಿಂದ ಬಿಜೆಪಿ-ಕವಿ ಎನಿಸಿದ್ದರು. ಅವರಿಗೆ ನಾನೇನು ಕಡಿಮೆ ಎಂದು ಸೆಡ್ಡು ಹೊಡೆದಿರುವ ಈಗಿನ ಪ್ರಧಾನಿ ನರೇಂದ್ರ ಮೋದಿಯೂ ಪದಬೇಧಿ ಮಾಡಿಕೊಂಡು ಅದನ್ನೇ ಕಾವ್ಯವೆಂದು ಪರಿಗಣಿಸಿ ಬಿಜೆಪಿ ಕಾವ್ಯಪ್ರಿಯರಿಗೆ ಬಡಿಸಿದ್ದಾರಂತಲ್ಲಾ. ಅದನ್ನ ಕನ್ನಡ ಕರಪತ್ರ ಎಂಬ ಪತ್ರಿಕೆ ಪ್ರಕಟಿಸಿರುವುದಲ್ಲದೆ ಮೋದಿಯ ಪ್ರಾಮಾಣಿಕ ಅಭಿವ್ಯಕ್ತಿಯನ್ನ ತಿರುಚಿ ಪ್ರಕಟಿಸಿದೆಯಲ್ಲಾ. ವಾಸ್ತವವಾಗಿ ಮೋದಿ ಮೂಲಪ್ರತಿ ಹೇಗಿತ್ತು ಎಂಬ ಊಹೆಯ ಸಾಲುಗಳನ್ನು ನ್ಯಾಯಪಥ ಓದುಗರಿಗೆ ಕೊಡುವುದು ನಮ್ಮ ಧರ್ಮ. ಇದು ಕವಿಯೊಬ್ಬನ ಕಾವ್ಯದ ಸಾಲುಗಳ ನಡುವಿನ ಅಕ್ರಮ ಪ್ರವೇಶವಲ್ಲ. ಕಳೆದ ಶತಮಾನದಲ್ಲೇ ವರಕವಿ ಬೇಂದ್ರೆಯವರು ವಾಚನಕ್ಕೆ ಕಳುಹಿಸಿದ ಕವನದ ಸಾಲುಗಳಲ್ಲಿ ಕಡೆಯ ಕೆಲಸಾಲುಗಳು ಬಿಟ್ಟು ಹೋಗಿದ್ದು ಅದನ್ನ ಊಹಿಸಿ ಬರೆದು ಪೂರ್ಣಗೊಳಿಸಿದ ಕೀರ್ತಿ, ಕೀರ್ತಿನಾಥ ಕುರ್ತುಕೋಟಿಯವರದ್ದು. ಅಂತಹ ಭಾಗ್ಯ ಯಾಹುಗೆ ದೊರಕಿದ್ದು ಭಿನ್ನದೊಳಗಿನ ಸೌಭಾಗ್ಯವಲ್ಲವೆ, ಥೂತ್ತೇರಿ!

“ಮೋದಿಯ ಪದಬೇದಿ”

1

ನಮಸ್ತೇ ಸದಾ ವತ್ಸಲೇ ಸಾಗರ;
ನೀನು ಧೀರ ಗಂಭೀರ, ಆದರೆ ನಾನು,
ಸೀರ, ಬೀರ, ಚ್ವೌರ, ಕ್ವಾರ,
ನೀನು ನೀಲಿ
ನಮ್ಮ ಸಂಘ ಹಳದಿ
ನೀನು ಜಗತ್ತಿಗೆ ಜೀವನ ನೀಡುವೆ
ನಾನು ಸಂಘವೆಂಬ ವಿಷವೃಕ್ಷಕ್ಕೆ
ಹಾಲೆರೆಯುವೆ.
ಸಮುದ್ರದ ಮೇಲೆ ಕೋಲಾಹಲವಿದೆ,
ಭಾರತದ ಒಳಗೆ ಹಾಲಾಹಲವಿದೆ,
ನೀನು ವಿಚಲಿತನಾಗಲ್ಲ,
ನಾವು ಸದಾ ವಿಚಲಿತರು.
ಗರ್ಜಿಸುವ ಕನ್ನಯ್ಯನನ್ನು ಕಂಡರೆ
ನಮ್ಮವರು ಭಯಭೀತರಾಗುತ್ತಾರೆ.
ಸಾಬರನ್ನು ಕಂಡರೆ ಸಣ್ಣಗೆ ನಡುಗುತ್ತಾರೆ.
ನಿನ್ನೊಳಗೆ ಅಡಗಿರುವ ಶಾರ್ಕುಗಳಂತೆ
ಭಾರತದಲ್ಲಿ ಅಡಿಗಿದ್ದಾರವರು.

2
ನಮಸ್ತೇ ಸದಾವತ್ಸಲೇ ಸಾಗರ;
ನೀನು ಶಕ್ತಿಭಂಡಾರ.
ನಾನು ಕುಯುಕ್ತಿ ಬಿಡಾರ,
ನೀನು ಯಾವತ್ತೂ ನಿನ್ನ ಪರಿಧಿಯಲ್ಲಿರುತ್ತೀ.
ನಾವು ಸದಾ ಪರಿಧಿ ಮೀರುತ್ತೇವೆ,
ನೀನು ಯಾವತ್ತೂ ದೊಡ್ಡತನದ ಬೋಧನೆ ಮಾಡುತ್ತಿ,
ನಾವು ಪ್ರತಿಬಾರಿ ಸಣ್ಣತನದಲ್ಲೇ ವಾದಿಸುತ್ತೇವೆ.
ನಿನ್ನ ಅಲೆಗಳಲ್ಲಿ ಜೀವನ ಸಂದೇಶವಿದೆ,
ನಮ್ಮ ಮಾತುಗಳಲ್ಲಿ ಸರ್ವನಾಶದ ಆಶಯವಿದೆ.
ನಿನಗೆ ಯಾವ ಆಸೆಯೂ ಇಲ್ಲ,
ಭರತಖಂಡವನ್ನು ಹಿಂದೂ ರಾಷ್ಟ್ರ ಮಾಡುವ ದುರಾಶೆ ನಮ್ಮನ್ನು ಆಕ್ರಮಿಸಿದೆ.

3
ನಮಸ್ತೆ ಸದಾವತ್ಸಲೇ ಸಾಗರ;
ನಡೆಯುತ್ತಲೇ ಜೀವನ ನಡೆಸುತ್ತಿ,
ನಾನು ತಿರುಗುತ್ತಲೇ ಜೀವನ ನಡೆಸುತ್ತಿದ್ದೇನೆ.
ತಿರುಗಲು ನನಗೆ ಆಯಾಸವೇ ಇಲ್ಲ
ಏಕೆಂದರೆ ನನಗೆ ಮನೆ ಎಂಬುದೇ ಇಲ್ಲ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನನ್ನ ದೇಶದಲ್ಲೇ ತಿರುಗಿದರೆ
ಅತಿವೃಷ್ಠಿ ಅನಾವೃಷ್ಠಿಗೆ ತುತ್ತಾದವರ
ಅತಿಯಾದ ಬೇಡಿಕೆ ನಿಂದನೆಯ ನರಕ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನಾಯಿಗೆ ಕೆಲಸವಿಲ್ಲ,
ಕೂರಲು ಸಮಯವಿಲ್ಲ ಎಂಬಂತೆ,
ನನ್ನ ಅಲೆಮಾರಿ ಸಂದೇಶ
ಅನವರತ-ಅನವರತ.

4
ಓಂ ನಮೋ ಸದಾವತ್ಸಲೇ ಸಾಗರ:
ಅಲೆಯಿಂದ ಅಲೆಗಳು ಹೊರಬೀಳುವುದಿಲ್ಲ.
ಇದೇ ಸಂಘಕ್ಕೆ ಆದರ್ಶ,
ಬಿದ್ದರೂ ಉಪ ಅಲೆಗಳ ಆಶ್ರಯ,
ಹಿಂದೂ ಮಹಾಸಭಾ, ವಿಶ್ವಹಿಂದೂ ಪರಿಷತ್,
ಆರೆಸ್ಸೆಸ್ಸು, ಭಜರಂಗದಳದ ಅಲೆಗಳೆಲ್ಲಾ
ಸಂಘ ಸಂಯಮಗೊಂಡ ಸಮುಚ್ಛಯಗಳು.

5
ನಮಸ್ತೆ ಸದಾವತ್ಸಲೇ ಸಾಗರ:
ಸೂರ್ಯನ ಜೊತೆಗೆ ನಿನ್ನ ಗೆಳೆತನ ಹಳೆಯದು,
ನನ್ನ ಸಂಘ ಪರಿವಾರದ ಗೆಳೆತನವೂ ಹಳೆಯದು.
ಜೀವಂತ ಜಲ ನೀನು,
ನಿನ್ನನ್ನು ಕುಡಿದು, ಹೊರಬಿಡುವ ಜನ್ಮವಷ್ಟೇ ನನ್ನದು.
ನೀನು ಆಗಸವನ್ನ ಚುಂಬಿಸುತ್ತೀ,
ನಾನೇನು ಚುಂಬಿಸಲೀ,
ಚುಂಬನದಿಂದ ವಂಚಿತ ನಾನು.
ನೀನು ಮೋಡವಾಗಿ ಮಳೆ ಸುರಿಸುತ್ತಿ,
ನಾನು ಜನಸಾಗರದ ಮೇಲೆ ಸುಳ್ಳು ಸುರಿಸುತ್ತೇನೆ.
ನೀನು ಮಧುರಭಾವ ಇಟ್ಟುಕೊಂಡಿದ್ದಿ,
ಸಂಘ ಸೇರಿದಾಗಲೇ ನನ್ನ ಮಧುರಭಾವ ಮಾಯವಾಯ್ತು,
ಈಗೇನಿದ್ದರೂ ಮಧುರ ಕಾಶ ತಲೆನೋವಷ್ಟೇ..

6
ಓಂ ನಮೋ ಸದಾವತ್ಸಲೇ ಸಾಗರ:
ಜೀವನದ ಈ ಸೌಂದರ್ಯ ನೀಲಕಂಠನ ಆದರ್ಶ ನಿನ್ನದು,
ಜೀವನದ ಸೌಂದರ್ಯ ಹಾಳುಮಾಡುವುದೇ ನಮ್ಮ ಆದರ್ಶ.
ನೀನು ಭೂಮಿಯ ವಿಷವನ್ನು ಕುಡಿಯುತ್ತಿ,
ನಾವು ಭರತ ಖಂಡಕೆ ವಿಷ ಉಣಿಸುತ್ತೇವೆ.
ನೀನು ಲವಣಾಂಶವನ್ನು ನಿನ್ನಲ್ಲೇ ಇಟ್ಟುಕೊಳ್ಳುವೆ,
ನಾವು ತಡೆಯಲಾಗದೆ ಆಗಾಗ್ಗೆ ಬಿಟ್ಟುಬಿಡುತ್ತೇವೆ.
ನೀನು ಜಗತ್ತಿಗೆ ಹೊಸ ಜೀವನ ನೀಡುತ್ತಿ,
ನಾವು ಜಗತ್ತಿಗೆ ಹೊಸ ನರಕ ಕೊಡುತ್ತಿದ್ದೇವೆ.
ನೀನು ಜೀವನ ನಡೆಸುವ ಮರ್ಮ ನೀಡುತ್ತಿ,
ನಾವು ಜೀವನ ಸರ್ವನಾಶ ಮಾಡುವ ಕರ್ಮ ನೀಡುತ್ತೇವೆ.
ಹೇ ಸಮುದ್ರವೆ, ನಿನಗೆ ನನ್ನ ಶತಸಹಸ್ರ
ಪ್ರಣಾಮಗಳು.
ಥೂ…. ಥೂ….. ಥೂತ್ತೇರಿ!!!

ಸೆ: ಕನ್ನಡ ಕರಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...