Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...