Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...