Homeಅಂಕಣಗಳುಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ...

ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

- Advertisement -
- Advertisement -

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಧೋರಣೆಯಾಗಿದೆ. ಕೆಲವು ಸಾರ್ವಜನಿಕ ವಲಯದ ಉದ್ದಿಮೆಗಳು ಅನೇಕ ವರ್ಷದಿಂದ ನಷ್ಟದಲ್ಲಿ ನಡೆಯುತ್ತಿವೆ. ಅವುಗಳನ್ನು ಮುಚ್ಚಲು ಅಭ್ಯಂತರವಿಲ್ಲ. ಆದರೆ ಕೆಲವು ಲಾಭದಾಯಕವಾದ ಸಂಸ್ಥೆಗಳನ್ನು ಅವುಗಳನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಷ್ಟದಲ್ಲಿ ನಡೆಯುವಂತೆ ಮಾಡಿ ಕಬಳಿಸಿದ್ದೂ ಉಂಟು.

ಭಾರತದ ಆಭರಣಗಳೆಂದು ಕರೆಯಲ್ಪಡುತ್ತಿದ್ದ ಸಾರ್ವಜನಿಕವಲಯದ ಉದ್ದಿಮೆಗಳನ್ನು ಜವಹಾರ್‍ಲಾಲ್ ನೆಹರು ಅವರು ಆರಂಭಿಸಿದ್ದರು. ಆ ಹೆಮ್ಮೆಯ ದಿನಗಳು ಆಗಿಹೋಯಿತು. ಈಗ ಅವುಗಳನ್ನೆಲ್ಲ ನಷ್ಟದಲ್ಲಿ ನಡೆಯುತ್ತಿದೆಯೆಂದು ಹೆಸರಿಸಿ ಅವುಗಳನ್ನು ತಮಗೆ ಬೇಕಾದ ಉದ್ದಿಮೆದಾರರಿಗೆ ಮಾರಾಟ ಮಾಡುವ ಹುನ್ನಾರ ನಡದಿದೆ. ಉದಾಹರಣೆಗೆ BEML, BEL ಮುಂತಾದ ಲಾಭದಾಯಕ ಉದ್ಯಮಗಳನ್ನು ಮಾರಾಟ ಮಾಡುವ ವಿಚಾರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಸ್ವಾತಂತ್ರ್ಯ ಬಂದ ಮೊದಲ ಕೆಲವು ವರ್ಷಗಳ ಕಾಲ ಖಾಸಗಿ ಉದ್ದಿಮೆದಾರರು ಲಕ್ಷಾಂತರ ಹಣ ಹೂಡಿ ಉದ್ಯಮಗಳನ್ನು ಆರಂಭಿಸಲು ಬಂಡವಾಳ ಹಾಕಲು ಹಿಂದೇಟು ಹಾಕುತ್ತಿದ್ದರು. ಅಂತಹ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮಗಳಿಗೆ ನೆಹರು ಅವರು ಉತ್ತೇಜನ ಕೊಟ್ಟರು. ಅವೆಲ್ಲ ಲಾಭದಾಯಕ ಸಂಸ್ಥೆಗಳಾಗಿ ಮುಂದುವರೆದವು. ಅದರಿಂದ ದೇಶದ ಆರ್ಥಿಕತೆ ದೌಡಾಯಿಸಿತು. ಆರ್ಥಿಕ ಪ್ರಗತಿ ಆಯಿತು.

ನೆಹರು ಅವರು ಈ ಸರ್ಕಾರಿ ಉದ್ಯಮಗಳನ್ನು ಆರಂಭಿಸಲು ಮತ್ತೊಂದು ಪ್ರಬಲ ಉದ್ದೇಶವಿತ್ತು. ಅದೇನೆಂದರೆ ಜನತೆಗೆ ಉದ್ಯೋಗ ಒದಗಿಸುವುದು. ಉದ್ಯಮೀಕರಣ ದಾಪುಗಾಲಿಟ್ಟಿತಾದರೂ ಜನತೆಗೆ ಉದ್ಯೋಗ ಒದಗಿಸುವ ಗುರಿ ತಲುಪಲಾಗಲಿಲ್ಲ. ನಿರ್ವಹಣೆಯ ಅನಾದರದಿಂದ ಹಾಗೂ ಕಾರ್ಮಿಕ ಸಂಘಟನೆಗಳ ಕಾಟದಿಂದ ಉದ್ಯಮಗಳು ಸೊರಗಲು ಆರಂಭವಾದವು.

ಕೇಂದ್ರದಿಂದ ಆರಂಭವಾದ ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿಯೇ ನಡೆದವಾದರೂ, ರಾಜ್ಯಗಳು ಆರಂಭಿಸಿದ ಸಾರ್ವಜನಿಕ ವಲಯದ ಉದ್ಯಮಗಳು ಕಾಲಕ್ರಮೇಣ ನೆಲಕಚ್ಚಿದವು. ಅವುಗಳಿಗೆ ಆಕ್ಸಿಜನ್ ಕೊಟ್ಟು ಜೀವಂತವಾಗಿಡಲು ವರ್ಷ ವರ್ಷ ಲಕ್ಷಾಂತರ ರೂಗಳನ್ನು ಕೇಂದ್ರ ಸರ್ಕಾರ ಒದಗಿಸಬೇಕಾಯಿತು.

1991ರಲ್ಲಿ ಉದಾರೀಕರಣ ಖಾಸಗೀಕರಣದತ್ತ ಸರ್ಕಾರ ವಾಲಿತು. ಈ ರಾಷ್ಟ್ರೀಕೃತ ಉದ್ಯಮಗಳಿಗಿಂತ ಉತ್ತಮವಾಗಿ ಖಾಸಗಿ ಉದ್ಯಮಗಳು ನಡೆಯುತ್ತಿದ್ದುದರಿಂದ ಸರ್ಕಾರಿ ಉದ್ಯಮಗಳನ್ನು ಸರ್ಕಾರ ಸ್ಥಗಿತ ಗೊಳಿಸಿದವು. ಅವುಗಳ ಷೇರುಗಳನ್ನು ಮಾರಲು ಆರಂಭವಾಯಿತು. ಸರ್ಕಾರ ಕೆಲವು ಕಂಪನಿಗಳ ಷೇರುಗಳನ್ನು ಸಂಪೂರ್ಣವಾಗಿ ಇನ್ನು ಕೆಲವು ಕಂಪನಿಗಳ ಷೇರುಗಳನ್ನು ಭಾಗಶಃ ಮಾರಾಟ ಮಾಡಿದವು ಈ ನಿಲುವಿಗೆ ಸರ್ಕಾರ ತನ್ನ ಸಮರ್ಥನೆ ನೀಡಿತು.

ಪ್ರವಾಸೋದ್ಯಮ, ಹೊಟೇಲ್ ನಡೆಸುವುದು ದಿನಬಳಕೆಯ ವಸ್ತುಗಳ ಉತ್ಪಾದನೆ, ಸಾರಿಗೆವಾಹನಗಳ ಉತ್ಪಾದನೆಗಳನ್ನು ಖಾಸಗಿ ಉದ್ಯಮಿಗಳು ಯಶಸ್ವಿಯಾಗಿ ನಡೆಸುವರಾಗಿದ್ದರಿಂದ ಸರ್ಕಾರ ಈ ಉದ್ಯಮಗಳಿಗೆ ಕೈಹಾಕಬಾರದು. ಸಾರ್ವಜನಿಕ ಉದ್ಯಮಗಳ ಆರೋಗ್ಯಕ್ಕೆ ಸಂಬಂಧಪಟ್ಟ ವಿದ್ಯಮಾನಗಳನ್ನು ಬಲಪಡಿಸುವುದು ಸರ್ಕಾರದ ನಿಲುವಾಯಿತು.

ತದನಂತರ ಅಸ್ತಿತ್ವಕ್ಕೆ ಬಂದ ಸರ್ಕಾರಗಳೂ ಲಾಭದಾಯಕವಾಗಿ ನಡೆಯುತ್ತಿದ್ದ ಸಾರ್ವಜನಿಕ ಉದ್ದಿಮೆಗಳ ಷೇರುಗಳನ್ನು ಮಾರಾಟ ಮಾಡಿ ಒಂದು ಲಕ್ಷ ಕೋಟಿ ರೂಗಳ ಬಂಡವಾಳ ಹಿಂಪಡೆಯಬೇಕೆಂದು ನಿರ್ಧರಿಸಿದವು. ಸಾರ್ವಜನಿಕ ವಲಯದ ಉದ್ಯಮಗಳನ್ನು ಬೆಳೆಸುವುದು ಅನವಶ್ಯಕ. ಖಾಸಗೀಕರಣವೇ ಮುಕ್ತಿದಾಯಕ ಎಂದು ಸರ್ಕಾರ ಭಾವಿಸಿತು. ಸಾರ್ವಜನಿಕ ವಲಯದ ಉದ್ಯಮಗಳ ಷೇರುಗಳ ಮಾರಾಟದ ಜೊತೆಗೆ ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ಖಾಸಗೀಕರಣ ಮಾಡತೊಡಗಿದವು. ಹಣಕಾಸಿನ ಕೊರತೆ ಖಾಸಗೀಕರಣಕ್ಕೆ ಕಾರಣ ಎಂದು ಸಬೂಬು ಹೇಳಿತು. ಭಾರತ್ ಪೆಟ್ರೋಲಿಯಂನಂತಹ ಲಾಭದಾಯಕ, ಪ್ರತಿಷ್ಠಿತ ಉದ್ಯಮದ ಷೇರುಗಳನ್ನು ಕೂಡ ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ದುರ್ದೈವ.

ಸಾಮಾನ್ಯ ಜನರಿಗೆ ಆರೋಗ್ಯ ಕಾಪಾಡಿಕೊಳ್ಳಲು, ಉತ್ತಮ ಶಿಕ್ಷಣ ಪಡೆಯಲು ಇದ್ದ ಅವಕಾಶವನ್ನು ಸರ್ಕಾರ ಲಾಭಕೋರ ಖಾಸಗಿ ಸಂಸ್ಥೆಗಳಿಗೆ ವಹಿಸಿ ಪ್ರಜಾದ್ರೋಹ ಎಸಗಲಾಗಿದೆ.

ಅದರಂತೆಯೇ ಷಿಪ್ಪಿಂಗ್ ಇಂಡಸ್ಟ್ರಿ ಆಫ್ ಇಂಡಿಯಾ ಮತ್ತು ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ ಕಂಪನಿಗಳ ಷೇರುಗಳನ್ನು ಮಾರಾಟ ಮಾಡಲು ತೀರ್ಮಾನಿಸಿರುವುದರ ಲಾಜಿಕ್ ಏನು ಎಂಬುದು ಒಂದು ಚಿದಂಬರ ರಹಸ್ಯವಾಗಿದೆ. ಒಟ್ಟಿನಲ್ಲಿ ಈ ಎಲ್ಲಾ ಸಾರ್ವಜನಿಕ ಸೇವಾಉದ್ಯಮಗಳ ಶೇ.51ರಷ್ಟು ಷೇರುಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಇದಕ್ಕಿರುವ ಏಕೈಕ ಕಾರಣ ಇಂದಿನ ಸರ್ಕಾರಕ್ಕೆ ಉಡಾಯಿಸಲು ಹಣ ಬೇಕು. ಅದೇ ದೃಷ್ಟಿಯಿಂದ ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿನಲ್ಲಿ ಒಂದು ಭಾಗ ಅಂದರೆ ಎಷ್ಟೋ ಕೋಟಿ ಹಣ ಸರ್ಕಾರಕ್ಕೆ ಕೊಡಿ ಎಂಬ ಒತ್ತಾಯ ಬಂದಿದೆ. ನವರತ್ನಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಂಪನಿಯನ್ನು ಮಾರಲು ಹೊರಟಿವುದರ ರಹಸ್ಯವೇನು? ಇದರಿಂದ ನಾವು ಕಲಿಯಬಹುದಾದ ಪಾಠ ಯಾವುದು?

ಲಾಭದಾಯಕವೋ, ನಷ್ಟವೋ PSUಗಳನ್ನು ಮಾರಾಟ ಮಾಡುವುದು ನಮ್ಮ ಧ್ಯೇಯ ಎಂದು ಸರ್ಕಾರ ಭಾವಿಸಿರಬಹುದು.

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

PSUಗಳನ್ನು ಮುಗಿಸುವುದಕ್ಕೆ ಕಾರಣಗಳೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿಗೆ ಏಕೆ ಲಗ್ಗೆ ಹಾಕಬೇಕು ಎಂಬುದನ್ನು ಜನತೆಗೆ ಸ್ಪಷ್ಟ ನುಡಿಗಳಲ್ಲಿ ಮನವರಿಕೆ ಮಾಡಿಕೊಡಬೇಕು. ಈ ಬಗೆಗೆ ಸರ್ಕಾರದ ಪಾಲಿಸಿ ಏನು ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಬೇಕು. PSUಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಮ್ಮ ಭವಿಷ್ಯದ ಬಗೆಗೆ ಗಾಬರಿ ಉಂಟಾಗುತ್ತದೆ.

ಚುನಾಯಿತ ಸರ್ಕಾರ ಅಭಿವೃದ್ಧಿ ಮತ್ತು ಸಮಾನತೆಗೆ ಬದ್ಧನಾಗಿರಬೇಕು. ಅಭಿವೃದ್ಧಿಯ ಎಲ್ಲ ಆಯಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳೇ ನಿರ್ಧರಿಸುವುದಾದರೆ ಜನಸಾಮಾನ್ಯರ ಪಾಡೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...