Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...